AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಎಸ್​ ಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 11, 2021 | 11:54 AM

Share

ದೆಹಲಿ: ಕೊವಿಡ್​ 19 ಸೋಂಕಿ (Covid 19)ನ ಹೊಸ ರೂಪಾಂತರ ವೈರಸ್​ಗಳು (Covid Mutants) ಯಾವುದೇ ಸಮಯದಲ್ಲೂ ಉದ್ಭವ ಆಗಬಹುದು..ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಅದಾಗಲೇ ಎದ್ದಿರುವ ಆಲ್ಫಾ, ಬೇಟಾ, ಗಮ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣುಗಳ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಆದರೆ ಕೊವಿಡ್ 19 ವೈರಸ್​ನ ಇನ್ನಷ್ಟು ರೂಪಾಂತರಿ ವೈರಾಣುಗಳು ಹುಟ್ಟುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ರೋಗ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಎಸ್​.ಕೆ.ಸಿಂಗ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸದ್ಯ ಕಪ್ಪಾ ಮತ್ತು B1617.3 ರೂಪಾಂತರಿ ವೈರಾಣುಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ನಾವು ಎರಡು ವಿಧದಲ್ಲಿ ಕಣ್ಗಾವಲು ವ್ಯವಸ್ಥೆ ಮಾಡಿದ್ದೇವೆ. ದೇಶದಲ್ಲೇ ಹುಟ್ಟಿದ ಕೊವಿಡ್​ 19 ರೂಪಾಂತರವಾದ ಡೆಲ್ಟಾ ವೈರಾಣು ಮತ್ತು ಹೊರದೇಶಗಳಲ್ಲಿ ಹುಟ್ಟಿ, ನಮ್ಮ ದೇಶಕ್ಕೆ ಕಾಲಿಟ್ಟ ರೂಪಾಂತರಿ ವೈರಸ್​ಗಳೆರಡರ ಬಗ್ಗೆಯೂ ಪ್ರತ್ಯೇಕವಾಗಿ ಕಣ್ಗಾವಲು ಇಟ್ಟು, ನಿರ್ವಹಣೆ ಮಾಡಲಾಗುತ್ತಿದೆ ಎಂದು ಎಸ್​.ಕೆ.ಸಿಂಗ್​ ಹೇಳಿದ್ದಾರೆ.

ಇನ್ನು ಕೊವಿಡ್​ 19 ಸೋಂಕಿನ ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಹುಟ್ಟಬಹುದು..ನಮ್ಮ ದೇಶಕ್ಕೂ ಕಾಲಿಡಬಹುದು. ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇರಳಕ್ಕೆ ಕೇಂದ್ರದಿಂದ ಆರೋಗ್ಯ ತಜ್ಞರ ತಂಡವನ್ನು ಕಳಿಸಲಾಗಿದೆ. ಅಲ್ಲಿ, ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಎಂಬ ನಿಯಮಗಳನ್ನು ಅಳವಡಿಸಿಕೊಂಡು ಕೊವಿಡ್​ 19 ವಿರುದ್ಧ ಹೋರಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!