AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!

Covid 19 Vaccine price| 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ.

ಮೇ 1 ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ; ದರ ದುಪ್ಪಟ್ಟು ಆಗಲಿದೆ!
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on:Apr 21, 2021 | 12:15 PM

Share

ನವದೆಹಲಿ: ಮೇ 1ರಿಂದ ಕೊವಿಡ್ ಲಸಿಕೆ 250 ರೂ.ಗೆ ಸಿಗುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ ಹೆಚ್ಚಾಗುವ ಸಾಧ್ಯತೆ. ಏಕೆಂದರೆ ಖಾಸಗಿ ಆಸ್ಪತ್ರೆಗಳು ಲಸಿಕೆ ಉತ್ಪಾದಕ ಕಂಪನಿಗಳಿಂದ ನೇರವಾಗಿ ಲಸಿಕೆ ಖರೀದಿಸಬೇಕು. 1 ಡೋಸ್ ಕೊವಿಡ್ ಲಸಿಕೆ 500ರಿಂದ 1 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಇದೇ ವೇಳೆ, ಖಾಸಗಿ ಆಸ್ಪತ್ರೆಗಳು ದುಪ್ಪಟ್ಟು ದರಕ್ಕೆ ಲಸಿಕೆ ಮಾರಲು ಅನುಮತಿ ಕೋರಿವೆ ಎಂದು ತಿಳಿದುಬಂದಿದೆ.

ಕೊವಿಡ್ ಲಸಿಕೆ ತಯಾರಿಕಾ ಕಂಪನಿಗಳು ಈ ಹಿಂದೆಯೇ ಹೇಳಿದಂತೆ ಕೊವಿಡ್ ಲಸಿಕೆ 1 ಸಾವಿರದಿಂದ 2 ಸಾವಿರ ರೂ.ಗೆ ಮಾರಾಟವಾಗುವ ಸಾಧ್ಯತೆಯಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ದರ 1 ಸಾವಿರ ರೂ. ಆಗಬಹುದು ಎಂದು ವಿಶ್ವದ ಅತಿ ದೊಡ್ಡ ಲಸಿಕೆ ತಯಾರಿಕಾ ಕಂಪನಿಯಾದ ಸೀರಮ್​ ಇನ್ಸ್​ಟಿಟ್ಯೂಟ್​ ಸಿಇಒ ಆಧರ್ ಪೂನಾವಾಲಾ ಅವರೇ ಹೇಳಿದ್ದರು. ಇನ್ನು ಭಾರತ್​ ಬಯೋಟೆಕ್​ ಕಂಪನಿಯ ಕೃಷ್ಣಾ ಎಲ್ಲಾ ಪ್ರಕಾರ ಆರಂಭದಲ್ಲಿ ಬೆಲೆಗಳು ಇನ್ನೂ ಹೆಚ್ಚಾಗಿಯೇ ಇರಲಿವೆ. ಕೇಂದ್ರದೊಂದಿಗೆ ಆಗಿರುವ ಒಪ್ಪಂದದ ಪ್ರಕಾರ ಪ್ರಸ್ತುತ, ಸೀರಂ ಕಂಪನಿ 150 ರೂ.ಗೆ ಮತ್ತು ಭಾರತ್​ ಬಯೋಟೆಕ್​ 206 ರೂಪಾಯಿಗೆ (ತೆರಿಗೆಗಳು ಪ್ರತ್ಯೇಕ) ಸರಬರಾಜು ಮಾಡುತ್ತಿವೆ.

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:44 am, Wed, 21 April 21

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ