AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ

ಭಾರತದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ

Supreme Court: ಭಾರತದಲ್ಲಿ ಕೋವಿಡ್ ಹೆಚ್ಚಳ, ವಕೀಲರು ಕೋರ್ಟ್​​ಗೆ ಬರುವ ಅವಶ್ಯಕತೆ ಇಲ್ಲ : ಡಿ.ವೈ ಚಂದ್ರಚೂಡ
ಡಿ.ವೈ ಚಂದ್ರಚೂಡ
ಅಕ್ಷಯ್​ ಪಲ್ಲಮಜಲು​​
|

Updated on:Apr 05, 2023 | 1:00 PM

Share

ದೆಹಲಿ: ಭಾರತದಲ್ಲಿ ಕೋವಿಡ್ (​covid) ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್​​ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ತಿಳಿಸಿದ್ದಾರೆ. ಕೋವಿಡ್​​ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಅನೇಕ ಮಾಧ್ಯಮಗಳ ವರದಿ ಮಾಡಿದೆ. ಈ ಕಾರಣದಿಂದ ವಕೀಲರು ಯಾರು ಕೋರ್ಟ್​ಗೆ ಬರುವ ಅವಶ್ಯಕತೆ ಇಲ್ಲ ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯನಿರ್ವಹಿಸಿ ಎಂದು ಹೇಳಿದ್ದಾರೆ.

ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ವರದಿಯನ್ನು ನಾವು ಪತ್ರಿಕೆಗಳಲ್ಲಿ ನೋಡುತ್ತಿದ್ದೇವೆ ಆ ಕಾರಣಕ್ಕೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಕೀಲರು ಆನ್‌ಲೈನ್‌ ಮೂಲಕವೇ ಕೆಲಸ ಮಾಡಲಿ ಎಂದು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆನ್​​ಲೈನ್ ಮೂಲಕವೇ ನಿಮ್ಮ ವಾದಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದ್ದಾರೆ. ದೆಹಲಿ ಮತ್ತು ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನಿಸಿದಾಗ, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದೆ.

ಇದನ್ನೂ ಓದಿ: Salary Of Supreme Court CJI: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿಗಳ ವೇತನ, ಸರ್ಕಾರಿ ಸೌಲಭ್ಯಗಳೇನು?

ಈಗಾಗಲೇ ಅನೇಕ ನ್ಯಾಯಾಲಯಗಳು ಆನ್​​ಲೈನ್ ಮೂಲಕವೇ ವಿಚಾರಣೆಯನ್ನು ಮಾಡುತ್ತಿದೆ. ಹಾಗಾಗಿ ಇನ್ನೂ ಮುಂದಕ್ಕೆ ವರ್ಚುವಲ್ ವಿಚಾರಣೆಗಳನ್ನು ಮಾಡಬಹುದು ಎಂದು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಆ್ಯಪ್ ಮತ್ತು ಯೂಟ್ಯೂಬ್ ಮೂಲಕ ಸಂವಿಧಾನ ಪೀಠದ ಪ್ರಕ್ರಿಯೆಗಳನ್ನು ಲೈವ್-ಸ್ಟ್ರೀಮ್ ಮಾಡಲು ಪ್ರಾರಂಭಿಸಿದೆ.

ಭಾರತದಲ್ಲಿ ಬುಧವಾರ 4435 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 23,091 ಪತ್ತೆಯಾಗಿದೆ. ಭಾರತದಲ್ಲಿ ಕೋವಿಡ್ ಪ್ರಕರಣಗಳು ಕಳೆದ ಕೆಲವು ದಿನಗಳಲ್ಲಿ ಏರಿಕೆಯ ಕಂಡಿವೆ, ಏಪ್ರಿಲ್ 1ರಂದು 2,994 ರಿಂದ ಏಪ್ರಿಲ್ 2 ರಂದು 3,824 ಮತ್ತು ಏಪ್ರಿಲ್ 3 ರಂದು 3,641 ಇದರ ನಡುವೆ ಮಂಗಳವಾರ 3038 ಕ್ಕೆ ಕಡಿಮೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 2,069 ಚೇತರಿಕೆ ಕಂಡಿದೆ, ಮಂಗಳವಾರ ಒಟ್ಟು ಚೇತರಿಕೆ 4,41,77,204 ಕ್ಕೆ ಏರಿದೆ. ಒಟ್ಟಾರೆ ಚೇತರಿಕೆ ದರವನ್ನು 98.76 ಪ್ರತಿಶತದಷ್ಟು ಹೆಚ್ಚಾಗಿದೆ.

Published On - 12:14 pm, Wed, 5 April 23

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ