AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 4th Wave: ಕೊರೊನಾವೈರಸ್ 4ನೇ ಅಲೆ ಭೀತಿ; ಭಾರತದಲ್ಲಿ ಹೊಸ ಕ್ವಾರಂಟೈನ್ ನಿಯಮ, ಚಿಕಿತ್ಸೆಯ ವಿಧಾನ ಹೇಗಿದೆ?

ಭಾರತದಲ್ಲಿ ಸದ್ಯಕ್ಕೆ ಕೊವಿಡ್ ನಿಯಮಗಳು, ಕ್ವಾರಂಟೈನ್​ ನಿಯಮಗಳು ಹೇಗಿವೆ? ಚಿಕಿತ್ಸೆ ಪಡೆಯುವ ವಿಧಾನ ಹೇಗೆ? ಇಲ್ಲಿದೆ ಪೂರ್ತಿ ಮಾಹಿತಿ.

Covid 4th Wave: ಕೊರೊನಾವೈರಸ್ 4ನೇ ಅಲೆ ಭೀತಿ; ಭಾರತದಲ್ಲಿ ಹೊಸ ಕ್ವಾರಂಟೈನ್ ನಿಯಮ, ಚಿಕಿತ್ಸೆಯ ವಿಧಾನ ಹೇಗಿದೆ?
ಸಾಂಕೇತಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Jun 14, 2022 | 4:23 PM

Share

ನವದೆಹಲಿ: ಭಾರತದಲ್ಲಿ ಕೊವಿಡ್-19 ಪ್ರಕರಣಗಳು (COVID -19 Cases) ಮತ್ತೊಮ್ಮೆ ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳಿಂದ ದಿನಕ್ಕೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಈ ಹಿಂದೆ ಐಐಟಿಯ ವಿಜ್ಞಾನಿಗಳು ಜೂನ್ 22ರ ನಂತರ ಕೊವಿಡ್ ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಸಾಧ್ಯತೆಗಳಿವೆ ಎಂದಿದ್ದರು. ಹಾಗಾದರೆ, ಭಾರತದಲ್ಲಿ ಸದ್ಯಕ್ಕೆ ಕೊವಿಡ್ ನಿಯಮಗಳು, ಕ್ವಾರಂಟೈನ್​ ನಿಯಮಗಳು ಹೇಗಿವೆ? ಚಿಕಿತ್ಸೆ ಪಡೆಯುವ ವಿಧಾನ ಹೇಗೆ? ಇಲ್ಲಿದೆ ಪೂರ್ತಿ ಮಾಹಿತಿ.

ಕೊವಿಡ್ -19 ಸೋಂಕಿಗೆ ಒಳಗಾದ ವ್ಯಕ್ತಿಯನ್ನು ಎಷ್ಟು ದಿನ ಕ್ವಾರಂಟೈನ್​​ನಲ್ಲಿಡಬೇಕು, ಆಸ್ಪತ್ರೆಗೆ ದಾಖಲಾಗಬೇಕೆಂದರೆ ರೋಗಲಕ್ಷಣಗಳು ಯಾವ ರೀತಿಯಲ್ಲಿರುತ್ತದೆ? ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ನಿಯಮಾವಳಿಯ ಪ್ರಕಾರ, ಸೌಮ್ಯ ಪ್ರಕರಣಗಳನ್ನು ಹೊಂದಿರುವ ರೋಗಿಗಳನ್ನು ಕೊವಿಡ್ ಕೇರ್ ಫೆಸಿಲಿಟಿಗೆ ದಾಖಲಿಸಬೇಕಾಗುತ್ತದೆ. ಅಥವಾ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಈ ಸಮಯದಲ್ಲಿ ರೋಗಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಕೊವಿಡ್ ಪಾಸಿಟಿವ್ ಪರೀಕ್ಷೆಯ ನಂತರ ಕೊರೊನಾವೈರಸ್ ರೋಗಿಯು 7 ದಿನಗಳ ಕಾಲ ಕೋವಿಡ್ ಕೇರ್ ಫೆಸಿಲಿಟಿಯಲ್ಲಿ ಅಥವಾ ಮನೆಯಲ್ಲಿ ಪ್ರತ್ಯೇಕವಾಗಿರಬೇಕಾಗುತ್ತದೆ.

ಆದರೆ, ಈ ಅವಧಿಯಲ್ಲಿ ಜ್ವರವು 3 ದಿನಗಳಲ್ಲಿ ಕೊನೆಗೊಳ್ಳಬೇಕು. ಹಾಗೇನಾದರೂ ಜ್ವರ ಕಡಿಮೆಯಾದರೆ ಡಿಸ್ಚಾರ್ಜ್ ಮಾಡುವ ಮೊದಲು ರೋಗಿಯನ್ನು ಪುನಃ ಪರೀಕ್ಷಿಸುವ ಅಗತ್ಯವಿಲ್ಲ. ಕೊವಿಡ್ ರೋಗಲಕ್ಷಣಗಳು ಸ್ವಲ್ಪ ಹೆಚ್ಚಾದರೆ ರೋಗಿಯನ್ನು ಮೀಸಲಾದ ಕೊವಿಡ್ ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ಕೊರೊನಾ ರೋಗಿಯ ಆಮ್ಲಜನಕದ ಮಟ್ಟವು 93ಕ್ಕಿಂತ ಕಡಿಮೆಯಿದ್ದರೆ ಅಥವಾ ಸೋಂಕಿತರಿಗೆ ತೀವ್ರತರವಾದ ರೋಗಲಕ್ಷಣಗಳಿದ್ದರೆ ಆ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ.

ಇದನ್ನೂ ಓದಿ
Image
National Herald Case: ರಾಹುಲ್, ಸೋನಿಯಾ ಗಾಂಧಿಯ ಆತ್ಮವಿಶ್ವಾಸ ಕುಗ್ಗಿಸಲು ಇಡಿ ದಾಳಿ; ಮಲ್ಲಿಕಾರ್ಜುನ ಖರ್ಗೆ ಆರೋಪ
Image
ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕಾಂಗ್ರೆಸ್ ನಾಯಕ; ವಿಡಿಯೋ ಮೂಲಕ ಟ್ರೋಲ್ ಮಾಡಿದ ಬಿಜೆಪಿ
Image
ರಾಹುಲ್ ಗಾಂಧಿ ಕಂಡರೆ ಬಿಜೆಪಿಗೆ ಭಯ: ರಣದೀಪ್ ಸುರ್ಜೇವಾಲ ವ್ಯಂಗ್ಯ

ಇದನ್ನೂ ಓದಿ: India Covid Updates: ಕೊರೊನಾ 4ನೇ ಅಲೆ ಆತಂಕ: ದೇಶದಲ್ಲಿ 7240 ಮಂದಿಗೆ ಕೊರೊನಾ ಸೋಂಕು

ಕೊವಿಡ್ ರೋಗಿಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೆ ಮತ್ತು ಆಮ್ಲಜನಕದ ಬೆಂಬಲವಿಲ್ಲದೆ ಸತತ ಮೂರು ದಿನಗಳವರೆಗೆ ಆಮ್ಲಜನಕದ ಮಟ್ಟವು ಶೇ. 93ಕ್ಕಿಂತ ಹೆಚ್ಚಿದ್ದರೆ ಚಿಕಿತ್ಸೆ ನೀಡುವ ವೈದ್ಯಕೀಯ ಅಧಿಕಾರಿಯ ಅಭಿಪ್ರಾಯದ ನಂತರ, ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು. ಆಗ ಮತ್ತೆ ಪರೀಕ್ಷೆಯ ಅಗತ್ಯವಿರುವುದಿಲ್ಲ.

ಒಂದುವೇಳೆ ರೋಗಿಗೆ ಗಂಭೀರ ಲಕ್ಷಣಗಳು ಕಾಣಿಸಿದರೆ ಹೆಚ್ಚು ಎಚ್ಚರ ವಹಿಸುವುದು ಅತ್ಯಗತ್ಯ. ಹೆಚ್ಐವಿ ರೋಗಿಗಳು, ಕಸಿ ರೋಗಿಗಳು, ಮಾರಣಾಂತಿಕ ರೋಗಿಗಳಂತಹ ಗಂಭೀರ ರೋಗಿಗಳು ಅಥವಾ ಇಮ್ಯುನೊಕಾಂಪ್ರೊಮೈಸ್ಡ್ ರೋಗಿಗಳು ನಿರ್ದಿಷ್ಟ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಬೇಕಾಗುತ್ತದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅವರಿಗೆ ಚಿಕಿತ್ಸೆ ನೀಡಲಾಗುವುದು. ಆದರೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಅಧಿಕಾರಿ ಆ ರೋಗಿಯನ್ನು ಮನೆಗೆ ಕರೆದೊಯ್ಯಲು ಅನುಮತಿಸುವುದಿಲ್ಲ.

ಕೊವಿಡ್ ನಿಯಮಗಳೇನು?: ಎಲ್ಲಾ ರೋಗಿಗಳಿಗೆ ಪ್ರತ್ಯೇಕವಾಗಿ ಅಥವಾ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ 7 ದಿನಗಳವರೆಗೆ ಹೆಚ್ಚು ಎಚ್ಚರ ವಹಿಸಲು ಸಚಿವಾಲಯವು ಸಲಹೆ ನೀಡುತ್ತಿದೆ. ಅಲ್ಲದೆ, ಎಲ್ಲರೂ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಯಾರಾದರೂ ಜ್ವರ, ಕೆಮ್ಮು, ನೋಯುತ್ತಿರುವ ಗಂಟಲು ಅಥವಾ ಇನ್ನಾವುದೇ ಸಮಸ್ಯೆಯನ್ನು ಅನುಭವಿಸಿದರೆ ಅವರು ತಕ್ಷಣ ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 14 June 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ