AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!

Covid 19 Vaccine price| 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 21, 2021 | 12:15 PM

Share

ನವದೆಹಲಿ: ಮೇ 1ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ ಹೆಚ್ಚಾಗುವ ಸಾಧ್ಯತೆ. ಏಕೆಂದರೆ ಖಾಸಗಿ ಆಸ್ಪತ್ರೆಗಳು ಲಸಿಕೆ ಉತ್ಪಾದಕ ಕಂಪನಿಗಳಿಂದ ನೇರವಾಗಿ ಲಸಿಕೆ ಖರೀದಿಸಬೇಕು. 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ ಎಂದು ತಿಳಿದುಬಂದಿದೆ.

ಕೊವಿಡ್ ಲಸಿಕೆ ತಯಾರಿಕಾ ಕಂಪನಿಗಳು ಈ ಹಿಂದೆಯೇ ಹೇಳಿದಂತೆ ಕೊವಿಡ್ ಲಸಿಕೆ 1 ಸಾವಿರದಿಂದ 2 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ 1 ಸಾವಿರ ರೂ. ಆಗಬಹುದು ಎಂದು ವಿಶ್ವದ ಅತಿ ದೊಡ್ಡ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್ಸ್​ಟಿಟ್ಯೂಟ್​ ಸಿಇಒ ಆಧರ್ ಪೂನಾವಾಲಾ ಅವರೇ ಹೇಳಿದ್ದರು. ಇನ್ನು ಭಾರತ್​ ಬಯೋಟೆಕ್​ ಕಂಪನಿಯ ಕೃಷ್ಣಾ ಎಲ್ಲಾ ಪ್ರಕಾರ ಆರಂಭದಲ್ಲಿ ಬೆಲೆಗಳು ಇನ್ನೂ ಹೆಚ್ಚಾಗಿಯೇ ಇರಲಿವೆ. ಕೇಂದ್ರದೊಂದಿಗೆ ಆಗಿರುವ ಒಪ್ಪಂದದ ಪ್ರಕಾರ ಪ್ರಸ್ತುತ, ಸೀರಂ ಕಂಪನಿ 150 ರೂ.ಗೆ ಮತ್ತು ಭಾರತ್​ ಬಯೋಟೆಕ್​ 206 ರೂಪಾಯಿಗೆ (ತೆರಿಗೆಗಳು ಪ್ರತ್ಯೇಕ) ಸರಬರಾಜು ಮಾಡುತ್ತಿವೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:44 am, Wed, 21 April 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ