AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccine: ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊವಿಡ್ ಲಸಿಕೆ ರವಾನೆ

ಭಾರತವು ಇಂದು 5,00,000 ಡೋಸ್ ಕೊವಿಡ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

Covid Vaccine: ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊವಿಡ್ ಲಸಿಕೆ ರವಾನೆ
ಕೊರೊನಾ ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 01, 2022 | 3:00 PM

Share

ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್​ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ, ವೈದ್ಯಕೀಯ ಸಲಕರಣೆಗಳನ್ನು ರವಾನಿಸಲಾಗಿದೆ.

ಭಾರತವು ಇಂದು 5,00,000 ಡೋಸ್ ಕೊವಿಡ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು. ಯುದ್ಧ ಪೀಡಿತ ದೇಶಕ್ಕೆ ಮುಂಬರುವ ವಾರಗಳಲ್ಲಿ ಮತ್ತೆ 5 ಲಕ್ಷ ಡೋಸ್‌ ಲಸಿಕೆಗಳನ್ನು ಪೂರೈಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದಕ್ಕೂ ಮೊದಲು, ಡಿಸೆಂಬರ್ 11ರಂದು, ಭಾರತವು ವಿಶ್ವ ಆರೋಗ್ಯ ಸಂಸ್ಥೆ (WHO) ಮೂಲಕ 1.6 ಮೆಟ್ರಿಕ್ ಟನ್ ಜೀವರಕ್ಷಕ ಔಷಧಗಳನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿತ್ತು. ಔಷಧಿಗಳನ್ನು ದೆಹಲಿಯಿಂದ ರಿಟರ್ನ್ ಕಾಮ್ ಏರ್ ವಿಮಾನದ ಮೂಲಕ ಕಳುಹಿಸಲಾಯಿತು. ಕಾಬೂಲ್‌ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

ಮುಂಬರುವ ವಾರಗಳಲ್ಲಿ ನಾವು ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮತ್ತು ಉಳಿದ ವೈದ್ಯಕೀಯ ಸಹಾಯವನ್ನು ಮಾಡುತ್ತೇವೆ. ಆಹಾರ ಧಾನ್ಯಗಳು, ಒಂದು ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಮತ್ತು ಅಗತ್ಯ ಜೀವ ಉಳಿಸುವ ಔಷಧಿಗಳ ಮೂಲಕ ಅಫ್ಘಾನ್ ಜನರಿಗೆ ಮಾನವೀಯ ನೆರವು ನೀಡಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೊವಿಶೀಲ್ಡ್ ಕೊವಿಡ್ ಲಸಿಕೆಯ ಸಂಪೂರ್ಣ ಅನುಮೋದನೆಗಾಗಿ  ಅರ್ಜಿ ಸಲ್ಲಿಸಿದ ಸೆರಮ್ ಇನ್‌ಸ್ಟಿಟ್ಯೂಟ್ 

ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ; ಮಕ್ಕಳ ವ್ಯಾಕ್ಸಿನೇಷನ್‌ ಕುರಿತು ಮಾರ್ಗಸೂಚಿ ಬಿಡುಗಡೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ