AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield Vaccine: ಸದ್ಯದಲ್ಲೇ ಕೋವಿಶೀಲ್ಡ್ ಲಸಿಕೆಯ ಡೋಸ್​ಗಳ ಅಂತರ ಇಳಿಕೆ ಸಾಧ್ಯತೆ

Covid-19 Vaccine | ಈಗ ಕೋವಿಶೀಲ್ಡ್​ ಲಸಿಕೆಯ ಡೋಸ್​ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಿದೆ.

Covishield Vaccine: ಸದ್ಯದಲ್ಲೇ ಕೋವಿಶೀಲ್ಡ್ ಲಸಿಕೆಯ ಡೋಸ್​ಗಳ ಅಂತರ ಇಳಿಕೆ ಸಾಧ್ಯತೆ
ಸೆರಮ್ ಇನ್ಸ್‌ಟಿಟ್ಯೂಟ್‌ನ ಕೊವಿಶೀಲ್ಡ್ ಲಸಿಕೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 26, 2021 | 8:53 PM

Share

ನವದೆಹಲಿ: ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೊನಾ ಲಸಿಕೆ (Coronavirus Vaccine) ಅಭಿಯಾನ ನಡೆಯುತ್ತಿದ್ದು, ಕೋವಿಡ್ ಲಸಿಕೆಗಳ (Covid-19 Vaccine) ಕೊರತೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಡೋಸ್​ಗಳ ನಡುವಿನ ಅಂತರವನ್ನು ಹೆಚ್ಚಿಸುವ ಬಗ್ಗೆ ಈ ಹಿಂದೆ ಕೋವಿಶೀಲ್ಡ್​ ಲಸಿಕೆಯನ್ನು(Covishield Vaccine)  ಸಿದ್ಧಪಡಿಸುತ್ತಿರುವ ಸೀರಂ ಸಂಸ್ಥೆ (Serum Institute) ಪ್ರಸ್ತಾವನೆ ಇಟ್ಟಿದ್ದರು. ಅದರಂತೆ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್​ಗಳ ನಡುವಿನ ಅಂತರವನ್ನು 16 ವಾರಗಳಿಗೆ ವಿಸ್ತರಣೆ ಮಾಡಲಾಗಿತ್ತು. ಆದರೆ, ಈಗ ಕೋವಿಶೀಲ್ಡ್​ ಲಸಿಕೆಯ ಡೋಸ್​ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಿದೆ.

ಭಾರತದಲ್ಲಿ ಕೊವಿಡ್ ಲಸಿಕೆಯ ಡೋಸ್​ಗಳ ಅಂತರದ ಬಗ್ಗೆ NTAGI ತೀರ್ಮಾನ ತೆಗೆದುಕೊಳ್ಳುತ್ತದೆ. ಕೋವಿಶೀಲ್ಡ್​ ಲಸಿಕೆಯ ಡೋಸ್​ಗಳ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಯೋಚಿಸಲಾಗಿದ್ದು, ಈ ಲಸಿಕೆಯ ಲಭ್ಯತೆಯ ಆಧಾರದ ಮೇಲೆ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು. ಕೋವಿಶೀಲ್ಡ್​ ಲಸಿಕೆಯ ಮೊದಲ ಮತ್ತು ಎರಡನೇ ಡೋಸ್​ನ ನಡುವೆ ಸದ್ಯಕ್ಕೆ 12ರಿಂದ 16 ವಾರಗಳ ಅಂತರವಿದೆ. ಈಗಾಗಲೇ 3 ಬಾರಿ ಕೋವಿಶೀಲ್ಡ್​ ಲಸಿಕೆಯ ಡೋಸ್​ನ ಅಂತರವನ್ನು ಹೆಚ್ಚಿಸಲಾಗಿದೆ. ಈ ಅಂತರವನ್ನು ತಗ್ಗಿಸುವ ಬಗ್ಗೆ ಈಗ ಚರ್ಚೆಗಳು ನಡೆದಿವೆ.

ಕೋವಿಶೀಲ್ಡ್​ ಲಸಿಕೆಯ ಎರಡು ಡೋಸ್​ಗಳ ನಡುವೆ ಆರಂಭದಲ್ಲಿ 4ರಿಂದ 6 ವಾರಗಳ ಅಂತರವಿತ್ತು. ಬಳಿಕ ಅದನ್ನು 6ರಿಂದ 8 ವಾರಗಳಿಗೆ ಹೆಚ್ಚಿಸಲಾಯಿತು. ನಂತರ ಕಳೆದ ಮೇ ತಿಂಗಳಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್​ಗಳ ನಡುವಿನ ಅಂತರವನ್ನು 12ರಿಂದ 16 ವಾರಗಳಿಗೆ ವಿಸ್ತರಿಸಲಾಯಿತು. ಮುಂದಿನ ಮೂರು ತಿಂಗಳವರೆಗೆ ರಾಷ್ಟ್ರೀಯ ಕೋವಿಡ್ ಲಸಿಕೆ ಅಭಿಯಾನದ ಅಂಗವಾಗಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ ಲಸಿಕೆಗಳನ್ನು ಸುಮಾರು 78 ಕೋಟಿ ಡೋಸ್‌ಗಳಷ್ಟು ಉತ್ಪಾದನೆ ಮಾಡಬೇಕೆಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಸೆಪ್ಟೆಂಬರ್ ನಲ್ಲಿ 26 ಕೋಟಿ ಡೋಸ್ ಮತ್ತು ಅಕ್ಟೋಬರ್ ನಲ್ಲಿ 28 ಕೋಟಿ ಡೋಸ್​ ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಲಸಿಕೆಯನ್ನು ವಿತರಿಸಲಾಗುವುದು.

ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಬಗ್ಗೆ ಪ್ರಯೋಗಗಳು ನಡೆಯುತ್ತಿವೆ. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ. ಅದು ಯಶಸ್ವಿಯಾದರೆ ಸೆಪ್ಟೆಂಬರ್ ವೇಳೆಗೆ ಪ್ರತಿ ತಿಂಗಳಿಗೆ 10 ಕೋಟಿ ಕೊವ್ಯಾಕ್ಸಿನ್ ಡೋಸ್​ಗಳನ್ನು ಉತ್ಪಾದಿಸಲಾಗುವುದು.

ಈಗಾಗಲೇ ಭಾರತ ಮೂಲದ ಜೈಡಸ್ ಕ್ಯಾಡಿಲಾ ಕಂಪನಿಯು ಜೈಕೋವ್-ಡಿ ಎಂಬ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಜೈಕೋವ್-ಡಿ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ನೀಡಬಹುದು. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್​ನಲ್ಲಿ ಈ ಲಸಿಕೆ ಲಭ್ಯವಾಗಲಿದೆ. ಸೆಪ್ಟೆಂಬರ್​ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ. ಇದು ಭಾರತದಲ್ಲಿ ಲಭ್ಯವಾಗುತ್ತಿರುವ 6ನೇ ಕೊವಿಡ್ ಲಸಿಕೆಯಾಗಿದೆ.

ಅಕ್ಟೋಬರ್ ತಿಂಗಳ ವೇಳೆಗೆ ಡಿಎನ್​ಎ ಆಧಾರಿತ ಏಕೈಕ ಕೊವಿಡ್ ಲಸಿಕೆಯಾಗಿರುವ ಜೈಕೋವ್-ಡಿ ಲಸಿಕೆಯನ್ನು ತಿಂಗಳಿಗೆ 1 ಕೋಟಿ ಡೋಸ್ ಉತ್ಪಾದನೆ ಮಾಡುವುದಾಗಿ ಜೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ. ಹಾಗೇ, 2022ರ ಜನವರಿ ಅಂತ್ಯದ ವೇಳೆಗೆ ಪ್ರತಿ ತಿಂಗಳಿಗೆ 4ರಿಂದ 5 ಕೋಟಿ ಕೊವಿಡ್ ಲಸಿಕೆಗಳನ್ನು ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಜೈಡಸ್ ಕ್ಯಾಡಿಲಾ ಕಂಪನಿ ತಿಳಿಸಿದೆ.

ಇದನ್ನೂ ಓದಿ: ZyCov-D Vaccine: ಅಕ್ಟೋಬರ್​ನಲ್ಲಿ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ಜೈಕೋವ್-ಡಿ ಲಸಿಕೆ ಲಭ್ಯ

Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ

(Covishield Vaccine Dose Gap May be Reduced Decision Soon Union Government Sources)

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್