Covid 4th Wave: ಕೊರೊನಾವೈರಸ್ 4ನೇ ಅಲೆ ಭೀತಿ; ಭಾರತದಲ್ಲಿ ಹೊಸ ಕ್ವಾರಂಟೈನ್ ನಿಯಮ, ಚಿಕಿತ್ಸೆಯ ವಿಧಾನ ಹೇಗಿದೆ?

ಭಾರತದಲ್ಲಿ ಸದ್ಯಕ್ಕೆ ಕೊವಿಡ್ ನಿಯಮಗಳು, ಕ್ವಾರಂಟೈನ್​ ನಿಯಮಗಳು ಹೇಗಿವೆ? ಚಿಕಿತ್ಸೆ ಪಡೆಯುವ ವಿಧಾನ ಹೇಗೆ? ಇಲ್ಲಿದೆ ಪೂರ್ತಿ ಮಾಹಿತಿ.

Covid 4th Wave: ಕೊರೊನಾವೈರಸ್ 4ನೇ ಅಲೆ ಭೀತಿ; ಭಾರತದಲ್ಲಿ ಹೊಸ ಕ್ವಾರಂಟೈನ್ ನಿಯಮ, ಚಿಕಿತ್ಸೆಯ ವಿಧಾನ ಹೇಗಿದೆ?
ಸಾಂಕೇತಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on:Jun 14, 2022 | 4:23 PM

ನವದೆಹಲಿ: ಭಾರತದಲ್ಲಿ ಕೊವಿಡ್-19 ಪ್ರಕರಣಗಳು (COVID -19 Cases) ಮತ್ತೊಮ್ಮೆ ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳಿಂದ ದಿನಕ್ಕೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಈ ಹಿಂದೆ ಐಐಟಿಯ ವಿಜ್ಞಾನಿಗಳು ಜೂನ್ 22ರ ನಂತರ ಕೊವಿಡ್ ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಸಾಧ್ಯತೆಗಳಿವೆ ಎಂದಿದ್ದರು. ಹಾಗಾದರೆ, ಭಾರತದಲ್ಲಿ ಸದ್ಯಕ್ಕೆ ಕೊವಿಡ್ ನಿಯಮಗಳು, ಕ್ವಾರಂಟೈನ್​ ನಿಯಮಗಳು ಹೇಗಿವೆ? ಚಿಕಿತ್ಸೆ ಪಡೆಯುವ ವಿಧಾನ ಹೇಗೆ? ಇಲ್ಲಿದೆ ಪೂರ್ತಿ ಮಾಹಿತಿ.

ಕೊವಿಡ್ -19 ಸೋಂಕಿಗೆ ಒಳಗಾದ ವ್ಯಕ್ತಿಯನ್ನು ಎಷ್ಟು ದಿನ ಕ್ವಾರಂಟೈನ್​​ನಲ್ಲಿಡಬೇಕು, ಆಸ್ಪತ್ರೆಗೆ ದಾಖಲಾಗಬೇಕೆಂದರೆ ರೋಗಲಕ್ಷಣಗಳು ಯಾವ ರೀತಿಯಲ್ಲಿರುತ್ತದೆ? ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ನಿಯಮಾವಳಿಯ ಪ್ರಕಾರ, ಸೌಮ್ಯ ಪ್ರಕರಣಗಳನ್ನು ಹೊಂದಿರುವ ರೋಗಿಗಳನ್ನು ಕೊವಿಡ್ ಕೇರ್ ಫೆಸಿಲಿಟಿಗೆ ದಾಖಲಿಸಬೇಕಾಗುತ್ತದೆ. ಅಥವಾ ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಈ ಸಮಯದಲ್ಲಿ ರೋಗಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಕೊವಿಡ್ ಪಾಸಿಟಿವ್ ಪರೀಕ್ಷೆಯ ನಂತರ ಕೊರೊನಾವೈರಸ್ ರೋಗಿಯು 7 ದಿನಗಳ ಕಾಲ ಕೋವಿಡ್ ಕೇರ್ ಫೆಸಿಲಿಟಿಯಲ್ಲಿ ಅಥವಾ ಮನೆಯಲ್ಲಿ ಪ್ರತ್ಯೇಕವಾಗಿರಬೇಕಾಗುತ್ತದೆ.

ಆದರೆ, ಈ ಅವಧಿಯಲ್ಲಿ ಜ್ವರವು 3 ದಿನಗಳಲ್ಲಿ ಕೊನೆಗೊಳ್ಳಬೇಕು. ಹಾಗೇನಾದರೂ ಜ್ವರ ಕಡಿಮೆಯಾದರೆ ಡಿಸ್ಚಾರ್ಜ್ ಮಾಡುವ ಮೊದಲು ರೋಗಿಯನ್ನು ಪುನಃ ಪರೀಕ್ಷಿಸುವ ಅಗತ್ಯವಿಲ್ಲ. ಕೊವಿಡ್ ರೋಗಲಕ್ಷಣಗಳು ಸ್ವಲ್ಪ ಹೆಚ್ಚಾದರೆ ರೋಗಿಯನ್ನು ಮೀಸಲಾದ ಕೊವಿಡ್ ಆಸ್ಪತ್ರೆಗೆ ದಾಖಲಿಸಬೇಕಾಗುತ್ತದೆ. ಕೊರೊನಾ ರೋಗಿಯ ಆಮ್ಲಜನಕದ ಮಟ್ಟವು 93ಕ್ಕಿಂತ ಕಡಿಮೆಯಿದ್ದರೆ ಅಥವಾ ಸೋಂಕಿತರಿಗೆ ತೀವ್ರತರವಾದ ರೋಗಲಕ್ಷಣಗಳಿದ್ದರೆ ಆ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ.

ಇದನ್ನೂ ಓದಿ
Image
National Herald Case: ರಾಹುಲ್, ಸೋನಿಯಾ ಗಾಂಧಿಯ ಆತ್ಮವಿಶ್ವಾಸ ಕುಗ್ಗಿಸಲು ಇಡಿ ದಾಳಿ; ಮಲ್ಲಿಕಾರ್ಜುನ ಖರ್ಗೆ ಆರೋಪ
Image
ಬಂಧಿಸಲು ಬಂದ ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕಾಂಗ್ರೆಸ್ ನಾಯಕ; ವಿಡಿಯೋ ಮೂಲಕ ಟ್ರೋಲ್ ಮಾಡಿದ ಬಿಜೆಪಿ
Image
ರಾಹುಲ್ ಗಾಂಧಿ ಕಂಡರೆ ಬಿಜೆಪಿಗೆ ಭಯ: ರಣದೀಪ್ ಸುರ್ಜೇವಾಲ ವ್ಯಂಗ್ಯ

ಇದನ್ನೂ ಓದಿ: India Covid Updates: ಕೊರೊನಾ 4ನೇ ಅಲೆ ಆತಂಕ: ದೇಶದಲ್ಲಿ 7240 ಮಂದಿಗೆ ಕೊರೊನಾ ಸೋಂಕು

ಕೊವಿಡ್ ರೋಗಿಗೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೆ ಮತ್ತು ಆಮ್ಲಜನಕದ ಬೆಂಬಲವಿಲ್ಲದೆ ಸತತ ಮೂರು ದಿನಗಳವರೆಗೆ ಆಮ್ಲಜನಕದ ಮಟ್ಟವು ಶೇ. 93ಕ್ಕಿಂತ ಹೆಚ್ಚಿದ್ದರೆ ಚಿಕಿತ್ಸೆ ನೀಡುವ ವೈದ್ಯಕೀಯ ಅಧಿಕಾರಿಯ ಅಭಿಪ್ರಾಯದ ನಂತರ, ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು. ಆಗ ಮತ್ತೆ ಪರೀಕ್ಷೆಯ ಅಗತ್ಯವಿರುವುದಿಲ್ಲ.

ಒಂದುವೇಳೆ ರೋಗಿಗೆ ಗಂಭೀರ ಲಕ್ಷಣಗಳು ಕಾಣಿಸಿದರೆ ಹೆಚ್ಚು ಎಚ್ಚರ ವಹಿಸುವುದು ಅತ್ಯಗತ್ಯ. ಹೆಚ್ಐವಿ ರೋಗಿಗಳು, ಕಸಿ ರೋಗಿಗಳು, ಮಾರಣಾಂತಿಕ ರೋಗಿಗಳಂತಹ ಗಂಭೀರ ರೋಗಿಗಳು ಅಥವಾ ಇಮ್ಯುನೊಕಾಂಪ್ರೊಮೈಸ್ಡ್ ರೋಗಿಗಳು ನಿರ್ದಿಷ್ಟ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಬೇಕಾಗುತ್ತದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಅವರಿಗೆ ಚಿಕಿತ್ಸೆ ನೀಡಲಾಗುವುದು. ಆದರೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಅಧಿಕಾರಿ ಆ ರೋಗಿಯನ್ನು ಮನೆಗೆ ಕರೆದೊಯ್ಯಲು ಅನುಮತಿಸುವುದಿಲ್ಲ.

ಕೊವಿಡ್ ನಿಯಮಗಳೇನು?: ಎಲ್ಲಾ ರೋಗಿಗಳಿಗೆ ಪ್ರತ್ಯೇಕವಾಗಿ ಅಥವಾ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ 7 ದಿನಗಳವರೆಗೆ ಹೆಚ್ಚು ಎಚ್ಚರ ವಹಿಸಲು ಸಚಿವಾಲಯವು ಸಲಹೆ ನೀಡುತ್ತಿದೆ. ಅಲ್ಲದೆ, ಎಲ್ಲರೂ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಯಾರಾದರೂ ಜ್ವರ, ಕೆಮ್ಮು, ನೋಯುತ್ತಿರುವ ಗಂಟಲು ಅಥವಾ ಇನ್ನಾವುದೇ ಸಮಸ್ಯೆಯನ್ನು ಅನುಭವಿಸಿದರೆ ಅವರು ತಕ್ಷಣ ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 14 June 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ