AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುಗಳಿಂದ ತುಳಿಸಿಕೊಳ್ಳುವ ಭಕ್ತರು; ಮಧ್ಯಪ್ರದೇಶದಲ್ಲಿದೆ ಈ ವಿಶಿಷ್ಟವಾದ ದೀಪಾವಳಿ ಸಂಪ್ರದಾಯ

ದೀಪಾವಳಿಯ ಎರಡನೇ ದಿನದಂದು, ಬೆಳಿಗ್ಗೆ ಪೂಜೆ ಮಾಡವಾಗುತ್ತದೆ. ನಂತರ ಜನರು ಡೋಲುಗಳೊಂದಿಗೆ ಗ್ರಾಮವನ್ನು ಸುತ್ತುತ್ತಾರೆ. ಈ ಸಮಯದಲ್ಲಿ, ಗ್ರಾಮದ ಎಲ್ಲಾ ಹಸುಗಳನ್ನು ಒಂದೇ ಸ್ಥಳದಲ್ಲಿ ಕರೆತರಲಾಗುತ್ತದೆ. ಜನರು ನೆಲದ ಮೇಲೆ ಮಲಗುತ್ತಾರೆ. ಹಸುಗಳು ಅವರನ್ನು ತುಳಿದು ಹೋಗುವಂತೆ ಮಾಡಲಾಗುತ್ತದೆ.

ಹಸುಗಳಿಂದ ತುಳಿಸಿಕೊಳ್ಳುವ ಭಕ್ತರು; ಮಧ್ಯಪ್ರದೇಶದಲ್ಲಿದೆ ಈ ವಿಶಿಷ್ಟವಾದ ದೀಪಾವಳಿ ಸಂಪ್ರದಾಯ
ಮಧ್ಯ ಪ್ರದೇಶದಲ್ಲಿ ವಿಶಿಷ್ಟ ಸಂಪ್ರದಾಯ
ರಶ್ಮಿ ಕಲ್ಲಕಟ್ಟ
|

Updated on: Nov 13, 2023 | 5:34 PM

Share

ಉಜ್ಜಯಿನಿ (ಮಧ್ಯಪ್ರದೇಶ) ನವೆಂಬರ್ 13: “ಮಧ್ಯಪ್ರದೇಶ್ ಅಜಬ್ ಹೈ, ಸಬ್ಸೆ ಗಜಬ್ ಹೈ” (ಮಧ್ಯ ಪ್ರದೇಶ (Madhya Pradesh) ವಿಚಿತ್ರವಾಗಿದೆ, ಅತ್ಯಂತ ಅದ್ಭುತವಾಗಿದೆ) ಎಂಬುದು ರಾಜ್ಯದ ನಾಗರಿಕರ ಜನಪ್ರಿಯ ಘೋಷಣೆ.ಈ ಬಾರಿ ಉಜ್ಜಯಿನಿ (Ujjain) ಜಿಲ್ಲೆಯಲ್ಲಿ ಇದು ಮತ್ತೊಮ್ಮೆ ಪುನರಾವರ್ತನೆಯಾಗಿದೆ. ಅಲ್ಲಿ ದೀಪಾವಳಿ (Diwali) ಸಂದರ್ಭದಲ್ಲಿ ಭಕ್ತರು ಹಸುಗಳಿಂದ ತುಳಿಸಿಕೊಳ್ಳುತ್ತಾರೆ. ಈ ವಿಶಿಷ್ಟ ಸಂಪ್ರದಾಯವು ಜಿಲ್ಲಾ ಕೇಂದ್ರದಿಂದ 75 ಕಿಲೋಮೀಟರ್ ದೂರದಲ್ಲಿರುವ ಬದ್‌ನಗರ ತಹಸಿಲ್‌ನ ಭಿದವಾಡ್ ಗ್ರಾಮದಲ್ಲಿ ಸೋಮವಾರ ಈ ಸಂಪ್ರದಾಯ ನಡೆದಿದೆ.

ದೀಪಾವಳಿ ಹಬ್ಬದ ನಂತರ ಬೆಳಗ್ಗೆ ಇಲ್ಲಿ ಧಾರ್ಮಿಕ ವಿಧಿವಿಧಾನವನ್ನು ನಡೆಸಲಾಗುತ್ತಿದ್ದು, ಈ ಆಚರಣೆಯನ್ನು ಮಾಡುವುದರಿಂದ ತಮ್ಮ ಇಷ್ಟಾರ್ಥಗಳು ಈಡೇರುತ್ತವೆ ಎಂದು ಭಕ್ತರು ನಂಬುತ್ತಾರೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಗ್ರಾಮದಲ್ಲಿ ಗೋವುಗಳನ್ನು ಪೂಜಿಸಲಾಯಿತು. ನಂತರ ಉದ್ದಕ್ಕೆ ಮಲಗಿದ ಭಕ್ತರ ಮೇಲೆ ಹಸುಗಳನ್ನು ಬಿಡಲಾಗುತ್ತದೆ. 33 ಕೋಟಿ ದೇವತೆಗಳು ಗೋವುಗಳಲ್ಲಿ ನೆಲೆಸಿದ್ದಾರೆ ಎಂದು ಜನರು ನಂಬುತ್ತಾರೆ. ಗೋವುಗಳು ತಮ್ಮ ಮೈ ಮೇಲೆ ನಡೆಯಲು ಅವಕಾಶ ನೀಡುವುದರಿಂದ ದೇವರ ಆಶೀರ್ವಾದ ಪಡೆಯಬಹುದೆಂಬುದು ನಂಬಿಕೆ .

ಇದರ ಜೊತೆಗೆ, ಈ ಸಂಪ್ರದಾಯದಲ್ಲಿ ಭಾಗವಹಿಸುವವರು ಮತ್ತೊಂದು ಹಳೆಯ ಸಂಪ್ರದಾಯವನ್ನು ಅನುಸರಿಸಬೇಕು. ಅದೇನೆಂದರೆ ಭಕ್ತರು ಐದು ದಿನಗಳ ಕಾಲ ಉಪವಾಸ ಮಾಡುತ್ತಾರೆ. ದೀಪಾವಳಿಯ ಒಂದು ದಿನ ಮೊದಲು ಅವರು ರಾತ್ರಿಯಿಡೀ ಗ್ರಾಮದ ದೇವಸ್ಥಾನದಲ್ಲಿ ಇರುತ್ತಾರೆ. ಅಲ್ಲಿ ಭಜನೆ, ಕೀರ್ತನೆಗಳನ್ನೂ ಮಾಡುತ್ತಾರೆ.

ದೀಪಾವಳಿಯ ಎರಡನೇ ದಿನದಂದು, ಬೆಳಿಗ್ಗೆ ಪೂಜೆ ಮಾಡವಾಗುತ್ತದೆ. ನಂತರ ಜನರು ಡೋಲುಗಳೊಂದಿಗೆ ಗ್ರಾಮವನ್ನು ಸುತ್ತುತ್ತಾರೆ. ಈ ಸಮಯದಲ್ಲಿ, ಗ್ರಾಮದ ಎಲ್ಲಾ ಹಸುಗಳನ್ನು ಒಂದೇ ಸ್ಥಳದಲ್ಲಿ ಕರೆತರಲಾಗುತ್ತದೆ. ಜನರು ನೆಲದ ಮೇಲೆ ಮಲಗುತ್ತಾರೆ. ಹಸುಗಳು ಅವರನ್ನು ತುಳಿದು ಹೋಗುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: ಆಂಧ್ರಪ್ರದೇಶದ ಈ ಹಳ್ಳಿಯಲ್ಲಿ ಸುಮಾರು 200 ವರ್ಷಗಳಿಂದ ಇಲ್ಲ ದೀಪಾವಳಿ ಆಚರಣೆ

ಗೋವುಗಳು ಸಾಗಿದ ನಂತರ ಭಕ್ತರು ಎದ್ದು ನಿಂತು ಡೊಳ್ಳು ಬಾರಿಸುವ ಮೂಲಕ ಕುಣಿದು ಕುಪ್ಪಳಿಸುವ ಮೂಲಕ ಇಡೀ ಗ್ರಾಮದಲ್ಲಿ ಸಂತಸದ ವಾತಾವರಣ ನಿರ್ಮಾಣವಾಯಿತು. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಅಕ್ಕಪಕ್ಕದ ಗ್ರಾಮಗಳ ಜನರು ಕೂಡ ಬರುತ್ತಾರೆ ಎಂದು ಎನ್​​​ಡಿಟಿವಿ ವರದಿ ಮಾಡಿದೆ. ಸ್ಥಳೀಯರು ಹೇಳಿಕೊಂಡಂತೆ ಈ ಸಾಂಪ್ರದಾಯಿಕ ಆಚರಣೆಯಲ್ಲಿ ಯಾವುದೇ ಭಕ್ತರಿಗೆ ಯಾವುದೇ ದೊಡ್ಡ ಗಾಯಗಳಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್