AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​

ಭಾರತದಲ್ಲಿ ಕೊವಿಡ್​ 19 ರೂಪಾಂತರ ಪತ್ತೆ, ನಿರ್ವಹಣೆಗಾಗಿ INSACOG (Indian SARS-CoV-2 Genomics Consortium)ನೆಟ್ವರ್ಕ್​​​ಗೆ ಇನ್ನೂ 17 ಪ್ರಯೋಗಾಲಯಗಳನ್ನು ಸೇರ್ಪಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​
ಡಾ. ಹರ್ಷ ವರ್ಧನ್
Lakshmi Hegde
|

Updated on: May 17, 2021 | 8:42 PM

Share

ದೆಹಲಿ: ಕೊವಿಡ್​ 19 ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುವ ಕೊವಿನ್​ (CoWin) ಪೋರ್ಟಲ್​​​ನಲ್ಲಿ​ ಮುಂದಿನ ವಾರದಿಂದ ಹಿಂದಿ ಸೇರಿ, 14 ಭಾಷೆಗಳು ಲಭ್ಯವಾಗಲಿದೆ. ಹಾಗೇ ಭಾರತದಲ್ಲಿ ಕೊವಿಡ್​ 19 ರೂಪಾಂತರ ಪತ್ತೆ, ನಿರ್ವಹಣೆಗಾಗಿ INSACOG (Indian SARS-CoV-2 Genomics Consortium)ನೆಟ್ವರ್ಕ್​​​ಗೆ ಇನ್ನೂ 17 ಪ್ರಯೋಗಾಲಯಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ತಿಳಿಸಿದೆ. ಕೊವಿಡ್​ 19ಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚಿಸಲು ಹಲವು ಸಚಿವರು ಸೇರಿ ನಡೆಸಿದ 26ನೇ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನೇತೃತ್ವವನ್ನು ಆರೋಗ್ಯ ಸಚಿವ ಹರ್ಷವರ್ಧನ್​ ವಹಿಸಿದ್ದರು ಎಂದು ಇಲಾಖೆ ಹೇಳಿದೆ.

INSACOG ನೆಟ್ವರ್ಕ್​​ನಲ್ಲಿ ಸದ್ಯ 10 ಲ್ಯಾಬೋರೇಟರಿಗಳು ಮಾತ್ರ ಇವೆ. ಅದನ್ನೀಗ 17ಕ್ಕೆ ಏರಿಸಲಾಗುವುದು. ಕಳೆದ 26ದಿನಗಳಲ್ಲಿ ಇದೇ ಮೊದಲಬಾರಿಗೆ ದೇಶದಲ್ಲಿ ಇಂದು 3 ಲಕ್ಷಕ್ಕಿಂತಲೂ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದು ಸಕಾರಾತ್ಮಕ ವಿಚಾರ ಎಂದು ಹರ್ಷವರ್ಧನ್​ ತಿಳಿಸಿದ್ದಾರೆ. ಅಲ್ಲದೆ, ಡಿಆರ್‌ಡಿಒ 2-ಡಿಆಕ್ಸಿ-ಡಿ-ಗ್ಲೂಕೋಸ್ (2ಡಿಜಿ) ಔಷಧವನ್ನು ಅಭಿವೃದ್ಧಿ ಪಡಿಸಿದ್ದರ ಬಗ್ಗೆ ಶ್ಲಾಘಿಸಿದರು. ಡಿಆರ್​ಡಿಒ ಈ ಔಷಧ ಅಭಿವೃದ್ಧಿ ಪಡಿಸುವ ಕೆಲಸವನ್ನು ಕಳೆದ ವರ್ಷ ಏಪ್ರಿಲ್​​ನಿಂದ ಪ್ರಾರಂಭ ಮಾಡಿತ್ತು. ಇಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಇನ್ನು ಕೊವಿಡ್ ಸೋಂಕಿಗೆ ತತ್ತರಿಸಿರುವ ರಾಜ್ಯಗಳಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿರುವ ಆರೋಗ್ಯ ಸಚಿವರು,ಇಲ್ಲಿಯವರೆಗೆ 4.22 ಕೋಟಿಗೂ ಅಧಿಕ N95 ಮಾಸ್ಕ್​​ಗಳು, 1.76 ಕೋಟಿ ಪಿಪಿಇ ಕಿಟ್​​ಗಳು, 52.64 ಲಕ್ಷ ರೆಮ್​ಡೆಸಿವಿರ್​ ಇಂಜೆಕ್ಷನ್​​ ಮತ್ತು 45,066 ವೆಂಟಿಲೇಟರ್​​ಗಳನ್ನು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯ ನಾಯಕರು ಕೊರೊನಾ ಔಷಧ ಸಂಗ್ರಹಿಸಿಡುವಂತಿಲ್ಲ, ಆರೋಗ್ಯ ಇಲಾಖೆಗೆ ಒಪ್ಪಿಸಬೇಕು: ದೆಹಲಿ ಹೈಕೋರ್ಟ್ ಸೂಚನೆ

ಡಿಆರ್​ಡಿಒ ಅಭಿವೃದ್ಧಿಪಡಿಸಿರುವ 2ಡಿಜಿ ಔಷಧದ 10 ಸಾವಿರ ಡೋಸ್ ಇಂದು ವಿತರಣೆ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ