AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​

ಭಾರತದಲ್ಲಿ ಕೊವಿಡ್​ 19 ರೂಪಾಂತರ ಪತ್ತೆ, ನಿರ್ವಹಣೆಗಾಗಿ INSACOG (Indian SARS-CoV-2 Genomics Consortium)ನೆಟ್ವರ್ಕ್​​​ಗೆ ಇನ್ನೂ 17 ಪ್ರಯೋಗಾಲಯಗಳನ್ನು ಸೇರ್ಪಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​
ಡಾ. ಹರ್ಷ ವರ್ಧನ್
Lakshmi Hegde
|

Updated on: May 17, 2021 | 8:42 PM

Share

ದೆಹಲಿ: ಕೊವಿಡ್​ 19 ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುವ ಕೊವಿನ್​ (CoWin) ಪೋರ್ಟಲ್​​​ನಲ್ಲಿ​ ಮುಂದಿನ ವಾರದಿಂದ ಹಿಂದಿ ಸೇರಿ, 14 ಭಾಷೆಗಳು ಲಭ್ಯವಾಗಲಿದೆ. ಹಾಗೇ ಭಾರತದಲ್ಲಿ ಕೊವಿಡ್​ 19 ರೂಪಾಂತರ ಪತ್ತೆ, ನಿರ್ವಹಣೆಗಾಗಿ INSACOG (Indian SARS-CoV-2 Genomics Consortium)ನೆಟ್ವರ್ಕ್​​​ಗೆ ಇನ್ನೂ 17 ಪ್ರಯೋಗಾಲಯಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ತಿಳಿಸಿದೆ. ಕೊವಿಡ್​ 19ಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚಿಸಲು ಹಲವು ಸಚಿವರು ಸೇರಿ ನಡೆಸಿದ 26ನೇ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನೇತೃತ್ವವನ್ನು ಆರೋಗ್ಯ ಸಚಿವ ಹರ್ಷವರ್ಧನ್​ ವಹಿಸಿದ್ದರು ಎಂದು ಇಲಾಖೆ ಹೇಳಿದೆ.

INSACOG ನೆಟ್ವರ್ಕ್​​ನಲ್ಲಿ ಸದ್ಯ 10 ಲ್ಯಾಬೋರೇಟರಿಗಳು ಮಾತ್ರ ಇವೆ. ಅದನ್ನೀಗ 17ಕ್ಕೆ ಏರಿಸಲಾಗುವುದು. ಕಳೆದ 26ದಿನಗಳಲ್ಲಿ ಇದೇ ಮೊದಲಬಾರಿಗೆ ದೇಶದಲ್ಲಿ ಇಂದು 3 ಲಕ್ಷಕ್ಕಿಂತಲೂ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದು ಸಕಾರಾತ್ಮಕ ವಿಚಾರ ಎಂದು ಹರ್ಷವರ್ಧನ್​ ತಿಳಿಸಿದ್ದಾರೆ. ಅಲ್ಲದೆ, ಡಿಆರ್‌ಡಿಒ 2-ಡಿಆಕ್ಸಿ-ಡಿ-ಗ್ಲೂಕೋಸ್ (2ಡಿಜಿ) ಔಷಧವನ್ನು ಅಭಿವೃದ್ಧಿ ಪಡಿಸಿದ್ದರ ಬಗ್ಗೆ ಶ್ಲಾಘಿಸಿದರು. ಡಿಆರ್​ಡಿಒ ಈ ಔಷಧ ಅಭಿವೃದ್ಧಿ ಪಡಿಸುವ ಕೆಲಸವನ್ನು ಕಳೆದ ವರ್ಷ ಏಪ್ರಿಲ್​​ನಿಂದ ಪ್ರಾರಂಭ ಮಾಡಿತ್ತು. ಇಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಇನ್ನು ಕೊವಿಡ್ ಸೋಂಕಿಗೆ ತತ್ತರಿಸಿರುವ ರಾಜ್ಯಗಳಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿರುವ ಆರೋಗ್ಯ ಸಚಿವರು,ಇಲ್ಲಿಯವರೆಗೆ 4.22 ಕೋಟಿಗೂ ಅಧಿಕ N95 ಮಾಸ್ಕ್​​ಗಳು, 1.76 ಕೋಟಿ ಪಿಪಿಇ ಕಿಟ್​​ಗಳು, 52.64 ಲಕ್ಷ ರೆಮ್​ಡೆಸಿವಿರ್​ ಇಂಜೆಕ್ಷನ್​​ ಮತ್ತು 45,066 ವೆಂಟಿಲೇಟರ್​​ಗಳನ್ನು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯ ನಾಯಕರು ಕೊರೊನಾ ಔಷಧ ಸಂಗ್ರಹಿಸಿಡುವಂತಿಲ್ಲ, ಆರೋಗ್ಯ ಇಲಾಖೆಗೆ ಒಪ್ಪಿಸಬೇಕು: ದೆಹಲಿ ಹೈಕೋರ್ಟ್ ಸೂಚನೆ

ಡಿಆರ್​ಡಿಒ ಅಭಿವೃದ್ಧಿಪಡಿಸಿರುವ 2ಡಿಜಿ ಔಷಧದ 10 ಸಾವಿರ ಡೋಸ್ ಇಂದು ವಿತರಣೆ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ