AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಕೋವಿಡ್ ಪ್ರಕರಣ ಏರಿಕೆ; ಸೋಂಕು ಹರಡದಂತೆ ಕಟ್ಟುನಿಟ್ಟಾದ ನಿಗಾ ವಹಿಸಲು 6 ರಾಜ್ಯಗಳಿಗೆ ಕೇಂದ್ರ ಪತ್ರ

ಆದಾಗ್ಯೂ, ಕಳೆದ ಕೆಲವು ವಾರಗಳಿಂದ ನಿರ್ದಿಷ್ಟವಾಗಿ ದೇಶದ ಕೆಲವು ಭಾಗಗಳಲ್ಲಿ ಪ್ರಕರಣಗಳ ಹೆಚ್ಚಳವನ್ನು ಗಮನಿಸಲಾಗಿದೆ. ಮಾರ್ಚ್ 8ಕ್ಕೆ ಕೊನೆಗೊಂಡ ವಾರದಲ್ಲಿ ಒಟ್ಟು 2,082 ಪ್ರಕರಣಗಳು ವರದಿಯಾಗಿದ್ದು ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 3,264 ಪ್ರಕರಣಗಳಷ್ಟು ಏರಿಕೆ ಆಗಿದೆ.

ದೇಶದಲ್ಲಿ ಕೋವಿಡ್ ಪ್ರಕರಣ ಏರಿಕೆ; ಸೋಂಕು ಹರಡದಂತೆ ಕಟ್ಟುನಿಟ್ಟಾದ ನಿಗಾ ವಹಿಸಲು 6 ರಾಜ್ಯಗಳಿಗೆ ಕೇಂದ್ರ ಪತ್ರ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Mar 16, 2023 | 8:50 PM

ಭಾರತವು ದೈನಂದಿನ ಕೋವಿಡ್ -19 (Covid 19) ಪ್ರಕರಣಗಳಲ್ಲಿ ಹೆಚ್ಚಳವನ್ನು ದಾಖಲಿಸುತ್ತಿದ್ದಂತೆ, ಕೊರೊನಾ ವೈರಸ್ (Coronavirus) ಹರಡುವಿಕೆಯನ್ನು ತಡೆಗಟ್ಟಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸಲು ಕೇಂದ್ರ ಸರ್ಕಾರವು ಆರು ರಾಜ್ಯಗಳಿಗೆ ಹೇಳಿದೆ. ಈ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಜಾಸ್ತಿ ಇದೆ. ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ, ಇದು ಸ್ಥಳೀಯವಾಗಿ ಸೋಂಕಿನ ಹರಡುವಿಕೆಯನ್ನು ಸೂಚಿಸುತ್ತದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ (Rajesh Bhushan) ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಭೂಷಣ್ ಅವರು ಈ ರಾಜ್ಯಗಳಿಗೆ ಕೋವಿಡ್-19 ರ ಪರಿಸ್ಥಿತಿಯನ್ನು ಸೂಕ್ಷ್ಮ ಮಟ್ಟದಲ್ಲಿ ಪರೀಕ್ಷಿಸಲು ಮತ್ತು ರೋಗದ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗಾಗಿ ಅಗತ್ಯ ಕ್ರಮಗಳ ಅನುಷ್ಠಾನದ ಮೇಲೆ ಗಮನಹರಿಸುವಂತೆ ಸಲಹೆ ನೀಡಿದ್ದಾರೆ.ಕಳೆದ ಕೆಲವು ತಿಂಗಳುಗಳಲ್ಲಿ ಭಾರತವು ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವನ್ನು ಗಮನಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಆದಾಗ್ಯೂ, ಕಳೆದ ಕೆಲವು ವಾರಗಳಿಂದ ನಿರ್ದಿಷ್ಟವಾಗಿ ದೇಶದ ಕೆಲವು ಭಾಗಗಳಲ್ಲಿ ಪ್ರಕರಣಗಳ ಹೆಚ್ಚಳವನ್ನು ಗಮನಿಸಲಾಗಿದೆ. ಮಾರ್ಚ್ 8ಕ್ಕೆ ಕೊನೆಗೊಂಡ ವಾರದಲ್ಲಿ ಒಟ್ಟು 2,082 ಪ್ರಕರಣಗಳು ವರದಿಯಾಗಿದ್ದು ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 3,264 ಪ್ರಕರಣಗಳಷ್ಟು ಏರಿಕೆ ಆಗಿದೆ.

ಹೊಸ ಕೊವಿಡ್-19 ಪ್ರಕರಣಗಳ ಹೊಸ ಕ್ಲಸ್ಟರ್‌ಗಳು, ಇನ್ಫ್ಲುಯೆನ್ಸ ತರಹದ ಅನಾರೋಗ್ಯ (ಐಎಲ್‌ಐ) ಮತ್ತು ತೀವ್ರತರವಾದ ಉಸಿರಾಟದ ಸೋಂಕು (ಎಸ್‌ಎಆರ್‌ಐ) ಪ್ರಕರಣಗಳನ್ನು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಅಥವಾ ಮೀಸಲಾದ ಫೀವರ್ ಕ್ಲಿನಿಕ್ ಮೂಲಕ ಮುಂಚಿನ ಎಚ್ಚರಿಕೆಯ ಸಂಕೇತಗಳನ್ನು ಪತ್ತೆಹಚ್ಚಲು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಭೂಷಣ್ ಹೇಳಿದ್ದಾರೆ.

ಅಂತರಾಷ್ಟ್ರೀಯ ಪ್ರಯಾಣಿಕರ ನಿಗದಿತ ಮಾದರಿಗಳಿಗೆ ಜೀನೋಮಿಕ್ ಸೀಕ್ವೆನ್ಸಿಂಗ್, ಸೆಂಟಿನೆಲ್ ಸೈಟ್‌ಗಳಿಂದ ಮಾದರಿಗಳ ಸಂಗ್ರಹ (ಗುರುತಿಸಲಾದ ಆರೋಗ್ಯ ಸೌಲಭ್ಯಗಳು), ಮತ್ತು ಪ್ರಕರಣಗಳ ಸ್ಥಳೀಯ ಕ್ಲಸ್ಟರ್‌ಗಳು, ಎಲ್ಲಾ ಅರ್ಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ನೀಡಿಕೆ ಹೆಚ್ಚಿಸಲು ಪೂರ್ವಭಾವಿ ಪ್ರಚಾರ ಮತ್ತು ವಿಶೇಷವಾಗಿ ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವಂತೆ ಅವರು ಹೇಳಿದ್ದಾರೆ. “ರಾಜ್ಯ ಕಟ್ಟುನಿಟ್ಟಾದ ನಿಗಾ ವಹಿಸುವುದು ಮತ್ತು ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು ಕಾಳಜಿಯ ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿದ್ದಲ್ಲಿ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ” ಎಂದು ಭೂಷಣ್ ಹೇಳಿದರು.

ಇದನ್ನೂ ಓದಿ: Credit Suisse: ಜಾಗತಿಕ ಬ್ಯಾಂಕಿಂಗ್ ದೈತ್ಯ ಕ್ರೆಡಿಟ್ ಸ್ವೀಸ್ ಪತನ ಸಾಧ್ಯತೆ; ಭಾರತಕ್ಕೆ ತಲೆನೋವಾಗುತ್ತಾ ಈ ಸ್ವಿಸ್ ಬ್ಯಾಂಕ್? ವಾಸ್ತವ ಪರಿಸ್ಥಿತಿ ಹೇಗಿದೆ?

ಮಹಾರಾಷ್ಟ್ರದಲ್ಲಿ ಮಾರ್ಚ್ 8 ಕ್ಕೆ ಕೊನೆಗೊಂಡ ವಾರದಲ್ಲಿ 355, ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 668 ಪ್ರಕರಣ ದಾಖಲಾಗಿದೆ. ಇದಲ್ಲದೆ, ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ ರಾಜ್ಯವು ಶೇಕಡಾ 1.92 ರಷ್ಟು ಧನಾತ್ಮಕ ಪ್ರಮಾಣವನ್ನು ವರದಿ ಮಾಡಿದೆ, ಇದು ಅದಕ್ಕಿಂತ ಹೆಚ್ಚಾಗಿದೆ. ಇದೇ ಅವಧಿಯಲ್ಲಿ ಭಾರತದ ಪಾಸಿಟಿವಿಟಿ ದರ 0.61 ಶೇ. ಆಗಿತ್ತು.

ಮಾರ್ಚ್ 8ಕ್ಕೆ ಕೊನೆಗೊಂಡ ವಾರದಲ್ಲಿ ಗುಜರಾತ್‌ನಲ್ಲಿ 105 ಆಗಿದ್ದು ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ 279 ಕ್ಕೆ ಏರಿಕೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದಲ್ಲದೆ, ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ ರಾಜ್ಯವು ಶೇಕಡಾ 1.11 ರ ಸಕಾರಾತ್ಮಕ ದರವನ್ನು ವರದಿ ಮಾಡಿದೆ.

ತೆಲಂಗಾಣವು ಮಾರ್ಚ್ 8 ಕ್ಕೆ ಕೊನೆಗೊಂಡ ವಾರದಲ್ಲಿ 132,ಮಾರ್ಚ್ 15 ಕ್ಕೆ ಕೊನೆಗೊಳ್ಳುವ ವಾರದಲ್ಲಿ 267 ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡಿದೆ. ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ ರಾಜ್ಯವು ಶೇಕಡಾ 0.31 ರಷ್ಟು ಧನಾತ್ಮಕ ಪ್ರಮಾಣವನ್ನು ವರದಿ ಮಾಡಿದೆ. ಈ ಅವಧಿಯಲ್ಲಿ ಕೇರಳದಲ್ಲಿ ವಾರದಿಂದ ವಾರಕ್ಕೆ ಪ್ರಕರಣಗಳ ಸಂಖ್ಯೆ434 ರಿಂದ 579 ಕ್ಕೆ ಏರಿಕೆಯಾಗಿದೆ.ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ ರಾಜ್ಯವು ಶೇಕಡಾ 2.64 ರ ಸಕಾರಾತ್ಮಕ ದರವನ್ನು ವರದಿ ಮಾಡಿದೆ. ಕರ್ನಾಟಕದಲ್ಲಿ ಪ್ರಕರಣಗಳ ಸಂಖ್ಯೆ493 ರಿಂದ 604 ಕ್ಕೆ ಏರಿಕೆಯಾಗಿದೆ. ಮಾರ್ಚ್ 15 ಕ್ಕೆ ಕೊನೆಗೊಂಡ ವಾರದಲ್ಲಿ ರಾಜ್ಯವು ಶೇಕಡಾ 2.77 ರ ಸಕಾರಾತ್ಮಕ ದರವನ್ನು ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?