Sitaram Yechury: ಸಿಪಿಐ ನಾಯಕ ಸೀತಾರಾಂ ಯೆಚೂರಿ ಸ್ಥಿತಿ ಗಂಭೀರ, ವೆಂಟಿಲೇಟರ್​ನಲ್ಲಿ ಚಿಕಿತ್ಸೆ

ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಉಸಿರಾಟದ ಬೆಂಬಲದಲ್ಲಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

Sitaram Yechury: ಸಿಪಿಐ ನಾಯಕ ಸೀತಾರಾಂ ಯೆಚೂರಿ ಸ್ಥಿತಿ ಗಂಭೀರ, ವೆಂಟಿಲೇಟರ್​ನಲ್ಲಿ ಚಿಕಿತ್ಸೆ
ಸೀತಾರಾಮ್ ಯೆಚೂರಿ
Follow us
|

Updated on:Sep 10, 2024 | 2:51 PM

ನವದೆಹಲಿ: ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ಗೆ ದಾಖಲಾಗಿದ್ದ ಸಿಪಿಐ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.

“ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಅವರ ಆರೋಗ್ಯ ಸ್ಥಿತಿ ಈ ಸಮಯದಲ್ಲಿ ಗಂಭೀರವಾಗಿದೆ” ಎಂದು ಎಕ್ಸ್​ನಲ್ಲಿನ ಹೇಳಿಕೆಯಲ್ಲಿ ಸಿಪಿಐಎಂ ತಿಳಿಸಿದೆ.

ಇದನ್ನೂ ಓದಿ: Crime News: ಟಿವಿ ವಾಲ್ಯೂಮ್ ಯಾಕಿಷ್ಟು ಜೋರಾಗಿದೆ? ಎಂದ ವ್ಯಕ್ತಿಯ ಕತ್ತು ಕತ್ತರಿಸಿ ಕೊಲೆ

ತೀವ್ರ ಜ್ವರದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣದಿಂದ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಮೊದಲು ಅವರು ಚಿಕಿತ್ಸೆಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ತೋರಿಸಿದರು. ಅವರನ್ನು ಅಬ್ಸರ್ವೇಷನ್​ನಲ್ಲಿಡಲಾಗಿತ್ತು. ಆದರೆ ಗುರುವಾರ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಹದಗೆಟ್ಟ ನಂತರ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Viral: ನವಜಾತ ಶಿಶು ಮತ್ತು ಪತ್ನಿಯನ್ನು ಆಸ್ಪತ್ರೆಯಿಂದ ಕರೆತರಲು ತನ್ನ ಮೊದಲ ಮಗುವನ್ನೇ ಮಾರಾಟ ಮಾಡಿದ ತಂದೆ

ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್‌ನಲ್ಲಿ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಯೆಚೂರಿ ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Tue, 10 September 24

ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ