AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ Cashಗೆ ಇತ್ತು ಸಿಕ್ಕಾಪಟ್ಟೆ ಡಿಮ್ಯಾಂಡ್​, ಯಾಕೆ?

ದೆಹಲಿ: ಭಾರತೀಯ ರಿಸರ್ವ್​ ಬ್ಯಾಂಕ್​ (RBI) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ,  ಫೆಬ್ರವರಿ 28ರಿಂದ (22.55 ಲಕ್ಷ ಕೋಟಿ ರೂ.) ಜುಲೈ 17ರವರೆಗಿನ ಕಾಲಾವಧಿಯಲ್ಲಿ ಸಾರ್ವಜನಿಕರು ಕ್ರೋಢೀಕರಿಸಿಕೊಂಡಿದ್ದ ನಗದಿನಿ ಪ್ರಮಾಣವು 3,24,500 ಕೋಟಿ ರೂ.ಗಳಷ್ಟು ಏರಿಕೆಯಾಗಿತ್ತು. ಹೀಗಾಗಿ, ಜುಲೈ 17ರ ವೇಳೆಗೆ ಸಾರ್ವಜನಿಕರ ಬಳಿಯಿದ್ದ ನಗದಿನ ಪ್ರಮಾಣ  25.8 ಲಕ್ಷ ಕೋಟಿ ರೂಪಾಯಿಗೆ ತಲುಪಿತ್ತು ಎಂದು RBI ತಿಳಿಸಿದೆ. ಆದರೆ, ಜುಲೈ 17ರಿಂದ ಜುಲೈ 31 ರವರೆಗೆ, ಅಂದರೆ ಕೇವಲ 15 ದಿನಗಳಲ್ಲಿ ಈ ಮೊತ್ತವು […]

ಕೊರೊನಾ ಕಾಲದಲ್ಲಿ Cashಗೆ ಇತ್ತು ಸಿಕ್ಕಾಪಟ್ಟೆ ಡಿಮ್ಯಾಂಡ್​, ಯಾಕೆ?
ಶೇ 16,000ದಷ್ಟು ಏರಿಕೆ
ಸಾಧು ಶ್ರೀನಾಥ್​
|

Updated on:Aug 25, 2020 | 3:17 PM

Share

ದೆಹಲಿ: ಭಾರತೀಯ ರಿಸರ್ವ್​ ಬ್ಯಾಂಕ್​ (RBI) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ,  ಫೆಬ್ರವರಿ 28ರಿಂದ (22.55 ಲಕ್ಷ ಕೋಟಿ ರೂ.) ಜುಲೈ 17ರವರೆಗಿನ ಕಾಲಾವಧಿಯಲ್ಲಿ ಸಾರ್ವಜನಿಕರು ಕ್ರೋಢೀಕರಿಸಿಕೊಂಡಿದ್ದ ನಗದಿನಿ ಪ್ರಮಾಣವು 3,24,500 ಕೋಟಿ ರೂ.ಗಳಷ್ಟು ಏರಿಕೆಯಾಗಿತ್ತು. ಹೀಗಾಗಿ, ಜುಲೈ 17ರ ವೇಳೆಗೆ ಸಾರ್ವಜನಿಕರ ಬಳಿಯಿದ್ದ ನಗದಿನ ಪ್ರಮಾಣ  25.8 ಲಕ್ಷ ಕೋಟಿ ರೂಪಾಯಿಗೆ ತಲುಪಿತ್ತು ಎಂದು RBI ತಿಳಿಸಿದೆ.

ಆದರೆ, ಜುಲೈ 17ರಿಂದ ಜುಲೈ 31 ರವರೆಗೆ, ಅಂದರೆ ಕೇವಲ 15 ದಿನಗಳಲ್ಲಿ ಈ ಮೊತ್ತವು 3,982 ಕೋಟಿ ರೂಪಾಯಿಗಳಷ್ಟು ಇಳಿಕೆ ಕಂಡಿದ್ದು ಇದೀಗ ಸಾರ್ವಜನಿಕರು ಕ್ರೋಢೀಕರಿಸಿಕೊಂಡಿರುವ ನಗದಿನ ಮೊತ್ತವು 25.76 ಲಕ್ಷ ಕೋಟಿಗೆ ಇಳಿದಿದೆ.

ಕೇಂದ್ರವು ಲಾಕ್​ಡೌನ್​ ನಿರ್ಬಂಧನೆಗಳನ್ನು ಸಡಿಲಗೊಳಿಸಿದ ಪರಿಣಾಮದಿಂದಾಗಿ ಜೂನ್ ಮತ್ತು ಜುಲೈನಲ್ಲಿ ನಗದು ಕ್ರೋಢೀಕರಣದ ವೇಗವೂ ಕೊಂಚ ತಗ್ಗಿತು ಎಂಬುದು ತಿಳಿದುಬಂದಿದೆ. ಜೊತೆಗೆ, ಲಾಕ್​ಡೌನ್​ನ ಆರಂಭಿಕ ಹಂತದಲ್ಲಿ, E-ಕಾಮರ್ಸ್ ವಹಿವಾಟಿಗೆ ಕೇಂದ್ರ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಜನರು ನೆರೆಹೊರೆಯ ಮಳಿಗೆಗಳನ್ನು ಅವಲಂಬಿಸಬೇಕಾಗಿತ್ತು. ಇದರ ಪರಿಣಾಮವಾಗಿ ನಗದಿನ ಬಳಕೆ ಸಾರ್ವಜನಿಕ ವಲಯದಲ್ಲಿ ಹೆಚ್ಚಾಯ್ತು. ಆದ್ದರಿಂದ, ಜನರು ಹೆಚ್ಚಿನ ಪ್ರಮಾಣದಲ್ಲಿ ATM ಮತ್ತು ಬ್ಯಾಂಕ್​ಗಳಿಂದ ಹಣ ಹಿಂಪಡೆದರು.

ಇದಲ್ಲದೆ, ಜನರು ತಮ್ಮ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಒಂದೇ ಬಾರಿಯಲ್ಲಿ ದೊಡ್ಡ ಮೊತ್ತವನ್ನು ಬ್ಯಾಂಕ್​ನಿಂದ ಹಿಂಪಡೆಕೊಂಡರು. ಹಾಗಾಗಿ, ಜನರು ನೋಟು  ಮತ್ತು ನಾಣ್ಯಗಳನ್ನು ಹೆಚ್ಚಾಗಿ ಬಳಸಲು ಇದು ಕಾರಣವಾಯಿತು. ಈಗ E-ಕಾಮರ್ಸ್ ವಹಿವಾಟು ವೇಗ ಪಡೆಯುತ್ತಿರುವುದರಿಂದ, ನಗದು ಮೇಲಿನ ಅವಲಂಬನೆ ಕಡಿಮೆಯಾಗಿದೆ.

Published On - 3:15 pm, Tue, 25 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ