AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid XE Variant: ಭಾರತಕ್ಕೂ ಕಾಲಿಟ್ಟ ಹೊಸ ಕೊವಿಡ್ ರೂಪಾಂತರಿ; ಮುಂಬೈನಲ್ಲಿ ಮೊದಲ XE ವೈರಸ್ ಪತ್ತೆ

ಇಂಗ್ಲೆಂಡ್​​ನಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ರೂಪಾಂತರಿ ಎಕ್ಸ್​​ಇ ಪತ್ತೆಯಾಗಿತ್ತು. ಆ ಅಪಾಯಕಾರಿ ಕೊವಿಡ್ ರೂಪಾಂತರಿ ವೈರಸ್ ಭಾರತದಲ್ಲೂ ಪತ್ತೆಯಾಗಿದ್ದು, ಮುಂಬೈನಲ್ಲಿ ಮೊದಲ ಸೋಂಕು ದೃಢಪಟ್ಟಿದೆ.

Covid XE Variant: ಭಾರತಕ್ಕೂ ಕಾಲಿಟ್ಟ ಹೊಸ ಕೊವಿಡ್ ರೂಪಾಂತರಿ; ಮುಂಬೈನಲ್ಲಿ ಮೊದಲ XE ವೈರಸ್ ಪತ್ತೆ
ಕೊವಿಡ್ ರೂಪಾಂತರಿ
TV9 Web
| Edited By: |

Updated on:Apr 06, 2022 | 6:03 PM

Share

ಮುಂಬೈ: ಇಂಗ್ಲೆಂಡ್​ನಲ್ಲಿ ಪತ್ತೆಯಾಗಿರುವ ಕೊವಿಡ್ ರೂಪಾಂತರಿ ಎಕ್ಸ್​​ಇ (Covid Variant XE) ಇಡೀ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿತ್ತು. ಇದೀಗ ಆ ಅಪಾಯಕಾರಿ ಕೊವಿಡ್ ರೂಪಾಂತರಿ ವೈರಸ್ ಭಾರತದಲ್ಲೂ ಪತ್ತೆಯಾಗುವ ಮೂಲಕ ದೇಶಾದ್ಯಂತ ಎಚ್ಚರಿಕೆ ಗಂಟೆ ಬಾರಿಸಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಮೊದಲ ಹೊಸ ಕೊವಿಡ್ ರೂಪಾಂತರಿ ಎಕ್ಸ್​ಇ ಪತ್ತೆಯಾಗಿದೆ. 376 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಮಾದರಿಗಳಲ್ಲಿ ಒಂದು XE ರೂಪಾಂತರಿ ದೃಢಪಟ್ಟಿದೆ.

ಇಂಗ್ಲೆಂಡ್​​ನಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ರೂಪಾಂತರಿ ಪತ್ತೆಯಾಗಿತ್ತು. ಈ ಹೊಸ ರೂಪಾಂತರಿಯು ಒಮಿಕ್ರಾನ್ ತಳಿಯ ಬಿಎ.2 ಉಪ ತಳಿಗಿಂತಲೂ ಶೇ. 10ರಷ್ಟು ಹೆಚ್ಚು ಹರಡುವಿಕೆಯನ್ನು ಹೊಂದಿದೆ. ಎಲ್ಲ ಕೋವಿಡ್ 19 ರೂಪಾಂತರಗಳಲ್ಲಿಯೂ ಒಮಿಕ್ರಾನ್‌ನ ಬಿಎ.2 ಅತ್ಯಂತ ಹೆಚ್ಚು ಪ್ರಸರಣ ಹೊಂದುವ ಸೋಂಕು ಎಂದು ಈವರೆಗೂ ನಂಬಲಾಗಿತ್ತು. ಆದರೆ, ಈ ಹೊಸ ರೂಪಾಂತರಿ ಒಮಿಕ್ರಾನ್​ಗಿಂತಲೂ ವ್ಯಾಪಕವಾಗಿ ಹರಡಲಿದೆ ಎನ್ನಲಾಗಿದೆ. ಈ ರೂಪಾಂತರಿ ಈಗ ಮುಂಬೈಗೆ ಕಾಲಿಟ್ಟಿದೆ. ಭಾರತದೊಳಗೆ ಯಾವ ರೋಗಿಯಿಂದ ಈ ರೂಪಾಂತರಿ ವೈರಸ್ ಕಾಣಿಸಿಕೊಂಡಿದೆ, ಯಾವ ದೇಶದಿಂದ ಬಂದ ವ್ಯಕ್ತಿಯಿಂದ ಈ ವೈರಸ್ ಬಂದಿದೆ, ಆ ರೋಗಿಯ ಟ್ರಾವೆಲ್ ಹಿಸ್ಟರಿ ಮುಂತಾದವುಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಒಮಿಕ್ರಾನ್ ತಳಿಯ ಬಿಎ.1 ಮತ್ತು ಬಿಎ.2 ಉಪತಳಿಗಳ ರೂಪಾಂತರವನ್ನು ಗುರುತಿಸಲಾಗಿದ್ದು, ಇದಕ್ಕೆ ಎಕ್ಸ್‌ಇ ವೇರಿಯಂಟ್ (XE Variant) ಎಂದು ಹೆಸರಿಡಲಾಗಿದೆ. ಇದು ‘ಮರು ಸಂಯೋಜಿತ’ ಎಂದು ಉಲ್ಲೇಖಿಸಲಾಗಿದೆ. ಎಕ್ಸ್‌ಇ ರೂಪಾಂತರಿಯು BA.2 ತಳಿಗಿಂತಲೂ ಶೇ 9.8ರಷ್ಟು ಹೆಚ್ಚು ಹರಡುವಿಕೆಯನ್ನು ಹೊಂದಿದೆ. ಕೆಲವು ದೇಶಗಳಲ್ಲಿ ಕೊವಿಡ್-19 ಕಡಿಮೆಯಾಗಲು ಪ್ರಾರಂಭಿಸಿದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ (WHO) ಒಮಿಕ್ರಾನ್‌ನ ಹೊಸ ರೂಪಾಂತರಿಯಾದ ‘XE’ ಆತಂಕ ಮೂಡಿಸಿದೆ. ಇದು ಇದುವರೆಗಿನ ಎಲ್ಲ ಕೊರೊನಾವೈರಸ್‌ಗಿಂತ ಹೆಚ್ಚು ವ್ಯಾಪಕವಾಗಿ ಹರಡುತ್ತದೆ. ಒಮಿಕ್ರಾನ್‌ನ BA.2 ಉಪ-ವ್ಯತ್ಯಯವು ವಿಶೇಷವಾಗಿ ಅಮೆರಿಕಾ ಮತ್ತು ಇಂಗ್ಲೆಂಡ್​ನಂತಹ ದೇಶಗಳಲ್ಲಿ ವೇಗವಾಗಿ ಹರಡುತ್ತಿದೆ. ಈ ಎರಡು ರಾಷ್ಟ್ರಗಳ ಹೊರತಾಗಿ ಚೀನಾದಲ್ಲಿ ಕೂಡ ಕೊವಿಡ್ ಪ್ರಕರಣಗಳ ಉಲ್ಬಣವಾಗುತ್ತಿದೆ. ಮಾರ್ಚ್‌ನಲ್ಲಿ ಮಾತ್ರ ಭಾರತದಲ್ಲಿ 1.4 ಲಕ್ಷ ಕೊವಿಡ್ ಪ್ರಕರಣಗಳನ್ನು ಕಂಡಿತು. ಅವುಗಳಲ್ಲಿ ಹೆಚ್ಚಿನವು ಶಾಂಘೈ ಮತ್ತು ಜಿಲಿನ್ ಪ್ರದೇಶಗಳಲ್ಲಿ ಕಂಡುಬಂದಿವೆ.

ಈ ಹೊಸ ಕೊವಿಡ್ ರೂಪಾಂತರವು ಮರುಸಂಯೋಜಿತ ರೂಪಾಂತರಿಯಾಗಿದೆ. ಅಂದರೆ ಇದು ಒಮಿಕ್ರಾನ್ ರೂಪಾಂತರದ ಎರಡು ಹಿಂದಿನ ಆವೃತ್ತಿಗಳ ರೂಪಾಂತರಿತ ಹೈಬ್ರಿಡ್ ಆಗಿದೆ. BA.1 ಮತ್ತು BA.2 ಇದು ಮೊದಲ ಕಾಳಜಿಯ ರೂಪಾಂತರವಾದಾಗ ಪ್ರಪಂಚದಾದ್ಯಂತ ಹರಡಿತು. ಈ ಕೊವಿಡ್ ರೂಪಾಂತರಿ BA.2 ಗಿಂತ ಹೆಚ್ಚು ಹರಡುತ್ತದೆ. ವರದಿಗಳ ಪ್ರಕಾರ, ಹೊಸ ರೂಪಾಂತರವು BA.2 ಸಬ್‌ವೇರಿಯಂಟ್‌ಗಿಂತ ಶೇ. 10ರಷ್ಟು ಹೆಚ್ಚು ಹರಡುತ್ತದೆ. ಇದು ಈಗಾಗಲೇ ಹೆಚ್ಚು ಸಾಂಕ್ರಾಮಿಕವಾಗಿದೆ. WHO ಪ್ರಕಾರ, ಒಮಿಕ್ರಾನ್ ಸ್ಟ್ರೈನ್‌ನ ಉಪರೂಪವಾಗಿರುವ BA.2 ಕೊವಿಡ್ ವೈರಸ್‌ನ ಅತ್ಯಂತ ಪ್ರಬಲವಾದ ತಳಿಯಾಗಿದೆ.

XE ಕೊವಿಡ್ ರೂಪಾಂತರಿ ಹೆಚ್ಚು ವ್ಯಾಪಕವಾಗಿ ಹರಡದಿದ್ದರೂ ಮುಂದಿನ ದಿನಗಳಲ್ಲಿ ಈ ಸೋಂಕು ಅತ್ಯಂತ ಹೆಚ್ಚಾಗಿ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಇದು ಅತ್ಯಂತ ಪ್ರಬಲವಾದ ಸ್ಟ್ರೈನ್ ಆಗಲಿದೆ ಎನ್ನಲಾಗಿದೆ. XE ಮರುಸಂಯೋಜಕ (BA.1-BA.2) ಜನವರಿ 19ರಂದು ಇಂಗ್ಲೆಂಡ್​ನಲ್ಲಿ ಮೊದಲ ಬಾರಿಗೆ ಪತ್ತೆಯಾಯಿತು. ಜಾಗತಿಕ ಆರೋಗ್ಯ ಸಂಸ್ಥೆಯು ಇದುವರೆಗಿನ ಯಾವುದೇ ಕೋವಿಡ್ ಸ್ಟ್ರೈನ್‌ಗಿಂತ ಈ ರೂಪಾಂತರಿ ಹೆಚ್ಚು ಹರಡಬಹುದು ಎಂದು ಸೂಚಿಸಿದೆ.

ಇದನ್ನೂ ಓದಿ:  Covid 4th Wave: ಚೀನಾದಲ್ಲಿ ಲಾಕ್​ಡೌನ್, ಫ್ರಾನ್ಸ್​ನಲ್ಲಿ ಹೆಚ್ಚಿದ ಕೊವಿಡ್ ರೋಗಿಗಳ ಸಂಖ್ಯೆ; ಭಾರತದಲ್ಲೂ ಮತ್ತೆ ಕೊರೊನಾ ಆತಂಕ

Covid Vaccine: 12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ನಿರೋಧಕ ಲಸಿಕೆ

Published On - 5:44 pm, Wed, 6 April 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು