Covovax Vaccine: ಖಾಸಗಿ ಕೇಂದ್ರಗಳಲ್ಲಿ 12ರಿಂದ 17 ವರ್ಷದವರಿಗೆ ಕೊವೊವ್ಯಾಕ್ಸ್​ ಲಸಿಕೆ ಲಭ್ಯ

12-17 ವರ್ಷ ವಯಸ್ಸಿನವರು ಈಗ ಖಾಸಗಿ ಆಸ್ಪತ್ರೆಗಳಲ್ಲಿ ಕೊವೋವ್ಯಾಕ್ಸ್​ ಲಸಿಕೆಯನ್ನು ಆಯ್ಕೆ ಮಾಡಬಹುದು. CoWIN ಪೋರ್ಟಲ್‌ನಲ್ಲಿ ಈ ಲಸಿಕೆಗೆ ನೋಂದಾಯಿಸಿಕೊಳ್ಳಬಹುದು.

Covovax Vaccine: ಖಾಸಗಿ ಕೇಂದ್ರಗಳಲ್ಲಿ 12ರಿಂದ 17 ವರ್ಷದವರಿಗೆ ಕೊವೊವ್ಯಾಕ್ಸ್​ ಲಸಿಕೆ ಲಭ್ಯ
ಕೊವಿಡ್ ಲಸಿಕೆ
Follow us
| Updated By: ಸುಷ್ಮಾ ಚಕ್ರೆ

Updated on: May 02, 2022 | 9:36 PM

ನವದೆಹಲಿ: ಭಾರತದ 12ರಿಂದ 17 ವರ್ಷ ವಯಸ್ಸಿನ ಮಕ್ಕಳು ಈಗ ಸೆರಂ ಇನ್‌ಸ್ಟಿಟ್ಯೂಟ್‌ನ (Serum Institute of India) ಕೊವೊವ್ಯಾಕ್ಸ್​ (Covovax) ಕೊರೊನಾವೈರಸ್ ಲಸಿಕೆಯನ್ನು ಖಾಸಗಿ ಸೆಂಟರ್​ಗಳಲ್ಲಿ ಪಡೆಯಬಹುದು. ಸರ್ಕಾರದ CoWIN ಪೋರ್ಟಲ್‌ನಲ್ಲಿ ಈ ಲಸಿಕೆಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೊವೊವ್ಯಾಕ್ಸ್‌ನ 1 ಡೋಸ್‌ಗೆ 900 ರೂ. ಮತ್ತು ಜಿಎಸ್‌ಟಿಯನ್ನು ನಿಗದಿಪಡಿಸಲಾಗಿದೆ. ಹಾಗೇ, 150 ರೂ. ಆಸ್ಪತ್ರೆಯ ಸೇವಾ ಶುಲ್ಕವನ್ನು ಪ್ರತ್ಯೇಕವಾಗಿ ನೀಡಬೇಕಾಗುತ್ತದೆ.

ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸರ್ಕಾರ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದು, 12ರಿಂದ 17 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಅಭಿಯಾನದಲ್ಲಿ ಕೋವೊವಾಕ್ಸ್ ಅನ್ನು ಸೇರಿಸಲು ವಿನಂತಿಸಿದ್ದರು. ಪುಣೆ ಮೂಲದ ಸಂಸ್ಥೆಯು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್​ಗೆ 900 ರೂ. ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರವನ್ನು ಸೇರಿಸಿ ಕೋವೊವ್ಯಾಕ್ಸ್ ಅನ್ನು ಒದಗಿಸಲಿದೆ.

12-17 ವರ್ಷ ವಯಸ್ಸಿನವರು ಈಗ ಖಾಸಗಿ ಆಸ್ಪತ್ರೆಗಳಲ್ಲಿ ಕೊವೋವ್ಯಾಕ್ಸ್​ ಲಸಿಕೆಯನ್ನು ಆಯ್ಕೆ ಮಾಡಬಹುದು. ಸೋಮವಾರ ಸಂಜೆ CoWIN ಪೋರ್ಟಲ್‌ನಲ್ಲಿ ಇದಕ್ಕಾಗಿ ನಿಬಂಧನೆಯನ್ನು ಮಾಡಲಾಗಿದೆ ಎಂದು ಅಧಿಕೃತ ಮೂಲವು PTI ಗೆ ತಿಳಿಸಿದೆ.

12ರಿಂದ 17 ವಯೋಮಾನದವರಿಗೆ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವೊವ್ಯಾಕ್ಸ್ ಕೊವಿಡ್-19 ಲಸಿಕೆಯನ್ನು ನೀಡಲು ಸರ್ಕಾರಿ ಸಮಿತಿಯಾದ ರಾಷ್ಟ್ರೀಯ ತಾಂತ್ರಿಕ ಸಲಹಾ ತಂಡ (ಎನ್‌ಟಿಜಿಐ) ಏ. 29ರಂದು ಅನುಮತಿ ನೀಡಿತ್ತು. ಭಾರತದ ಔಷಧ ನಿಯಂತ್ರಕ (DCGI) ವಿವಿಧ ವಯೋಮಾನದ ಮಕ್ಕಳಿಗೆ ನಿರ್ಬಂಧಿತ ತುರ್ತು ಬಳಕೆಯ ಅಧಿಕಾರಕ್ಕಾಗಿ (EUA) ಮೂರು COVID-19 ಲಸಿಕೆಗಳನ್ನು ಅನುಮೋದಿಸಿತ್ತು. DCGI 12 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ZyCov-D ಅನ್ನು ಅನುಮೋದಿಸಿದೆ. ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆಯನ್ನು 6-12 ವರ್ಷಗಳವರೆಗೆ ಮತ್ತು ಬಯೋ ಇ ಕಾರ್ಬ್​ವ್ಯಾಕ್ಸ್​ ಲಸಿಕೆಯನ್ನು 5-12 ವರ್ಷಗಳ ಮಕ್ಕಳಿಗೆ ನೀಡಲು ಅನುಮೋದನೆ ನೀಡಿದೆ.

ಅಮೆರಿಕದ ಲಸಿಕೆ ಕಂಪನಿ ನೊವಾವಾಕ್ಸ್ ಅಭಿವೃದ್ಧಿಪಡಿಸಿದ ಕೊವೊವ್ಯಾಕ್ಸ್ ಲಸಿಕೆಯ ಬಳಕೆಗೆ ಭಾರತದಲ್ಲಿ ಅನುಮತಿ ನೀಡಲಾಗಿದೆ. ಈ ಲಸಿಕೆಯ ಬೆಲೆ ಕೋವಿಶೀಲ್ಡ್ (Covishield) ಗಿಂತ ಅಧಿಕವಾಗಲಿದೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ