Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Virus: ಕೊರೊನಾ ಬಗ್ಗೆ ಜಾಗೃತಿ ಮೂಡಿಸುವಂತೆ ಖಾಸಗಿ ವಾಹಿನಿಗಳಿಗೆ ಸೂಚಿಸಿದ ಕೇಂದ್ರ

ನಾಗರಿಕರ ಅನುಕೂಲಕ್ಕಾಗಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳನ್ನು ಸಹ ರಚಿಸಲಾಗಿದೆ ಮತ್ತು ಪ್ರಚಾರ ಮಾಡಿದೆ ಎಂದು ಸರ್ಕಾರದ ಸಲಹೆಯಲ್ಲಿ ತಿಳಿಸಲಾಗಿದೆ.

Corona Virus: ಕೊರೊನಾ ಬಗ್ಗೆ ಜಾಗೃತಿ ಮೂಡಿಸುವಂತೆ ಖಾಸಗಿ ವಾಹಿನಿಗಳಿಗೆ ಸೂಚಿಸಿದ ಕೇಂದ್ರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 14, 2021 | 1:06 PM

ದೆಹಲಿ: ಕೊವಿಡ್ -19 ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರದ ಜೊತೆಗೆ ಕೈಜೋಡಿಸುವಂತೆ ಖಾಸಗಿ ಟೆಲಿವಿಷನ್ ಚಾನಲ್​ಗಳನ್ನು ಕೇಂದ್ರ ಸರ್ಕಾರ ಕೋರಿದೆ. ಕೇಂದ್ರವು ಭಾನುವಾರ ಖಾಸಗಿ ಟೆಲಿವಿಷನ್ ಚಾನೆಲ್‌ಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ನಾಲ್ಕು ರಾಷ್ಟ್ರಮಟ್ಟದ ಸಹಾಯವಾಣಿ ಸಂಖ್ಯೆಗಳನ್ನು ವಾಹಿನಿಯಲ್ಲಿ ಪ್ರದರ್ಶಿಸುವ ಮೂಲಕ ಕೊವಿಡ್ ಟ್ರೀಟ್ಮೆಂಟ್ ಪ್ರೋಟೋಕಾಲ್, ಸೂಕ್ತವಾದ ನಡವಳಿಕೆ ಮತ್ತು ವ್ಯಾಕ್ಸಿನೇಷನ್ ಎಂಬ ಮೂರು ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರ ಬಯಸಿದೆ ಎಂದು ತಿಳಿಸಿದ್ದಾರೆ.

ಕಳೆದ ಹಲವಾರು ತಿಂಗಳುಗಳಿಂದ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಲು ಸರ್ಕಾರವು ಮುದ್ರಣ, ಟಿವಿ, ರೇಡಿಯೋ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಉಪಕರಣಗಳು ಮತ್ತು ಮಾಧ್ಯಮ ವೇದಿಕೆಗಳನ್ನು ಬಳಸಿಕೊಳ್ಳುತ್ತಿದೆ. ನಾಗರಿಕರ ಅನುಕೂಲಕ್ಕಾಗಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳನ್ನು ಸಹ ರಚಿಸಲಾಗಿದೆ ಮತ್ತು ಪ್ರಚಾರ ಮಾಡಿದೆ ಎಂದು ಸರ್ಕಾರದ ಸಲಹೆಯಲ್ಲಿ ತಿಳಿಸಲಾಗಿದೆ.

ಈ ಕೆಲಸವನ್ನು ಮತ್ತಷ್ಟು ಹೆಚ್ಚಿಸಲು, ಖಾಸಗಿ ಟಿವಿ ಚಾನೆಲ್‌ಗಳು ಈ ಕೆಳಗಿನ ನಾಲ್ಕು ರಾಷ್ಟ್ರೀಯ ಮಟ್ಟದ ಸಹಾಯವಾಣಿ ಸಂಖ್ಯೆಗಳ ಬಗ್ಗೆ ಟಿಕ್ಕರ್ ಮೂಲಕ ಅಥವಾ ನಿಯತಕಾಲಿಕಗಳಲ್ಲಿ, ಹಾಗೂ ದೂರದರ್ಶನದಲ್ಲಿ ವಿಶೇಷವಾಗಿ ಪ್ರಧಾನ ಸಮಯದಲ್ಲಿ ಈ ಸಂಖ್ಯೆಗಳನ್ನು ಪ್ರದರ್ಶಿಸುವ ಮೂಲಕ ಇನ್ನಷ್ಟು ಜಾಗೃತಿ ಮೂಡಿಸಲು ಸೂಚಿಸಲಾಗಿದೆ.

ಸರ್ಕಾರ ನೀಡಿರುವ ನಾಲ್ಕು ಸಹಾಯವಾಣಿ ಸಂಖ್ಯೆಗಳು ಹೀಗಿದೆ: – 1075 (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ) – 1098 (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಹಾಯವಾಣಿ ಸಂಖ್ಯೆ) – 14567 (ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಹಿರಿಯ ನಾಗರಿಕರ ಸಹಾಯವಾಣಿ) – 08046110007 (ಮಾನಸಿಕ ಬೆಂಬಲಕ್ಕಾಗಿ NIMHANS ನ ಸಹಾಯವಾಣಿ ಸಂಖ್ಯೆ)

ಮಾರ್ಚ್ ತಿಂಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಎಲೆಕ್ಟ್ರಾನಿಕ್ ಮಾಧ್ಯಮದೊಂದಿಗೆ ಸಂವಾದ ನಡೆಸಿದ್ದರು. ಟೆಲಿವಿಷನ್ ಚಾನೆಲ್​ಗಳು ವೈಜ್ಞಾನಿಕ ವರದಿಗಳನ್ನು ಪ್ರಸಾರ ಮಾಡಲು, ತಿಳುವಳಿಕೆಯುಳ್ಳ ಜನರನ್ನು ತಮ್ಮ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ಎದುರಿಸಲು ಹಾಗೂ ಕೊರೊನಾ ತಡೆಯಲು ಮಾರ್ಗಸೂಚಿಗಳ ಮಹತ್ವವನ್ನು ಎತ್ತಿ ತೋರಿಸುವಂತೆ ಕೇಳಿಕೊಂಡಿದ್ದರು.

ಕೊವಿಡ್ -19 ರ ಸುತ್ತ ತಪ್ಪು ಮಾಹಿತಿಯ ಹರಡುವಿಕೆಯನ್ನು ನಿಲ್ಲಿಸುವುದು ಮತ್ತು ಅದರ ಸುತ್ತಲಿನ ಸುಳ್ಳುಗಳನ್ನು ಬಹಿರಂಗಪಡಿಸುವುದು ಕೇಂದ್ರ ಸರ್ಕಾರದ ಆದ್ಯತೆಗಳಾಗಿವೆ. ಕೇಂದ್ರ ಸರ್ಕಾರದ ಟ್ವಿಟರ್ ಹ್ಯಾಂಡಲ್ ಪಿಐಬಿಫ್ಯಾಕ್ಟ್ ಚೆಕ್ ಮೂಲಕ ಈ ಬಗ್ಗೆ ಹೋರಾಡಲಾಗುತ್ತಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತನ ಮೃತದೇಹವನ್ನು ನದಿಗೆ ಎಸೆದು ಹೋದ ಸಂಬಂಧಿಕರು; ವೈರಲ್ ವಿಡಿಯೋ ನೋಡಿ ಪ್ರಕರಣ ದಾಖಲು

ಭಾರತ ಇತರೆ ರಾಷ್ಟ್ರಗಳ ಆಲೋಚನೆ ಮತ್ತು ಒತ್ತಡಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿಲ್ಲ -ಮೋದಿ

Published On - 5:44 pm, Sun, 30 May 21

ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ