AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪಿಡುಗು ಆರಂಭವಾದ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಶೂನ್ಯ ಕೊವಿಡ್

ದೆಹಲಿಯಲ್ಲಿ ಪ್ರಸ್ತುತ 10 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣವು 0.00 ಆಗಿದೆ ಎಂದು ಬುಲೆಟಿನ್ ಹೇಳಿದೆ.

ಕೊವಿಡ್ ಪಿಡುಗು ಆರಂಭವಾದ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಶೂನ್ಯ ಕೊವಿಡ್
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 17, 2023 | 7:58 AM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಒಂದೂ ಹೊಸ ಕೊವಿಡ್-19 (Covid 19) ಪ್ರಕರಣಗಳು ವರದಿಯಾಗಿಲ್ಲ. ಕಳೆದ ಮಾರ್ಚ್ 2020ರಿಂದ ಪ್ರತಿದಿನ ವರದಿಯಾಗುತ್ತಿದ್ದ ಪ್ರಕರಣಗಳು ಇದೀಗ ಶೂನ್ಯಕ್ಕಿಳಿದಿರುವುದು ಆರೋಗ್ಯ ಇಲಾಖೆ (Health Department) ಅಧಿಕಾರಿಗಳಲ್ಲಿ ಮತ್ತು ಜನಸಾಮಾನ್ಯರಿಗೆ ನೆಮ್ಮದಿ ಮೂಡಿಸಿದೆ. ದೆಹಲಿ ಆರೋಗ್ಯ ಇಲಾಖೆಯು ಸೋಮವಾರ ಹೊರಡಿಸಿರುವ ಆರೋಗ್ಯ ಮಾಹಿತಿಯಲ್ಲಿ (Health Bulletin) ಈ ಅಂಶ ಉಲ್ಲೇಖವಾಗಿದೆ.

ದೆಹಲಿಯಲ್ಲಿ ಪ್ರಸ್ತುತ 10 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣವು 0.00 ಆಗಿದೆ ಎಂದು ಬುಲೆಟಿನ್ ಹೇಳಿದೆ. ಬುಲೆಟಿನ್ ಪ್ರಕಾರ 9 ಕೊವಿಡ್ ರೋಗಿಗಳು ಕಳೆದ 24 ಗಂಟೆಗಳಲ್ಲಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಚೇತರಿಸಿಕೊಂಡವರ ರೋಗಿಗಳ ಸಂಖ್ಯೆಯು 19,80,781ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್​ನಿಂದ ಯಾರೊಬ್ಬರೂ ಮೃತಪಟ್ಟಿಲ್ಲ. ದೆಹಲಿಯಲ್ಲಿ ಈವರೆಗೆ ಕೊವಿಡ್​ನಿಂದ 26,522 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಲಸಿಕಾಕರಣ ಅಭಿಯಾನವು ಯಶಸ್ವಿಯಾಗಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊವಿಡ್ ಲಸಿಕೆಗಳನ್ನು ಈವರೆಗೆ ಜನರಿಗೆ ಈ ಪೈಕಿ 15 ಮಂದಿ ಮೊದಲ ಡೋಸ್, 32 ಮಂದಿ 2ನೇ ಡೋಸ್ ಮತ್ತು 103 ಮಂದಿ 3ನೇ (ಮುಂಜಾಗ್ರತಾ) ಡೋಸ್ ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿ ಈವರೆಗೆ 3,73,70,636 (3.73 ಕೋಟಿ) ಮಂದಿಗೆ ಲಸಿಕೆ ನೀಡಿದಂತೆ ಆಗಿದೆ.

ಕಳೆದ 24 ಗಂಟೆಗಳಲ್ಲಿ 931 ಕೊವಿಟ್ ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಒಟ್ಟು ತಪಾಸಣೆ ಮಾಡಿದ ಕೊವಿಡ್ ಮಾದರಿಗಳ ಸಂಖ್ಯೆಯು 4,06,50,119 ಗೆ (4.06 ಕೋಟಿ) ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯನ್ನು ಈವರೆಗೆ ಮೂರು ಕೊವಿಡ್ ಅಲೆಗಳು ಬಾಧಿಸಿವೆ. ಈ ಪೈಕಿ ಏಪ್ರಿಲ್-ಮೇ 2021ರಲ್ಲಿ ಕಾಣಿಸಿಕೊಂಡಿದ್ದ 2ನೇ ಕೊವಿಡ್ ಅಲೆಯು ಮಾರಣಾಂತಿಕ ಎಂದು ವಿಶ್ಲೇಷಿಸಲಾಗಿತ್ತು. ಈ ಸಂದರ್ಭದಲ್ಲಿ ಕೊರೊನಾ ವೈರಾಣುಗಳ ಡೆಲ್ಟಾ ರೂಪಾಂತರಿ ಜನರನ್ನು ಬಾಧಿಸಿತ್ತು.

ಇದನ್ನೂ ಓದಿ: ಬೆಂಗಳೂರಿಗೆ ಸದ್ಯಕ್ಕೆ ಕೊರೊನಾ ಆತಂಕ ಇಲ್ಲ: ನೆಮ್ಮದಿಯ ಫಲಿತಾಂಶ ಕೊಟ್ಟ ಒಳಚರಂಡಿ ನೀರಿನ ಮಾದರಿ ಪರಿಶೀಲನೆ

Published On - 7:58 am, Tue, 17 January 23

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ