Sign In

By signing in or creating an account, you agree with Associated Broadcasting Company's Terms & Conditions and Privacy Policy.

CoWIN Portal: ವಿದೇಶಗಳ ಗಮನ ಸೆಳೆದ ಕೊವಿನ್​ ಪೋರ್ಟಲ್​; ವ್ಯವಸ್ಥೆ ಅಳವಡಿಸಿಕೊಳ್ಳಲು ಆಸಕ್ತಿ ತೋರುತ್ತಿವೆ ಹಲವು ರಾಷ್ಟ್ರಗಳು

ಭಾರತದಲ್ಲಿ ಕೊವಿನ್​ ಆ್ಯಪ್​​ನಿಂದ ತುಂಬ ಅನುಕೂಲವಾಗುತ್ತಿದೆ. ಈ ಹಿಂದೆ ಆಧಾರ್​, ಯುಪಿಐ ಅಭಿವೃದ್ಧಿ ಪಡಿಸಿದ ಅನುಭವದಲ್ಲೇ ಈ ಪೋರ್ಟಲ್​ ಕೂಡ ಹೊರತರಲಾಗಿತ್ತು ಎಂದು ಡಾ. ಆರ್​.ಎಸ್​.ಶರ್ಮಾ ತಿಳಿಸಿದ್ದಾರೆ.

CoWIN Portal: ವಿದೇಶಗಳ ಗಮನ ಸೆಳೆದ ಕೊವಿನ್​ ಪೋರ್ಟಲ್​; ವ್ಯವಸ್ಥೆ ಅಳವಡಿಸಿಕೊಳ್ಳಲು ಆಸಕ್ತಿ ತೋರುತ್ತಿವೆ ಹಲವು ರಾಷ್ಟ್ರಗಳು
ಕೊವಿನ್ ಪೋರ್ಟಲ್​
Follow us
TV9 Web
| Updated By: Lakshmi Hegde

Updated on: Jun 28, 2021 | 4:12 PM

ಭಾರತದಲ್ಲಿ ಕೊವಿಡ್​ 19 ಲಸಿಕೆಯನ್ನು ವ್ಯವಸ್ಥಿತವಾಗಿ ನೀಡಲು, ನೋಂದಣಿಗಾಗಿ ಕೊವಿನ್​ ಪೋರ್ಟಲ್​ (CoWIN Portal) ಆನ್​​ಲೈನ್ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಪಡೆಯುವವರು ಮೊದಲು ಈ ಪೋರ್ಟಲ್​ಗೆ ಹೋಗಿ ನೋಂದಣಿ ಮಾಡಿಕೊಂಡರೆ, ಅವರಿಗೆ ಮೆಸೇಜ್​ ಬರುತ್ತದೆ. ಆ ದಿನ ಹೋಗಿ ಲಸಿಕೆ ಪಡೆದರಾಯಿತು. ಇದರಿಂದ ಲಸಿಕೆ ಪಡೆಯುವ ಪ್ರಕ್ರಿಯೆ ತೀರ ಸರಳವಾಗುತ್ತಿದೆ. ಈಗಂತೂ ಕೊವಿನ್​ ಪೋರ್ಟಲ್​​ನ್ನು ಹಿಂದಿ ಸೇರಿ ಪ್ರಾದೇಶಿಕ ಭಾಷೆಗಳಲ್ಲೂ ಅಭಿವೃದ್ಧಿ ಪಡಿಸಿದ್ದು, ಜನರಿಗೆ ಇನ್ನಷ್ಟು ಅನುಕೂಲವಾಗಿದೆ. ಇಂಥ ಕೊವಿನ್​ ಪೋರ್ಟಲ್​ ಇದೀಗ ವಿದೇಶಿಯರ ಆಕರ್ಷಣೆಯಾಗಿದೆ.

ಭಾರತದಲ್ಲಿ ಕೊವಿನ್​ ಪೋರ್ಟಲ್​ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಬೆನ್ನಲ್ಲೇ ಮಧ್ಯ ಏಷ್ಯಾ, ಲ್ಯಾಟಿನ್ ಆಮೆರಿಕಾ, ಆಫ್ರಿಕಾ ಸೇರಿದಂತೆ 50 ದೇಶಗಳು ಈ ಪೋರ್ಟಲ್​ ವ್ಯವಸ್ಥೆ ಅಳವಡಿಕೆ ಆಸಕ್ತಿ ವಹಿಸಿವೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಸಿಇಒ, ಡಾ. ಆರ್​.ಎಸ್​.ಶರ್ಮಾ ತಿಳಿಸಿದ್ದಾರೆ. ಇನ್ನು ಆಸಕ್ತಿ ವ್ಯಕ್ತಪಡಿಸಿದ ದೇಶಗಳಿಗೆ ಕೋವಿನ್ ಪೋರ್ಟಲ್ ತಂತ್ರಜ್ಞಾನ ನೀಡಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾಗಿಯೂ ಹೇಳಿದ್ದಾರೆ.

ಭಾರತದಲ್ಲಿ ಕೊವಿನ್​ ಆ್ಯಪ್​​ನಿಂದ ತುಂಬ ಅನುಕೂಲವಾಗುತ್ತಿದೆ. ಈ ಹಿಂದೆ ಆಧಾರ್​, ಯುಪಿಐ ಅಭಿವೃದ್ಧಿ ಪಡಿಸಿದ ಅನುಭವದಲ್ಲೇ ಈ ಪೋರ್ಟಲ್​ ಕೂಡ ಹೊರತರಲಾಗಿತ್ತು. ಕೇವಲ 5 ತಿಂಗಳಲ್ಲಿ ಈ ಪೋರ್ಟಲ್​​ನಲ್ಲಿ 30 ಕೋಟಿ ಬಳಕೆದಾರರು ನೋಂದಣಿ ಮಾಡಿಕೊಂಡಿದ್ದಾರೆ. ಅವರೆಲ್ಲರ ವಿವರವೂ ಈ ಪೋರ್ಟಲ್​ನಲ್ಲಿ ಲಭ್ಯವಿದೆ ಎಂದು ಆರ್​.ಎಸ್.ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಐಎಎಫ್ ನೆಲೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಜಮ್ಮುವಿನ ಕಲುಚಕ್ ಸೇನಾ ಶಿಬಿರದ ಮೇಲೆ ಮತ್ತೆರಡು ಡ್ರೋನ್ ಪತ್ತೆ

(CoWIN Portal attract foreign Countries said National Health Authoritys CEO S R Sharma)

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ