AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪ್ರಕರಣ ಏರಿಕೆ: ದೆಹಲಿಯಲ್ಲಿ ಬಾರ್, ರೆಸ್ಟೋರೆಂಟ್ ಮುಚ್ಚಲು ಆದೇಶ; ಪಾರ್ಸೆಲ್​​​ಗಷ್ಟೇ ಅವಕಾಶ

ದೆಹಲಿಯಲ್ಲಿ ಸೋಮವಾರ 19,166 ಹೊಸ ಸೋಂಕಿನ ಪ್ರಕರಣಗಳು ಮತ್ತು 17 ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ. ದೆಹಲಿಯಲ್ಲಿ ಈಗ ಪಾಸಿಟಿವಿಟಿ ದರವು ಶೇಕಡಾ 25 ರಷ್ಟಿದೆ, ಇದು ಕಳೆದ ವರ್ಷದ ಮೇ 5 ರಿಂದ ಅತ್ಯಧಿಕವಾಗಿದೆ.

ಕೊವಿಡ್ ಪ್ರಕರಣ ಏರಿಕೆ: ದೆಹಲಿಯಲ್ಲಿ ಬಾರ್, ರೆಸ್ಟೋರೆಂಟ್ ಮುಚ್ಚಲು ಆದೇಶ; ಪಾರ್ಸೆಲ್​​​ಗಷ್ಟೇ ಅವಕಾಶ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 10, 2022 | 9:11 PM

Share

ದೆಹಲಿ: ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಕುಳಿತು ಆಹಾರ ಸೇವಿಸುವುದನ್ನು ನಿರ್ಬಂಧಿಸಲು ನಿರ್ಧರಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್-19 (Covid-19) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಿಗೆ ‘ಟೇಕ್ ಅವೇ’ ಸೌಲಭ್ಯವನ್ನು ನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಅಂದರೆ ದೆಹಲಿಯಾದ್ಯಂತ ಇರುವ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ (restaurants and bars) ಸದ್ಯಕ್ಕೆ ಗ್ರಾಹಕರಿಗೆ ಊಟ ಮಾಡಲು ಅನುಮತಿಸಲಾಗುವುದಿಲ್ಲ. ಸೋಮವಾರ ದೆಹಲಿ ಲೆಫ್ಟಿನೆಂಟ್  ಜನರಲ್ ಅನಿಲ್ ಬೈಜಾಲ್ ಅಧ್ಯಕ್ಷತೆಯಲ್ಲಿ ನಡೆದ ಡಿಡಿಎಂಎ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳು ಶೇಕಡಾ 50 ರಷ್ಟು ಆಸನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಡಿಡಿಎಂಎ ಅನುಮತಿ ನೀಡಿತ್ತು. ಸೋಮವಾರ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಡಿಡಿಎಂಎ ಸಭೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾಗವಹಿಸಿದ್ದರು.

ದೆಹಲಿಯಲ್ಲಿ ಲಾಕ್‌ಡೌನ್ ಇಲ್ಲ ಎಂದು ಹೇಳಿದ್ದು ರೆಸ್ಟೋರೆಂಟ್‌ಗಳಲ್ಲಿ ಡೈನ್-ಇನ್ ಸೌಲಭ್ಯವನ್ನು ಮುಚ್ಚಲು ಮತ್ತು ಮೆಟ್ರೋ ರೈಲುಗಳು ಮತ್ತು ಬಸ್‌ಗಳಲ್ಲಿ ಆಸನ ಸಾಮರ್ಥ್ಯವನ್ನು ಕಡಿಮೆ ಮಾಡಲು ನಿರ್ಧರಿಸಲಾಯಿತು.

ಹೆಚ್ಚಿದ ಕೊವಿಡ್ ಪ್ರಕರಣ ದೆಹಲಿಯಲ್ಲಿ ಸೋಮವಾರ 19,166 ಹೊಸ ಸೋಂಕಿನ ಪ್ರಕರಣಗಳು ಮತ್ತು 17 ಕೊವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ. ದೆಹಲಿಯಲ್ಲಿ ಈಗ ಪಾಸಿಟಿವಿಟಿ ದರವು ಶೇಕಡಾ 25 ರಷ್ಟಿದೆ, ಇದು ಕಳೆದ ವರ್ಷದ ಮೇ 5 ರಿಂದ ಅತ್ಯಧಿಕವಾಗಿದೆ. ದೆಹಲಿಯಲ್ಲಿ ಪ್ರಸ್ತುತ 60,733 ಸಕ್ರಿಯ ಸೋಂಕಿನ ಪ್ರಕರಣಗಳಿವೆ. ಈ ಅಂಕಿ ಅಂಶವು ಮನೆಯಲ್ಲಿ ಪ್ರತ್ಯೇಕವಾಗಿ ಇರುವ 35,714 ರೋಗಿಗಳನ್ನು ಒಳಗೊಂಡಿದೆ.

ದೆಹಲಿ ಪೊಲೀಸರ ಹೇಳಿಕೆಯ ಪ್ರಕಾರ, ಪಡೆಯಲ್ಲಿರುವ ಸುಮಾರು “ಸಾವಿರ ಪೊಲೀಸ್ ಸಿಬ್ಬಂದಿ” ಕೊವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಮತ್ತು ಕ್ವಾರಂಟೈನ್‌ನಲ್ಲಿದ್ದಾರೆ.

ಭಾನುವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊವಿಡ್ ಹರಡುವುದನ್ನು “ತೀವ್ರ ಕಳವಳ” ಎಂದು ಬಣ್ಣಿಸಿದ್ದಾರೆ. ಆದಾಗ್ಯೂ, ದೆಹಲಿ ಸರ್ಕಾರವು ಇನ್ನೂ ಲಾಕ್‌ಡೌನ್ ಹೇರುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಲಾಕ್​​ಡೌನ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ: ಅರವಿಂದ ಕೇಜ್ರಿವಾಲ್

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು