AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಎಸ್​ ಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 11, 2021 | 11:54 AM

Share

ದೆಹಲಿ: ಕೊವಿಡ್​ 19 ಸೋಂಕಿ (Covid 19)ನ ಹೊಸ ರೂಪಾಂತರ ವೈರಸ್​ಗಳು (Covid Mutants) ಯಾವುದೇ ಸಮಯದಲ್ಲೂ ಉದ್ಭವ ಆಗಬಹುದು..ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಅದಾಗಲೇ ಎದ್ದಿರುವ ಆಲ್ಫಾ, ಬೇಟಾ, ಗಮ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣುಗಳ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಆದರೆ ಕೊವಿಡ್ 19 ವೈರಸ್​ನ ಇನ್ನಷ್ಟು ರೂಪಾಂತರಿ ವೈರಾಣುಗಳು ಹುಟ್ಟುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ರೋಗ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಎಸ್​.ಕೆ.ಸಿಂಗ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸದ್ಯ ಕಪ್ಪಾ ಮತ್ತು B1617.3 ರೂಪಾಂತರಿ ವೈರಾಣುಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ನಾವು ಎರಡು ವಿಧದಲ್ಲಿ ಕಣ್ಗಾವಲು ವ್ಯವಸ್ಥೆ ಮಾಡಿದ್ದೇವೆ. ದೇಶದಲ್ಲೇ ಹುಟ್ಟಿದ ಕೊವಿಡ್​ 19 ರೂಪಾಂತರವಾದ ಡೆಲ್ಟಾ ವೈರಾಣು ಮತ್ತು ಹೊರದೇಶಗಳಲ್ಲಿ ಹುಟ್ಟಿ, ನಮ್ಮ ದೇಶಕ್ಕೆ ಕಾಲಿಟ್ಟ ರೂಪಾಂತರಿ ವೈರಸ್​ಗಳೆರಡರ ಬಗ್ಗೆಯೂ ಪ್ರತ್ಯೇಕವಾಗಿ ಕಣ್ಗಾವಲು ಇಟ್ಟು, ನಿರ್ವಹಣೆ ಮಾಡಲಾಗುತ್ತಿದೆ ಎಂದು ಎಸ್​.ಕೆ.ಸಿಂಗ್​ ಹೇಳಿದ್ದಾರೆ.

ಇನ್ನು ಕೊವಿಡ್​ 19 ಸೋಂಕಿನ ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಹುಟ್ಟಬಹುದು..ನಮ್ಮ ದೇಶಕ್ಕೂ ಕಾಲಿಡಬಹುದು. ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇರಳಕ್ಕೆ ಕೇಂದ್ರದಿಂದ ಆರೋಗ್ಯ ತಜ್ಞರ ತಂಡವನ್ನು ಕಳಿಸಲಾಗಿದೆ. ಅಲ್ಲಿ, ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಎಂಬ ನಿಯಮಗಳನ್ನು ಅಳವಡಿಸಿಕೊಂಡು ಕೊವಿಡ್​ 19 ವಿರುದ್ಧ ಹೋರಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು