AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ

ಭಾರತದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ

Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ
ಡಿ.ವೈ ಚಂದ್ರಚೂಡ
ಅಕ್ಷಯ್​ ಪಲ್ಲಮಜಲು​​
|

Updated on:Apr 05, 2023 | 1:00 PM

Share

ದೆಹಲಿ: ಭಾರತದಲ್ಲಿ ಕೋವಿಡ್ (​covid) ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್​​ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ತಿಳಿಸಿದ್ದಾರೆ. ಕೋವಿಡ್​​ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಅನೇಕ ಮಾಧ್ಯಮಗಳ ವರದಿ ಮಾಡಿದೆ. ಈ ಕಾರಣದಿಂದ ವಕೀಲರು ಯಾರು ಕೋರ್ಟ್​ಗೆ ಬರುವ ಅವಶ್ಯಕತೆ ಇಲ್ಲ ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯನಿರ್ವಹಿಸಿ ಎಂದು ಹೇಳಿದ್ದಾರೆ.

ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ವರದಿಯನ್ನು ನಾವು ಪತ್ರಿಕೆಗಳಲ್ಲಿ ನೋಡುತ್ತಿದ್ದೇವೆ ಆ ಕಾರಣಕ್ಕೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಕೀಲರು ಆನ್‌ಲೈನ್‌ ಮೂಲಕವೇ ಕೆಲಸ ಮಾಡಲಿ ಎಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆನ್​​ಲೈನ್ ಮೂಲಕವೇ ನಿಮ್ಮ ವಾದಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದ್ದಾರೆ. ದೆಹಲಿ ಮತ್ತು ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನಿಸಿದಾಗ, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದೆ.

ಇದನ್ನೂ ಓದಿ: Salary Of Supreme Court CJI: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ವೇತನ, ಸರ್ಕಾರಿ ಸೌಲಭ್ಯಗಳೇನು?

ಈಗಾಗಲೇ ಅನೇಕ ನ್ಯಾಯಾಲಯಗಳು ಆನ್​​ಲೈನ್ ಮೂಲಕವೇ ವಿಚಾರಣೆಯನ್ನು ಮಾಡುತ್ತಿದೆ. ಹಾಗಾಗಿ ಇನ್ನೂ ಮುಂದಕ್ಕೆ ವರ್ಚುವಲ್ ವಿಚಾರಣೆಗಳನ್ನು ಮಾಡಬಹುದು ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆ್ಯಪ್ ಮತ್ತು ಯೂಟ್ಯೂಬ್ ಮೂಲಕ ಸಂವಿಧಾನ ಪೀಠದ ಪ್ರಕ್ರಿಯೆಗಳನ್ನು ಲೈವ್-ಸ್ಟ್ರೀಮ್ ಮಾಡಲು ಪ್ರಾರಂಭಿಸಿದೆ.

ಭಾರತದಲ್ಲಿ ಬುಧವಾರ 4435 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 23,091 ಪತ್ತೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳು ಕಳೆದ ಕೆಲವು ದಿನಗಳಲ್ಲಿ ಏರಿಕೆಯ ಕಂಡಿವೆ, ಏಪ್ರಿಲ್ 1ರಂದು 2,994 ರಿಂದ ಏಪ್ರಿಲ್ 2 ರಂದು 3,824 ಮತ್ತು ಏಪ್ರಿಲ್ 3 ರಂದು 3,641 ಇದರ ನಡುವೆ ಮಂಗಳವಾರ 3038 ಕ್ಕೆ ಕಡಿಮೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 2,069 ಚೇತರಿಕೆ ಕಂಡಿದೆ, ಮಂಗಳವಾರ ಒಟ್ಟು ಚೇತರಿಕೆ 4,41,77,204 ಕ್ಕೆ ಏರಿದೆ. ಒಟ್ಟಾರೆ ಚೇತರಿಕೆ ದರವನ್ನು 98.76 ಪ್ರತಿಶತದಷ್ಟು ಹೆಚ್ಚಾಗಿದೆ.

Published On - 12:14 pm, Wed, 5 April 23

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!