AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪ್ರಕರಣ ಏರಿಕೆ: ದೆಹಲಿಯಲ್ಲಿ ಬಾರ್, ರೆಸ್ಟೋರೆಂಟ್ ಮುಚ್ಚಲು ಆದೇಶ; ಪಾರ್ಸೆಲ್​​​ಗಷ್ಟೇ ಅವಕಾಶ

ದೆಹಲಿಯಲ್ಲಿ ಸೋಮವಾರ 19,166 ಹೊಸ ಸೋಂಕಿನ ಪ್ರಕರಣಗಳು ಮತ್ತು 17 ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ. ದೆಹಲಿಯಲ್ಲಿ ಈಗ ಪಾಸಿಟಿವಿಟಿ ದರವು ಶೇಕಡಾ 25 ರಷ್ಟಿದೆ, ಇದು ಕಳೆದ ವರ್ಷದ ಮೇ 5 ರಿಂದ ಅತ್ಯಧಿಕವಾಗಿದೆ.

ಕೊವಿಡ್ ಪ್ರಕರಣ ಏರಿಕೆ: ದೆಹಲಿಯಲ್ಲಿ ಬಾರ್, ರೆಸ್ಟೋರೆಂಟ್ ಮುಚ್ಚಲು ಆದೇಶ; ಪಾರ್ಸೆಲ್​​​ಗಷ್ಟೇ ಅವಕಾಶ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 10, 2022 | 9:11 PM

ದೆಹಲಿ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಕುಳಿತು ಆಹಾರ ಸೇವಿಸುವುದನ್ನು ನಿರ್ಬಂಧಿಸಲು ನಿರ್ಧರಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್-19 (Covid-19) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಿಗೆ ‘ಟೇಕ್ ಅವೇ’ ಸೌಲಭ್ಯವನ್ನು ನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಅಂದರೆ ದೆಹಲಿಯಾದ್ಯಂತ ಇರುವ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ (restaurants and bars) ಸದ್ಯಕ್ಕೆ ಗ್ರಾಹಕರಿಗೆ ಊಟ ಮಾಡಲು ಅನುಮತಿಸಲಾಗುವುದಿಲ್ಲ. ಸೋಮವಾರ ದೆಹಲಿ ಲೆಫ್ಟಿನೆಂಟ್  ಜನರಲ್ ಅನಿಲ್ ಬೈಜಾಲ್ ಅಧ್ಯಕ್ಷತೆಯಲ್ಲಿ ನಡೆದ ಡಿಡಿಎಂಎ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು ಶೇಕಡಾ 50 ರಷ್ಟು ಆಸನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಡಿಡಿಎಂಎ ಅನುಮತಿ ನೀಡಿತ್ತು. ಸೋಮವಾರ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಡಿಡಿಎಂಎ ಸಭೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾಗವಹಿಸಿದ್ದರು.

ದೆಹಲಿಯಲ್ಲಿ ಲಾಕ್‌ಡೌನ್ ಇಲ್ಲ ಎಂದು ಹೇಳಿದ್ದು ರೆಸ್ಟೋರೆಂಟ್‌ಗಳಲ್ಲಿ ಡೈನ್-ಇನ್ ಸೌಲಭ್ಯವನ್ನು ಮುಚ್ಚಲು ಮತ್ತು ಮೆಟ್ರೋ ರೈಲುಗಳು ಮತ್ತು ಬಸ್‌ಗಳಲ್ಲಿ ಆಸನ ಸಾಮರ್ಥ್ಯವನ್ನು ಕಡಿಮೆ ಮಾಡಲು ನಿರ್ಧರಿಸಲಾಯಿತು.

ಹೆಚ್ಚಿದ ಕೊವಿಡ್ ಪ್ರಕರಣ ದೆಹಲಿಯಲ್ಲಿ ಸೋಮವಾರ 19,166 ಹೊಸ ಸೋಂಕಿನ ಪ್ರಕರಣಗಳು ಮತ್ತು 17 ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ. ದೆಹಲಿಯಲ್ಲಿ ಈಗ ಪಾಸಿಟಿವಿಟಿ ದರವು ಶೇಕಡಾ 25 ರಷ್ಟಿದೆ, ಇದು ಕಳೆದ ವರ್ಷದ ಮೇ 5 ರಿಂದ ಅತ್ಯಧಿಕವಾಗಿದೆ. ದೆಹಲಿಯಲ್ಲಿ ಪ್ರಸ್ತುತ 60,733 ಸಕ್ರಿಯ ಸೋಂಕಿನ ಪ್ರಕರಣಗಳಿವೆ. ಈ ಅಂಕಿ ಅಂಶವು ಮನೆಯಲ್ಲಿ ಪ್ರತ್ಯೇಕವಾಗಿ ಇರುವ 35,714 ರೋಗಿಗಳನ್ನು ಒಳಗೊಂಡಿದೆ.

ದೆಹಲಿ ಪೊಲೀಸರ ಹೇಳಿಕೆಯ ಪ್ರಕಾರ, ಪಡೆಯಲ್ಲಿರುವ ಸುಮಾರು “ಸಾವಿರ ಪೊಲೀಸ್ ಸಿಬ್ಬಂದಿ” ಕೊವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಮತ್ತು ಕ್ವಾರಂಟೈನ್‌ನಲ್ಲಿದ್ದಾರೆ.

ಭಾನುವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊವಿಡ್ ಹರಡುವುದನ್ನು “ತೀವ್ರ ಕಳವಳ” ಎಂದು ಬಣ್ಣಿಸಿದ್ದಾರೆ. ಆದಾಗ್ಯೂ, ದೆಹಲಿ ಸರ್ಕಾರವು ಇನ್ನೂ ಲಾಕ್‌ಡೌನ್ ಹೇರುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಲಾಕ್​​ಡೌನ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ: ಅರವಿಂದ ಕೇಜ್ರಿವಾಲ್

ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ