AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಕೊವಿಡ್​ ಕೇಂದ್ರದಲ್ಲಿಯೇ ಆಕ್ಸಿಜನ್ ಘಟಕ ಸ್ಥಾಪನೆ; ರಾಷ್ಟ್ರರಾಜಧಾನಿಯಲ್ಲೇ ಮೊದಲ ಪ್ರಯೋಗ ಇದು

ಏಕಕಾಲದಲ್ಲಿ ಸುಮಾರು 18-20 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡಬಲ್ಲ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಎಎನ್​​ಐ ವರದಿ ಮಾಡಿದೆ.

Oxygen Shortage: ಕೊವಿಡ್​ ಕೇಂದ್ರದಲ್ಲಿಯೇ ಆಕ್ಸಿಜನ್ ಘಟಕ ಸ್ಥಾಪನೆ; ರಾಷ್ಟ್ರರಾಜಧಾನಿಯಲ್ಲೇ ಮೊದಲ ಪ್ರಯೋಗ ಇದು
ಆಕ್ಸಿಜನ್ ಉತ್ಪಾದನಾ ಘಟಕ
Follow us
Lakshmi Hegde
|

Updated on: May 03, 2021 | 3:38 PM

ರಾಷ್ಟ್ರರಾಜಧಾನಿ ದೆಹಲಿಯಲ್ಲಂತೂ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಈಗಾಗಲೇ ಮೂರ್ನಾಲ್ಕು ಆಸ್ಪತ್ರೆಗಳಲ್ಲಿ ರೋಗಿಗಳು ಆಮ್ಲಜನಕವಿಲ್ಲದೆ ಸಾವನ್ನಪ್ಪಿದ್ದಾರೆ. ಈ ಅವಸ್ಥೆಯನ್ನು ತಪ್ಪಿಸಲು ಪ್ರಯತ್ನಗಳು ಶುರುವಾಗಿದ್ದು, ಅದರ ಮೊದಲ ಹಂತವಾಗಿ ದೆಹಲಿಯ ಅಕ್ಷರಧಾಮ ದೇವಾಲಯದ ಬಳಿ ಇರುವ ಕಾಮನ್​​ವೆಲ್ತ್​​ ಗೇಮ್​ ವಿಲೇಜ್​ ಕ್ರೀಡಾ ಸಂಕೀರ್ಣದಲ್ಲಿ ಆಕ್ಸಿಜನ್ ಘಟಕವುಳ್ಳ ಕೊವಿಡ್ 19 ಕೇಂದ್ರವನ್ನು ನಿರ್ಮಿಸಲಾಗಿದೆ. ಆಕ್ಸಿಜನ್ ಉತ್ಪಾದನಾ ಘಟಕವೂ ಇರುವ ಮೊದಲ ಕೊವಿಡ್ ಕೇಂದ್ರ ಇದಾಗಿದೆ.

ಏಕಕಾಲದಲ್ಲಿ ಸುಮಾರು 18-20 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡಬಲ್ಲ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಎಎನ್​​ಐ ವರದಿ ಮಾಡಿದೆ. ಸದ್ಯ ಎದುರಾಗಿರುವ ಆಕ್ಸಿಜನ್​ ಕೊರತೆಯನ್ನು ನೀಗಿಸುವ ಸಲುವಾಗಿ ಕೊವಿಡ್ ಕೇಂದ್ರದಲ್ಲಿಯೇ ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ ಎಂದು ಈ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಅನುರಾಗ್​ ಮಿಶ್ರಾ ತಿಳಿಸಿದ್ದಾರೆ. ಈ ಘಟಕವನ್ನು ಎಚ್​ಸಿಎಲ್​ ಫೌಂಡೇಶನ್​​ ನೀಡಿದ್ದು, ಅವರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ನಾವೀಗ ಆಕ್ಸಿಜನ್​ಗಾಗಿ ಪೂರೈಕೆದಾರರ ಮೇಲೆ ಅವಲಂಬಿತರಾಗಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.

ದೇಶಾದ್ಯಂತ ಹಲವು ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಎದುರಾಗಿದೆ. ಅದರಲ್ಲೂ ದೆಹಲಿಯಲ್ಲಂತೂ ಹಲವು ಆಸ್ಪತ್ರೆಗಳು ಆಕ್ಸಿಜನ್ ಇಲ್ಲದೆ ಹೈಕೋರ್ಟ್ ಮೆಟ್ಟಿಲನ್ನೂ ಏರಿವೆ. ಇತ್ತೀಚೆಗಷ್ಟೇ ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಓರ್ವ ಹಿರಿಯ ವೈದ್ಯ ಸೇರಿ 12 ರೋಗಿಗಳು ಆಕ್ಸಿಜನ್ ಇಲ್ಲದೆ ಮೃತಪಟ್ಟಿದ್ದರು. ನಿನ್ನೆ ಇಲ್ಲಿನ ಆಕಾಶ್​ ಹೆಲ್ತ್​ಕೇರ್ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಆಮ್ಲಜನಕಕ್ಕಾಗಿ ಬೇಡಿಕೆ ಇಟ್ಟಿದೆ. ನಮ್ಮಲ್ಲಿ 250 ರೋಗಿಗಳು ಇದ್ದಾರೆ. ಸರಿಯಾದ ಸಮಯಕ್ಕೆ ಆಮ್ಲಜನಕ ಸಿಗದೆ ಇದ್ದರೆ ಸಾವು ನೋವಾಗುತ್ತದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಸಹಾಯ ಮಾಡುವಂತೆ ಮನವಿ ಮಾಡಿದೆ.

COVID care centre with its own oxygen plant to beat the shortage in Delhi

ಇದನ್ನೂ ಓದಿ: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​

ಬಾಗಲಕೋಟೆಯಲ್ಲಿ ರೆಮ್​ಡೆಸಿವರ್ ಮಾರಾಟ ಮಾಡುತ್ತಿದ್ದ 10 ಜನರ ಬಂಧನ; ಜಿಲ್ಲಾಸ್ಪತ್ರೆ ನಿಷ್ಕಾಳಜಿ ಬಗ್ಗೆ ಮುಂದುವರಿದ ತನಿಖೆ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ