AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ.25ರಂದು ನಡೆಯಬೇಕಿದ್ದ ಗೋ ವಿಜ್ಞಾನ ಪರೀಕ್ಷೆ ಮುಂದೂಡಿಕೆ; ವೆಬ್​ಸೈಟ್​ನಲ್ಲಿ ಮಾಹಿತಿ ಹಂಚಿಕೊಂಡ ರಾಷ್ಟ್ರೀಯ ಕಾಮಧೇನು ಆಯೋಗ

ಕಾಮಧೇನು ಗೋ ವಿಜ್ಞಾನ ಪ್ರಚಾರ-ಪ್ರಸಾರ ಪರೀಕ್ಷೆ ಶುಲ್ಕ ರಹಿತವಾಗಿದ್ದು, ಪ್ರಾಥಮಿಕ, ಪ್ರೌಢಶಾಲೆಗಳ, ಹಿರಿಯ ಮಾಧ್ಯಮಿಕ ಶಾಲೆಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದು.

ಫೆ.25ರಂದು ನಡೆಯಬೇಕಿದ್ದ ಗೋ ವಿಜ್ಞಾನ ಪರೀಕ್ಷೆ ಮುಂದೂಡಿಕೆ; ವೆಬ್​ಸೈಟ್​ನಲ್ಲಿ ಮಾಹಿತಿ ಹಂಚಿಕೊಂಡ ರಾಷ್ಟ್ರೀಯ ಕಾಮಧೇನು ಆಯೋಗ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Feb 21, 2021 | 7:52 PM

Share

ದೆಹಲಿ: ಫೆ.25ರಂದು ದೇಶಾದ್ಯಂತ ಆನ್​ಲೈನ್ ಮೂಲಕ ನಡೆಯಬೇಕಿದ್ದ ರಾಷ್ಟ್ರೀಯ ಮಟ್ಟದ ಕಾಮಧೇನು ಗೋ ವಿಜ್ಞಾನ ಪ್ರಚಾರ-ಪ್ರಸಾರ ಪರೀಕ್ಷೆ (ಗೋ ವಿಜ್ಞಾನ ಪರೀಕ್ಷೆ) ಮುಂದೂಡಲ್ಪಟ್ಟಿದೆ. ಇನ್ನು ಯಾವ ತಾರೀಖಿನಂದು ನಡೆಯಲಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಇಂದು (ಫೆ.21) ನಡೆಯಬೇಕಿದ್ದ ಅಣಕು ಪರೀಕ್ಷೆ (Mock Examination) ಕೂಡ ನಡೆದಿಲ್ಲ. kamdhenugvppexam.org ವೆಬ್​ಸೈಟ್​ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ಮೊದಲು ಫೆ.25ರಂದು ಪರೀಕ್ಷೆ ನಿಗದಿಪಡಿಸಲಾಗಿತ್ತು. ಹಾಗೇ, ಗೋವು ವಿಜ್ಞಾನದ ಬಗ್ಗೆ ಅರಿವು ಹೆಚ್ಚಿಸುವ ಈ ಆನ್​ಲೈನ್​ ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳಿಗೆ ಉತ್ತೇಜಿಸುವಂತೆ, ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (UGC) ದೇಶದ ಸುಮಾರು 900 ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಬರೆದಿತ್ತು.

ಯಾರು ಬರೆಯಬಹುದು? ಕಾಮಧೇನು ಗೋ ವಿಜ್ಞಾನ ಪ್ರಚಾರ-ಪ್ರಸಾರ ಪರೀಕ್ಷೆ ಶುಲ್ಕ ರಹಿತವಾಗಿದ್ದು, ಪ್ರಾಥಮಿಕ, ಪ್ರೌಢಶಾಲೆಗಳ, ಹಿರಿಯ ಮಾಧ್ಯಮಿಕ ಶಾಲೆಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದು. ಸಾರ್ವಜನಿಕರೂ ಸಹ ಆಸಕ್ತಿ ಇರುವವರು ತೆಗೆದುಕೊಳ್ಳಬಹುದು. ಈ ಪರೀಕ್ಷೆ ಇಂಗ್ಲಿಷ್ ಸೇರಿ 11 ಪ್ರಾದೇಶಿಕ ಭಾಷೆಗಳಾದ ಹಿಂದಿ​, ಗುಜರಾತಿ, ಸಂಸ್ಕೃತ, ಪಂಜಾಬಿ, ಮರಾಠಿ, ಕನ್ನಡ, ಮಲಯಾಳಂ, ತಮಿಳು, ಮರಾಠಿ, ತೆಲುಗು, ಓಡಿಯಾ ಭಾಷೆಗಳಲ್ಲಿ ನಡೆಯಲಿದೆ. ಪರೀಕ್ಷೆ ಬಹು ಆಯ್ಕೆ (multiple-choice) ಪದ್ಧತಿಯಲ್ಲಿ ಇರಲಿದ್ದು ಫಲಿತಾಂಶ ರಾಷ್ಟ್ರೀಯ ಕಾಮಧೇನು ಆಯೋಗದ ವೆಬ್​ಸೈಟ್​ನಲ್ಲಿ (Rashtriya Kamdhenu Aayog) ಪ್ರಕಟಗೊಳ್ಳಲಿದೆ. ಗೋ ವಿಜ್ಞಾನ ಪರೀಕ್ಷೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಮತ್ತು ತುಂಬ ಚೆನ್ನಾಗಿ ಬರೆದು, ಉತ್ತಮ ಫಲಿತಾಂಶ ಪಡೆದ ಅಭ್ಯರ್ಥಿಗಳಿಗೆ ಬಹುಮಾನವನ್ನೂ ನೀಡಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ತಿಳಿಸಿದೆ.

ಭಾರತದಲ್ಲಿರುವ ಎಲ್ಲರೂ ಹಸುಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಹಸುಗಳು ಕೇವಲ ಹಾಲು ಕೊಡಲು ಮಾತ್ರವಲ್ಲ, ಅದರಾಚೆಗೂ ಅನೇಕ ಉಪಯುಕ್ತತೆಗಳನ್ನು ನೀಡಬಲ್ಲವು. ಉದ್ಯಮ ಅವಕಾಶ ಸೃಷ್ಟಿಸಬಲ್ಲವು ಎಂಬ ಬಗ್ಗೆ ಅರಿವು ಮೂಡಿಸುವುದೇ ಪರೀಕ್ಷೆಯ ಉದ್ದೇಶ ಎಂದು ರಾಷ್ಟ್ರೀಯ ಕಾಮಧೇನು ಆಯೋಗ ತಿಳಿಸಿದೆ.

ಇದನ್ನೂ ಓದಿ: ಪಂಚಮಸಾಲಿ ಹೋರಾಟದ ಕುರಿತು ಸರ್ಕಾರದ ನಿಲುವು ತಿಳಿಸಲು ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್ ನಾಳೆ ಸುದ್ದಿಗೋಷ್ಠಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!