AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ; ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಕಳೆದ ವರ್ಷ ಕೊವಿಡ್-19 ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

ಕೊವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ; ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ಕೊವಿಡ್ ಲಸಿಕೆ
TV9 Web
| Edited By: |

Updated on: Nov 29, 2022 | 10:58 AM

Share

ನವದೆಹಲಿ: ಕೊವಿಡ್ ಲಸಿಕೆಯಿಂದ (Covid Vaccination) ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ. ಒಂದುವೇಳೆ ಕೊವಿಡ್ ಲಸಿಕೆಯಿಂದಾಗಿ ಸಾವು ಸಂಭವಿಸಿದರೆ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಪರಿಹಾರವನ್ನು ಪಡೆಯುವುದೊಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ (Central Government) ಸ್ಪಷ್ಟಪಡಿಸಿದೆ.

ಕಳೆದ ವರ್ಷ ಕೊವಿಡ್-19 ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. ಕಳೆದ ವಾರ ಆ ಅರ್ಜಿಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೊವಿಡ್ ಲಸಿಕೆಗಳ ಬಳಕೆಯಿಂದ ಸಂಭವಿಸುವ ಸಾವುಗಳಿಗೆ ಪರಿಹಾರವನ್ನು ನೀಡಲು ರಾಜ್ಯವನ್ನು ಅಥವಾ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Nasal Covid Vaccine: ಭಾರತ್ ಬಯೋಟೆಕ್​ನ ನಾಸಲ್ ಕೋವಿಡ್ ಲಸಿಕೆಗೆ ಅನುಮೋದನೆ

2022ರ ನವೆಂಬರ್ 19ರವರೆಗೆ ದೇಶದಲ್ಲಿ ನೀಡಲಾದ ಕೊವಿಡ್-19 ಲಸಿಕೆಗಳ 219.86 ಕೋಟಿ ಡೋಸ್‌ಗಳಲ್ಲಿ 92,114 ಎಇಎಫ್‌ಐಗಳು ವರದಿಯಾಗಿವೆ ಎಂದು ಅಫಿಡವಿಟ್ ಹೇಳಿತ್ತು. ಮೊದಲ ಅರ್ಜಿದಾರರಾದ ರಚನಾ ಗಂಗೂ ಅವರ ಮಗಳು ಕಳೆದ ವರ್ಷ ಮೇ 29ರಂದು ಕೋವಿಶೀಲ್ಡ್​ನ ಮೊದಲ ಡೋಸ್ ಅನ್ನು ಹಾಕಿಸಿಕೊಂಡಿದ್ದರು. ಅದಾಗಿ 1 ತಿಂಗಳೊಳಗೆ ಜೂನ್ 19ರಂದು ಅವರು ನಿಧನರಾಗಿದ್ದರು.

ಇತರ ಅರ್ಜಿದಾರರಾದ ವೇಣುಗೋಪಾಲನ್ ಗೋವಿಂದನ್ ಅವರ ಮಗಳು ಎಂಎಸ್ಸಿ ವಿದ್ಯಾರ್ಥಿನಿಯಾಗಿದ್ದು, ಜೂನ್ 18ರಂದು ಕೋವಿಶೀಲ್ಡ್​ನ ಮೊದಲ ಡೋಸ್ ಅನ್ನು ಪಡೆದಿದ್ದರು. ಕಳೆದ ವರ್ಷ ಜುಲೈ 10ರಂದು ಅವರು ನಿಧನರಾಗಿದ್ದರು. ಮೊದಲ ಅರ್ಜಿದಾರರ ಮಗಳಿಗೆ ಥ್ರಂಬೋಸಿಸ್ ಮತ್ತು ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಇತ್ತು ಎಂದು ಅಫಿಡವಿಟ್ ಹೇಳಿದೆ. ಇದು ಜಾಗತಿಕವಾಗಿ ವರದಿಯಾದ ಕೋವಿಡ್ -19 ಲಸಿಕೆಗಳಿಗೆ ಸಂಬಂಧಿಸಿದ ಅಪರೂಪದ ಎಇಎಫ್‌ಐ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ