AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತರ ಲಸಿಕೆಗಳಿಗೆ ಹೋಲಿಸಿದರೆ ಕೊವಿಶೀಲ್ಡ್ ಲಸಿಕೆ ಬೆಲೆ ಕಡಿಮೆಯಿದೆ; ಅದಾರ್ ಪೂನಾವಲಾ

Adar Poonawalla: ಜನರ ಆರೋಗ್ಯದ ದೃಷ್ಟಿಯಿಂದ ಬೇರೆ ಲಸಿಕೆಗಳು ಭಾರತಕ್ಕೆ ಬರಬೇಕು. ಈಗ ಉತ್ಪಾದನೆ ಹೆಚ್ಚಿಸಲು ನಾವು ಹೆಚ್ಚಿನ ಹೂಡಿಕೆ ಮಾಡಬೇಕು. ಲಸಿಕೆ ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಬೇಕು. ಸೀಮಿತ ಪ್ರಮಾಣದಲ್ಲಿ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಲಾ ತಿಳಿಸಿದರು.

ಇತರ ಲಸಿಕೆಗಳಿಗೆ ಹೋಲಿಸಿದರೆ ಕೊವಿಶೀಲ್ಡ್ ಲಸಿಕೆ ಬೆಲೆ ಕಡಿಮೆಯಿದೆ; ಅದಾರ್ ಪೂನಾವಲಾ
ಆಧಾರ್ ಪೂನಾವಾಲಾ
Follow us
guruganesh bhat
|

Updated on:Apr 24, 2021 | 6:05 PM

ದೆಹಲಿ: ಕೊವಿಶೀಲ್ಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್​ಗೆ ₹ 600ಕ್ಕೆ ಮಾರಾಟ ಮಾಡುತ್ತಿರುವ ಕುರಿತು ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಲಾ ಸ್ಪಷ್ಟನೆ ನೀಡಿದ್ದಾರೆ. ಕೋವಿಶೀಲ್ಡ್ ಲಸಿಕೆ ಈಗಲೂ ಅಗ್ಗದ ಬೆಲೆಯಲ್ಲಿ ಸಿಗುತ್ತಿದೆ. ಭಾರತದ‌ ಲಸಿಕೆಯ ಬೆಲೆಯನ್ನು ವಿವಿಧ ರಾಷ್ಟ್ರಗಳಲ್ಲಿನ ಲಸಿಕೆ ಬೆಲೆಯ ಜತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಇತರ ದೇಶಗಳಲ್ಲಿ ಬೇರೆ ಕಂಪನಿಗಳು ಮುಂಚಿತವಾಗಿ ಹೂಡಿಕೆ ಮಾಡಿದ್ದರಿಂದ ಕಡಿಮೆ ಬೆಲೆ ನಿಗದಿಪಡಿಸಲಾಗಿದೆ. ನಾವೂ ಸಹ ಪ್ರಾರಂಭದಲ್ಲಿ ಸರ್ಕಾರಕ್ಕೆ ಕಡಿಮೆ ಬೆಲೆಗೆ ಲಸಿಕೆ ಪೂರೈಸಿದ್ದೇವೆ. ಆದರೆ ಇತರ ವೈದ್ಯಕೀಯ ಚಿಕಿತ್ಸೆಗೆ ಹೋಲಿಸಿದರೆ ಕೊವಿಶೀಲ್ಡ್​ನ ಪ್ರತಿ ಡೋಸ್​ಗೆ ನಿಗದಿಪಡಿಸಿರುವ ₹ 600 ಕಡಿಮೆಯೇ ಆಗಿದೆ ಎಂದು ಅವರು ಸ್ಪಷ್ಟಪಡಿಸಿದರು. 

ಜನರ ಆರೋಗ್ಯದ ದೃಷ್ಟಿಯಿಂದ ಬೇರೆ ಲಸಿಕೆಗಳು ಭಾರತಕ್ಕೆ ಬರಬೇಕು. ಈಗ ಉತ್ಪಾದನೆ ಹೆಚ್ಚಿಸಲು ನಾವು ಹೆಚ್ಚಿನ ಹೂಡಿಕೆ ಮಾಡಬೇಕು. ಲಸಿಕೆ ಉತ್ಪಾದನೆ ಸಾಮರ್ಥ್ಯ ಹೆಚ್ಚಿಸಬೇಕು. ಸೀಮಿತ ಪ್ರಮಾಣದಲ್ಲಿ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಲಾ ತಿಳಿಸಿದರು.

ದೆಹಲಿ ಸರ್ಕಾರದ ವಿರುದ್ಧ ಬಿ.ಎಲ್.ಸಂತೋಷ್ ವ್ಯಂಗ್ಯ

ಕೇಂದ್ರ ಸರ್ಕಾರ ಮತ್ತು ದೆಹಲಿ‌ ಸರ್ಕಾರದ ನಡುವೆ ಮೆಡಿಕಲ್ ಆಕ್ಸಿಜನ್ ವಿಷಯದಲ್ಲಿ ಜಟಾಪಟಿ ನಡೆಯುತ್ತಿದೆ. ವೈದ್ಯಕೀಯ ಆಮ್ಲಜನಕ ಒದಗಿಸುವಂತೆ ದೆಹಲಿ ಸರ್ಕಾರ ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು. ದೆಹಲಿ ಸರ್ಕಾರದ ಬೇಡಿಕೆಗೆ ಖಾಲಿ ಟ್ಯಾಂಕರ್ ತಂದು ಆಕ್ಸಿಜನ್ ತೆಗೆದುಕೊಂಡು ಹೋಗಿ ಎಂದು ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿತ್ತು. ದೆಹಲಿ ಸರ್ಕಾರವೇ ಖಾಲಿ ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದ ದೆಹಲಿ ಹೈಕೋರ್ಟ್ ಹೇಳಿತ್ತು. ಆದರೆ ದೆಹಲಿ ಸರ್ಕಾರದ ಬಳಿ ಮೆಡಿಕಲ್ ಆಕ್ಸಿಜನ್ ಸಾಗಿಸುವ ಖಾಲಿ ಟ್ಯಾಂಕರ್​ಗಳೇ ಇರಲಿಲ್ಲ ಎಂದು ರಾಷ್ಟ್ರೀಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಟ್ವೀಟ್ ಮೂಲಲ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವನ್ನು ಟೀಕಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಅಗತ್ಯ ಸಾಮಗ್ರಿಗಳ ಮೇಲೆ ದೆಹಲಿ ಸರ್ಕಾರ ಹೂಡಿಕೆ ಮಾಡಿಲ್ಲ. ಹಂಚಿಕೆಯಾದ ಆಕ್ಸಿಜನ್ ತೆಗೆದುಕೊಂಡು ಹೋಗಿಲ್ಲ. ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಂಡಿಲ್ಲ. ದೆಹಲಿ ಸಿಎಂಗೆ ಎಲ್ಲವೂ ಮನೆ ಬಾಗಿಲಿಗೆ ತಂದುಕೊಡುವುದನ್ನು ಬಯಸುತ್ತಾರೆ ಬೇರೆಯವರತ್ತ ಬೆರಳು ತೋರುವುದರಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರತರಾಗಿದ್ದಾರೆ ಎಂದು ಬಿ.ಎಲ್.ಸಂತೋಷ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Covishield vaccine is cheaper compared to other vaccines says Adar Poonawalla)

Published On - 5:16 pm, Sat, 24 April 21

ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ