AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​

ಭಾರತದಲ್ಲಿ ಕೊವಿಡ್​ 19 ರೂಪಾಂತರ ಪತ್ತೆ, ನಿರ್ವಹಣೆಗಾಗಿ INSACOG (Indian SARS-CoV-2 Genomics Consortium)ನೆಟ್ವರ್ಕ್​​​ಗೆ ಇನ್ನೂ 17 ಪ್ರಯೋಗಾಲಯಗಳನ್ನು ಸೇರ್ಪಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಮುಂದಿನ ವಾರದಿಂದ ಕೊವಿನ್​ ಪೋರ್ಟಲ್​ನಲ್ಲಿ ಹಿಂದಿ ಸೇರಿ 14 ಭಾಷೆಗಳು ಲಭ್ಯ: ಆರೋಗ್ಯ ಸಚಿವ ಹರ್ಷವರ್ಧನ್​
ಡಾ. ಹರ್ಷ ವರ್ಧನ್
Lakshmi Hegde
|

Updated on: May 17, 2021 | 8:42 PM

Share

ದೆಹಲಿ: ಕೊವಿಡ್​ 19 ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುವ ಕೊವಿನ್​ (CoWin) ಪೋರ್ಟಲ್​​​ನಲ್ಲಿ​ ಮುಂದಿನ ವಾರದಿಂದ ಹಿಂದಿ ಸೇರಿ, 14 ಭಾಷೆಗಳು ಲಭ್ಯವಾಗಲಿದೆ. ಹಾಗೇ ಭಾರತದಲ್ಲಿ ಕೊವಿಡ್​ 19 ರೂಪಾಂತರ ಪತ್ತೆ, ನಿರ್ವಹಣೆಗಾಗಿ INSACOG (Indian SARS-CoV-2 Genomics Consortium)ನೆಟ್ವರ್ಕ್​​​ಗೆ ಇನ್ನೂ 17 ಪ್ರಯೋಗಾಲಯಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ತಿಳಿಸಿದೆ. ಕೊವಿಡ್​ 19ಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚಿಸಲು ಹಲವು ಸಚಿವರು ಸೇರಿ ನಡೆಸಿದ 26ನೇ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನೇತೃತ್ವವನ್ನು ಆರೋಗ್ಯ ಸಚಿವ ಹರ್ಷವರ್ಧನ್​ ವಹಿಸಿದ್ದರು ಎಂದು ಇಲಾಖೆ ಹೇಳಿದೆ.

INSACOG ನೆಟ್ವರ್ಕ್​​ನಲ್ಲಿ ಸದ್ಯ 10 ಲ್ಯಾಬೋರೇಟರಿಗಳು ಮಾತ್ರ ಇವೆ. ಅದನ್ನೀಗ 17ಕ್ಕೆ ಏರಿಸಲಾಗುವುದು. ಕಳೆದ 26ದಿನಗಳಲ್ಲಿ ಇದೇ ಮೊದಲಬಾರಿಗೆ ದೇಶದಲ್ಲಿ ಇಂದು 3 ಲಕ್ಷಕ್ಕಿಂತಲೂ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಂದು ಸಕಾರಾತ್ಮಕ ವಿಚಾರ ಎಂದು ಹರ್ಷವರ್ಧನ್​ ತಿಳಿಸಿದ್ದಾರೆ. ಅಲ್ಲದೆ, ಡಿಆರ್‌ಡಿಒ 2-ಡಿಆಕ್ಸಿ-ಡಿ-ಗ್ಲೂಕೋಸ್ (2ಡಿಜಿ) ಔಷಧವನ್ನು ಅಭಿವೃದ್ಧಿ ಪಡಿಸಿದ್ದರ ಬಗ್ಗೆ ಶ್ಲಾಘಿಸಿದರು. ಡಿಆರ್​ಡಿಒ ಈ ಔಷಧ ಅಭಿವೃದ್ಧಿ ಪಡಿಸುವ ಕೆಲಸವನ್ನು ಕಳೆದ ವರ್ಷ ಏಪ್ರಿಲ್​​ನಿಂದ ಪ್ರಾರಂಭ ಮಾಡಿತ್ತು. ಇಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್​ ಅವರು ಅಧಿಕೃತವಾಗಿ ಬಿಡುಗಡೆ ಮಾಡಿದರು.

ಇನ್ನು ಕೊವಿಡ್ ಸೋಂಕಿಗೆ ತತ್ತರಿಸಿರುವ ರಾಜ್ಯಗಳಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಸದಾ ಸಿದ್ಧವಿದೆ ಎಂದು ಹೇಳಿರುವ ಆರೋಗ್ಯ ಸಚಿವರು,ಇಲ್ಲಿಯವರೆಗೆ 4.22 ಕೋಟಿಗೂ ಅಧಿಕ N95 ಮಾಸ್ಕ್​​ಗಳು, 1.76 ಕೋಟಿ ಪಿಪಿಇ ಕಿಟ್​​ಗಳು, 52.64 ಲಕ್ಷ ರೆಮ್​ಡೆಸಿವಿರ್​ ಇಂಜೆಕ್ಷನ್​​ ಮತ್ತು 45,066 ವೆಂಟಿಲೇಟರ್​​ಗಳನ್ನು ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಕೀಯ ನಾಯಕರು ಕೊರೊನಾ ಔಷಧ ಸಂಗ್ರಹಿಸಿಡುವಂತಿಲ್ಲ, ಆರೋಗ್ಯ ಇಲಾಖೆಗೆ ಒಪ್ಪಿಸಬೇಕು: ದೆಹಲಿ ಹೈಕೋರ್ಟ್ ಸೂಚನೆ

ಡಿಆರ್​ಡಿಒ ಅಭಿವೃದ್ಧಿಪಡಿಸಿರುವ 2ಡಿಜಿ ಔಷಧದ 10 ಸಾವಿರ ಡೋಸ್ ಇಂದು ವಿತರಣೆ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ