AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜ್ಜೈನ್ ದೇವಾಲಯದಲ್ಲಿ ಕೊವಿಡ್ ಮಾನದಂಡ ಉಲ್ಲಂಘನೆ; ಕಾಲ್ತುಳಿತದಲ್ಲಿ ಹಲವರಿಗೆ ಗಾಯ

Ujjain Temple: ಪವಿತ್ರ ಶ್ರಾವಣ ಮಾಸದಲ್ಲಿ ಮೊದಲ ಸೋಮವಾರದಂದು ಪ್ರಾರ್ಥನೆ ಸಲ್ಲಿಸಲು ಭಕ್ತರು ನೆರೆದಿದ್ದರು. “ಬೆಳಿಗ್ಗೆ 8: 30 ರ ಸುಮಾರಿಗೆ, ಹೆಚ್ಚಿನ ಸಂಖ್ಯೆಯ ಜನರು ದರ್ಶನಕ್ಕಾಗಿ ಪ್ರವೇಶಿಸಲು ಪ್ರಯತ್ನಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ದೇವಾಲಯದ ಸಂಕೀರ್ಣದ ನಾಲ್ಕನೇ ಗೇಟ್‌ನಲ್ಲಿರುವ ಬ್ಯಾರಿಕೇಡ್ ಅನ್ನು ಮುರಿದರು

ಉಜ್ಜೈನ್ ದೇವಾಲಯದಲ್ಲಿ ಕೊವಿಡ್ ಮಾನದಂಡ ಉಲ್ಲಂಘನೆ; ಕಾಲ್ತುಳಿತದಲ್ಲಿ ಹಲವರಿಗೆ ಗಾಯ
ಉಜ್ಜೈನ್ ದೇವಾಲಯದಲ್ಲಿ ಶ್ರಾವಣ ಸೋಮವಾರದಂದು ಕಂಡು ಬಂದ ಭಕ್ತರ ದಂಡು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 27, 2021 | 1:16 PM

Share

ಉಜ್ಜೈನ್: ಮಧ್ಯಪ್ರದೇಶದ ಉಜ್ಜೈನ್ ಪ್ರಸಿದ್ಧ ಮಹಾಕಲೇಶ್ವರ ಶಿವ ದೇವಸ್ಥಾನದಲ್ಲಿ ಕಾಲ್ತುಳಿತ ರೀತಿಯ ಪರಿಸ್ಥಿತಿ ಉಂಟಾಗಿದ್ದು ಹಲವಾರು ಭಕ್ತರು ಗಾಯಗೊಂಡಿದ್ದಾರೆ. ಸೋಮವಾರ ನಡೆದ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗಿದ್ದು, ಭಕ್ತರು ದೇವಾಲಯದ ಒಳಗೆ ನುಗ್ಗಲು ಯತ್ನಿಸುತ್ತಿರುವುದನ್ನು ಕಾಣಬಹುದು.

ದೇವಾಲಯಕ್ಕೆ ಪ್ರವೇಶಿಸುವ ಪ್ರಯತ್ನದಲ್ಲಿ ಜನಸಮೂಹವು ಪರಸ್ಪರರ ವಿರುದ್ಧ ಎಳೆದಾಡುವುದು ಮತ್ತು ತಳ್ಳುವುದು ಕಂಡುಬಂತು. ಹಲವಾರು ಮಂದಿ ಕೆಳಗೆ ಬಿದ್ದರು. ಅವರ ಮೇಲೆ ಮತ್ತಷ್ಟು ಜನರು ಬಿದ್ದು ಬ್ಯಾರಿಕೇಡ್ ಗೇಟ್‌ಗಳಲ್ಲಿ ಒಂದು ಹಾನಿಗೊಳಗಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪವಿತ್ರ ಶ್ರಾವಣ ಮಾಸದಲ್ಲಿ ಮೊದಲ ಸೋಮವಾರದಂದು ಪ್ರಾರ್ಥನೆ ಸಲ್ಲಿಸಲು ಭಕ್ತರು ನೆರೆದಿದ್ದರು. “ಬೆಳಿಗ್ಗೆ 8: 30 ರ ಸುಮಾರಿಗೆ, ಹೆಚ್ಚಿನ ಸಂಖ್ಯೆಯ ಜನರು ದರ್ಶನಕ್ಕಾಗಿ ಪ್ರವೇಶಿಸಲು ಪ್ರಯತ್ನಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ದೇವಾಲಯದ ಸಂಕೀರ್ಣದ ನಾಲ್ಕನೇ ಗೇಟ್‌ನಲ್ಲಿರುವ ಬ್ಯಾರಿಕೇಡ್ ಅನ್ನು ಮುರಿದರು. ಬ್ಯಾರಿಕೇಡ್ ಮುರಿದ ನಂತರ, ಹಲವಾರು ಜನರು ಮುಖ್ಯ ದೇವರ ಕಡೆಗೆ ಓಡಲು ಪ್ರಯತ್ನಿಸಿದರು. ಅದೃಷ್ಟವಶಾತ್ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ”ಎಂದು ದೇವಾಲಯದ ಸಹಾಯಕ ಆಡಳಿತಾಧಿಕಾರಿ ಮೂಲ್‌ಚಂದ್ ಜೂನ್ವಾಲ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

“ಇದು ಪವಿತ್ರ ಶ್ರಾವಣ ತಿಂಗಳ ಮೊದಲ ಸೋಮವಾರವಾದ್ದರಿಂದ, ಪೂರ್ವ-ಬುಕಿಂಗ್ ಹೊರತುಪಡಿಸಿ ದರ್ಶನಕ್ಕಾಗಿ ಜನರಿಗೆ ಸರತಿ ಸಾಲಿನಲ್ಲಿ ನಿಲ್ಲಲು ಅವಕಾಶ ನೀಡಲಾಯಿತು. ಆದರೂ ಜನಸಮೂಹವು ನಾವು ನಿರೀಕ್ಷಿಸಿದ್ದಕ್ಕಿಂತ ದೊಡ್ಡದಾಗಿದೆ, “ಅವರು ಹೇಳಿದರು.

ದೇವಾಲಯದ ಹೊರಗೆ ಜನರು ಸಾಲುಗಟ್ಟಿ ನಿಂತಿದ್ದರಿಂದ ಸಾಮಾಜಿಕ ದೂರ ಮತ್ತು ಇತರ ಕೊವಿಡ್ -19 ಮಾನದಂಡಗಳನ್ನು ಉಲ್ಲಂಘಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:  ‘ಅವರಿಗೆ ಬೇರೆ ಆಯ್ಕೆ ಇಲ್ಲ’; ಕೊವಿಡ್ ಸಾಂಕ್ರಾಮಿಕದ ನಡುವೆ ಭಿಕ್ಷಾಟನೆ ತಡೆಯುವ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಇದನ್ನೂ ಓದಿ:  Explainer ಅಸ್ಸಾಂ- ಮಿಜೋರಾಂ ಗಡಿ ಸಂಘರ್ಷದಲ್ಲಿ 6 ಪೊಲೀಸರು ಬಲಿ, 80ಕ್ಕೂ ಹೆಚ್ಚು ಮಂದಿಗೆ ಗಾಯ; ಏನಿದು ಗಡಿ ವಿವಾದ?

(Covid rules flouted stampede-like situation at Ujjain’s famous Mahakaleshwar Siva Temple due to first Monday of the holy month of Shravan)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ