AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccine: ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊವಿಡ್ ಲಸಿಕೆ ರವಾನೆ

ಭಾರತವು ಇಂದು 5,00,000 ಡೋಸ್ ಕೊವಿಡ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

Covid Vaccine: ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊವಿಡ್ ಲಸಿಕೆ ರವಾನೆ
ಕೊರೊನಾ ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 01, 2022 | 3:00 PM

Share

ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್​ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ, ವೈದ್ಯಕೀಯ ಸಲಕರಣೆಗಳನ್ನು ರವಾನಿಸಲಾಗಿದೆ.

ಭಾರತವು ಇಂದು 5,00,000 ಡೋಸ್ ಕೊವಿಡ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು. ಯುದ್ಧ ಪೀಡಿತ ದೇಶಕ್ಕೆ ಮುಂಬರುವ ವಾರಗಳಲ್ಲಿ ಮತ್ತೆ 5 ಲಕ್ಷ ಡೋಸ್‌ ಲಸಿಕೆಗಳನ್ನು ಪೂರೈಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದಕ್ಕೂ ಮೊದಲು, ಡಿಸೆಂಬರ್ 11ರಂದು, ಭಾರತವು ವಿಶ್ವ ಆರೋಗ್ಯ ಸಂಸ್ಥೆ (WHO) ಮೂಲಕ 1.6 ಮೆಟ್ರಿಕ್ ಟನ್ ಜೀವರಕ್ಷಕ ಔಷಧಗಳನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿತ್ತು. ಔಷಧಿಗಳನ್ನು ದೆಹಲಿಯಿಂದ ರಿಟರ್ನ್ ಕಾಮ್ ಏರ್ ವಿಮಾನದ ಮೂಲಕ ಕಳುಹಿಸಲಾಯಿತು. ಕಾಬೂಲ್‌ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

ಮುಂಬರುವ ವಾರಗಳಲ್ಲಿ ನಾವು ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮತ್ತು ಉಳಿದ ವೈದ್ಯಕೀಯ ಸಹಾಯವನ್ನು ಮಾಡುತ್ತೇವೆ. ಆಹಾರ ಧಾನ್ಯಗಳು, ಒಂದು ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಮತ್ತು ಅಗತ್ಯ ಜೀವ ಉಳಿಸುವ ಔಷಧಿಗಳ ಮೂಲಕ ಅಫ್ಘಾನ್ ಜನರಿಗೆ ಮಾನವೀಯ ನೆರವು ನೀಡಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೊವಿಶೀಲ್ಡ್ ಕೊವಿಡ್ ಲಸಿಕೆಯ ಸಂಪೂರ್ಣ ಅನುಮೋದನೆಗಾಗಿ  ಅರ್ಜಿ ಸಲ್ಲಿಸಿದ ಸೆರಮ್ ಇನ್‌ಸ್ಟಿಟ್ಯೂಟ್ 

ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ; ಮಕ್ಕಳ ವ್ಯಾಕ್ಸಿನೇಷನ್‌ ಕುರಿತು ಮಾರ್ಗಸೂಚಿ ಬಿಡುಗಡೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು