‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘

ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಎಸ್​ ಕೆ ಸಿಂಗ್​ ಮಾಹಿತಿ ನೀಡಿದ್ದಾರೆ.

‘ಕೊವಿಡ್​ 19 ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಉದ್ಭವಿಸಬಹುದು‘
ಪ್ರಾತಿನಿಧಿಕ ಚಿತ್ರ
Follow us
| Updated By: Lakshmi Hegde

Updated on: Aug 11, 2021 | 11:54 AM

ದೆಹಲಿ: ಕೊವಿಡ್​ 19 ಸೋಂಕಿ (Covid 19)ನ ಹೊಸ ರೂಪಾಂತರ ವೈರಸ್​ಗಳು (Covid Mutants) ಯಾವುದೇ ಸಮಯದಲ್ಲೂ ಉದ್ಭವ ಆಗಬಹುದು..ಎಚ್ಚರಿಕೆಯಿಂದ ಇರಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಅದಾಗಲೇ ಎದ್ದಿರುವ ಆಲ್ಫಾ, ಬೇಟಾ, ಗಮ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣುಗಳ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಆದರೆ ಕೊವಿಡ್ 19 ವೈರಸ್​ನ ಇನ್ನಷ್ಟು ರೂಪಾಂತರಿ ವೈರಾಣುಗಳು ಹುಟ್ಟುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ರೋಗ ನಿಯಂತ್ರಣ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಡಾ. ಎಸ್​.ಕೆ.ಸಿಂಗ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸದ್ಯ ಕಪ್ಪಾ ಮತ್ತು B1617.3 ರೂಪಾಂತರಿ ವೈರಾಣುಗಳ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ನಾವು ಎರಡು ವಿಧದಲ್ಲಿ ಕಣ್ಗಾವಲು ವ್ಯವಸ್ಥೆ ಮಾಡಿದ್ದೇವೆ. ದೇಶದಲ್ಲೇ ಹುಟ್ಟಿದ ಕೊವಿಡ್​ 19 ರೂಪಾಂತರವಾದ ಡೆಲ್ಟಾ ವೈರಾಣು ಮತ್ತು ಹೊರದೇಶಗಳಲ್ಲಿ ಹುಟ್ಟಿ, ನಮ್ಮ ದೇಶಕ್ಕೆ ಕಾಲಿಟ್ಟ ರೂಪಾಂತರಿ ವೈರಸ್​ಗಳೆರಡರ ಬಗ್ಗೆಯೂ ಪ್ರತ್ಯೇಕವಾಗಿ ಕಣ್ಗಾವಲು ಇಟ್ಟು, ನಿರ್ವಹಣೆ ಮಾಡಲಾಗುತ್ತಿದೆ ಎಂದು ಎಸ್​.ಕೆ.ಸಿಂಗ್​ ಹೇಳಿದ್ದಾರೆ.

ಇನ್ನು ಕೊವಿಡ್​ 19 ಸೋಂಕಿನ ಹೊಸ ರೂಪಾಂತರಿ ವೈರಾಣುಗಳು ಯಾವಾಗ ಬೇಕಾದರೂ ಹುಟ್ಟಬಹುದು..ನಮ್ಮ ದೇಶಕ್ಕೂ ಕಾಲಿಡಬಹುದು. ಕೊವಿಡ್​ 19 ಮತ್ತು ಅದರ ರೂಪಾಂತರಿಗಳ ವಿರುದ್ಧ ಹೋರಾಡಲು ಡಬ್ಲ್ಯೂಎಚ್​ಒ ಕೂಡ ಕೆಲವು ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಕೇರಳದಲ್ಲಿ ಕೊರೊನಾ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇರಳಕ್ಕೆ ಕೇಂದ್ರದಿಂದ ಆರೋಗ್ಯ ತಜ್ಞರ ತಂಡವನ್ನು ಕಳಿಸಲಾಗಿದೆ. ಅಲ್ಲಿ, ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಎಂಬ ನಿಯಮಗಳನ್ನು ಅಳವಡಿಸಿಕೊಂಡು ಕೊವಿಡ್​ 19 ವಿರುದ್ಧ ಹೋರಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನ ನಿಜವಾದ ಜನ್ಮ ದಿನ ನನಗೆ ಗೊತ್ತಿಲ್ಲ; ನಾನು ಎಂದೂ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ