AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು

ಪುತ್ರನ ಸಾವಿನ ಬಗ್ಗೆ ಸೀತಾರಾಮ್​ ಯಚೂರಿ ಟ್ವೀಟ್ ಮಾಡಿದ್ದು, ನನ್ನ ಹಿರಿಯ ಪುತ್ರ ಆಶೀಶ್​ ಕೊವಿಡ್​ ಸೋಂಕಿನಿಂದ ಮೃತಪಟ್ಟಿದ್ದಾನೆಂದು ತಿಳಿಸಲು ತುಂಬ ದುಃಖವಾಗುತ್ತಿದೆ.

ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಹಿರಿಯ ಪುತ್ರ ಕೊವಿಡ್​ ಸೋಂಕಿನಿಂದ ಸಾವು
ಆಶಿಶ್ ಯಚೂರಿ
Follow us
Lakshmi Hegde
|

Updated on: Apr 22, 2021 | 9:12 AM

ದೆಹಲಿ: ಸಿಪಿಎಂ (ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್​) ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್​ ಯಚೂರಿ ಅವರ ಹಿರಿಯ ಪುತ್ರ ಆಶೀಶ್​ ಯಚೂರಿ ಕೊರೊನಾ ಸೋಂಕಿನಿಂದ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಗುರ್​ಗಾಂವ್​ನ ಮೇದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಪುತ್ರನ ಸಾವಿನ ಬಗ್ಗೆ ಸೀತಾರಾಮ್​ ಯಚೂರಿ ಟ್ವೀಟ್ ಮಾಡಿದ್ದು, ನನ್ನ ಹಿರಿಯ ಪುತ್ರ ಆಶೀಶ್​ ಕೊವಿಡ್​ ಸೋಂಕಿನಿಂದ ಮೃತಪಟ್ಟಿದ್ದಾನೆಂದು ತಿಳಿಸಲು ತುಂಬ ದುಃಖವಾಗುತ್ತಿದೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್​ಗಳು ಹಾಗೂ ಈ ಹೋರಾಟದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ಆಶೀಶ್​ ಯಚೂರಿಗೆ ಇನ್ನೂ 34ವಯಸ್ಸಷ್ಟೇ. 15ದಿನಗಳ ಹಿಂದೆಯೇ ಸೋಂಕು ತಗುಲಿತ್ತು. ಮೊದಲು ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ ಗುರ್​ಗಾಂವ್​ಗೆ ಸ್ಥಳಾಂತರ ಮಾಡಲಾಗಿತ್ತು. ಆಶೀಶ್​ ದೆಹಲಿಯ ಪ್ರತಿಷ್ಠಿತ ಸುದ್ದಿಪತ್ರಿಕೆಯೊಂದರಲ್ಲಿ ಕಾಪಿ ಎಡಿಟರ್ ಆಗಿದ್ದರು. ಆಶೀಶ್​​ನ್ನು ಕಳೆದುಕೊಂಡ ಕುಟುಂಬ ಶಾಕ್​ನಲ್ಲಿದೆ. ಸೀತಾರಾಮ್ ಯಚೂರಿಯವರು ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಇದನ್ನೂ ಓದಿ: ನಾವು ಲಸಿಕೆ ಹಾಕಿಸಿಕೊಳ್ಳೋದಿಲ್ಲ ಇಲ್ಲಿ ಬಂದು ಕೊರೊನ ಹಬ್ಬಿಸಬೇಡಿ ಎಂದು ವಿಶ್ವನಾಥ್‌ ವಿರುದ್ಧ ಗರಂ ಆದ ಹಾಡಿ ಜನ

CPM general secretary sitaram yechury son Ashish Yechuri died due to Covid 19 in gurgaon

ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
ರಾಹುಲ್​ಗೆ ತಿರುಗೇಟು ನೀಡಲು ಪ್ಲ್ಯಾನ್ ರೂಪಿಸಿದ್ದ ವಿರಾಟ್ ಕೊಹ್ಲಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
14 ವರ್ಷದ ವೈಭವ್​ನ 11 ರಾಕೆಟ್ ಸಿಕ್ಸ್​ಗಳು: ವಿಡಿಯೋ ವೀಕ್ಷಿಸಿ
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?