AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CoWIN Portal: ವಿದೇಶಗಳ ಗಮನ ಸೆಳೆದ ಕೊವಿನ್​ ಪೋರ್ಟಲ್​; ವ್ಯವಸ್ಥೆ ಅಳವಡಿಸಿಕೊಳ್ಳಲು ಆಸಕ್ತಿ ತೋರುತ್ತಿವೆ ಹಲವು ರಾಷ್ಟ್ರಗಳು

ಭಾರತದಲ್ಲಿ ಕೊವಿನ್​ ಆ್ಯಪ್​​ನಿಂದ ತುಂಬ ಅನುಕೂಲವಾಗುತ್ತಿದೆ. ಈ ಹಿಂದೆ ಆಧಾರ್​, ಯುಪಿಐ ಅಭಿವೃದ್ಧಿ ಪಡಿಸಿದ ಅನುಭವದಲ್ಲೇ ಈ ಪೋರ್ಟಲ್​ ಕೂಡ ಹೊರತರಲಾಗಿತ್ತು ಎಂದು ಡಾ. ಆರ್​.ಎಸ್​.ಶರ್ಮಾ ತಿಳಿಸಿದ್ದಾರೆ.

CoWIN Portal: ವಿದೇಶಗಳ ಗಮನ ಸೆಳೆದ ಕೊವಿನ್​ ಪೋರ್ಟಲ್​; ವ್ಯವಸ್ಥೆ ಅಳವಡಿಸಿಕೊಳ್ಳಲು ಆಸಕ್ತಿ ತೋರುತ್ತಿವೆ ಹಲವು ರಾಷ್ಟ್ರಗಳು
ಕೊವಿನ್ ಪೋರ್ಟಲ್​
TV9 Web
| Edited By: |

Updated on: Jun 28, 2021 | 4:12 PM

Share

ಭಾರತದಲ್ಲಿ ಕೊವಿಡ್​ 19 ಲಸಿಕೆಯನ್ನು ವ್ಯವಸ್ಥಿತವಾಗಿ ನೀಡಲು, ನೋಂದಣಿಗಾಗಿ ಕೊವಿನ್​ ಪೋರ್ಟಲ್​ (CoWIN Portal) ಆನ್​​ಲೈನ್ ವ್ಯವಸ್ಥೆ ಮಾಡಲಾಗಿದೆ. ಲಸಿಕೆ ಪಡೆಯುವವರು ಮೊದಲು ಈ ಪೋರ್ಟಲ್​ಗೆ ಹೋಗಿ ನೋಂದಣಿ ಮಾಡಿಕೊಂಡರೆ, ಅವರಿಗೆ ಮೆಸೇಜ್​ ಬರುತ್ತದೆ. ಆ ದಿನ ಹೋಗಿ ಲಸಿಕೆ ಪಡೆದರಾಯಿತು. ಇದರಿಂದ ಲಸಿಕೆ ಪಡೆಯುವ ಪ್ರಕ್ರಿಯೆ ತೀರ ಸರಳವಾಗುತ್ತಿದೆ. ಈಗಂತೂ ಕೊವಿನ್​ ಪೋರ್ಟಲ್​​ನ್ನು ಹಿಂದಿ ಸೇರಿ ಪ್ರಾದೇಶಿಕ ಭಾಷೆಗಳಲ್ಲೂ ಅಭಿವೃದ್ಧಿ ಪಡಿಸಿದ್ದು, ಜನರಿಗೆ ಇನ್ನಷ್ಟು ಅನುಕೂಲವಾಗಿದೆ. ಇಂಥ ಕೊವಿನ್​ ಪೋರ್ಟಲ್​ ಇದೀಗ ವಿದೇಶಿಯರ ಆಕರ್ಷಣೆಯಾಗಿದೆ.

ಭಾರತದಲ್ಲಿ ಕೊವಿನ್​ ಪೋರ್ಟಲ್​ ಯಶಸ್ವಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಬೆನ್ನಲ್ಲೇ ಮಧ್ಯ ಏಷ್ಯಾ, ಲ್ಯಾಟಿನ್ ಆಮೆರಿಕಾ, ಆಫ್ರಿಕಾ ಸೇರಿದಂತೆ 50 ದೇಶಗಳು ಈ ಪೋರ್ಟಲ್​ ವ್ಯವಸ್ಥೆ ಅಳವಡಿಕೆ ಆಸಕ್ತಿ ವಹಿಸಿವೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಿಇಒ ಸಿಇಒ, ಡಾ. ಆರ್​.ಎಸ್​.ಶರ್ಮಾ ತಿಳಿಸಿದ್ದಾರೆ. ಇನ್ನು ಆಸಕ್ತಿ ವ್ಯಕ್ತಪಡಿಸಿದ ದೇಶಗಳಿಗೆ ಕೋವಿನ್ ಪೋರ್ಟಲ್ ತಂತ್ರಜ್ಞಾನ ನೀಡಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾಗಿಯೂ ಹೇಳಿದ್ದಾರೆ.

ಭಾರತದಲ್ಲಿ ಕೊವಿನ್​ ಆ್ಯಪ್​​ನಿಂದ ತುಂಬ ಅನುಕೂಲವಾಗುತ್ತಿದೆ. ಈ ಹಿಂದೆ ಆಧಾರ್​, ಯುಪಿಐ ಅಭಿವೃದ್ಧಿ ಪಡಿಸಿದ ಅನುಭವದಲ್ಲೇ ಈ ಪೋರ್ಟಲ್​ ಕೂಡ ಹೊರತರಲಾಗಿತ್ತು. ಕೇವಲ 5 ತಿಂಗಳಲ್ಲಿ ಈ ಪೋರ್ಟಲ್​​ನಲ್ಲಿ 30 ಕೋಟಿ ಬಳಕೆದಾರರು ನೋಂದಣಿ ಮಾಡಿಕೊಂಡಿದ್ದಾರೆ. ಅವರೆಲ್ಲರ ವಿವರವೂ ಈ ಪೋರ್ಟಲ್​ನಲ್ಲಿ ಲಭ್ಯವಿದೆ ಎಂದು ಆರ್​.ಎಸ್.ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ಐಎಎಫ್ ನೆಲೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಜಮ್ಮುವಿನ ಕಲುಚಕ್ ಸೇನಾ ಶಿಬಿರದ ಮೇಲೆ ಮತ್ತೆರಡು ಡ್ರೋನ್ ಪತ್ತೆ

(CoWIN Portal attract foreign Countries said National Health Authoritys CEO S R Sharma)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್