ಕ್ರೇನ್‌‌ ಮೈಮೇಲೆ ಬಿದ್ದು‌ 5 ಕಾರ್ಮಿಕರು ಸ್ಥಳದಲ್ಲಿಯೇ‌ ಸಾವು, ಎಲ್ಲಿ?

ಆಂಧ್ರಪ್ರದೇಶ: ಕೊರೊನಾ ಮಹಾಮಾರಿಯ ಅಟ್ಟಹಾಸದ ನಡುವೆ ಆಂದ್ರ ಪ್ರದೇಶದಲ್ಲಿ ಕಾರ್ಮಿಕರ ಸಾವಿನ ಸರಣಿ ಮುಂದುವರದಿದೆ. ಕೈಗಾರಿಕಾ ಅವಘಡಗಳಿಗೆ ಅಂತ್ಯ ಅನ್ನುವುದೇ ಇಲ್ಲವಾಗಿದೆ. ಇಂದು ಕ್ರೇನ್‌‌ ಬಿದ್ದು 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿರುವ ದುರ್ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್ ಶಿಪ್‌ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಕ್ರೇನ್ ಮೈಮೇಲೆ ಬಿದ್ದು 5 ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜೊತೆಗೆ ಹಲವಾರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುರಂತದ ವಿಚಾರ ತಿಳಿದ ಕಾರ್ಮಿಕರ […]

ಕ್ರೇನ್‌‌ ಮೈಮೇಲೆ ಬಿದ್ದು‌ 5 ಕಾರ್ಮಿಕರು ಸ್ಥಳದಲ್ಲಿಯೇ‌ ಸಾವು, ಎಲ್ಲಿ?

Updated on: Aug 01, 2020 | 2:22 PM

ಆಂಧ್ರಪ್ರದೇಶ: ಕೊರೊನಾ ಮಹಾಮಾರಿಯ ಅಟ್ಟಹಾಸದ ನಡುವೆ ಆಂದ್ರ ಪ್ರದೇಶದಲ್ಲಿ ಕಾರ್ಮಿಕರ ಸಾವಿನ ಸರಣಿ ಮುಂದುವರದಿದೆ. ಕೈಗಾರಿಕಾ ಅವಘಡಗಳಿಗೆ ಅಂತ್ಯ ಅನ್ನುವುದೇ ಇಲ್ಲವಾಗಿದೆ. ಇಂದು ಕ್ರೇನ್‌‌ ಬಿದ್ದು 5 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿರುವ ದುರ್ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ.

ವಿಶಾಖಪಟ್ಟಣಂನಲ್ಲಿರುವ ಹಿಂದುಸ್ತಾನ್ ಶಿಪ್‌ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಕ್ರೇನ್ ಮೈಮೇಲೆ ಬಿದ್ದು 5 ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜೊತೆಗೆ ಹಲವಾರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ದುರಂತದ ವಿಚಾರ ತಿಳಿದ ಕಾರ್ಮಿಕರ ಸಂಬಂಧಿಗಳು ಘಟನಾಸ್ಥಳಕ್ಕೆ ಆತಂಕದಿಂದ ಧಾವಿಸುತ್ತಿದ್ದು, ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು ಯಾರೊಬ್ಬರನ್ನು ಘಟನಾ ಸ್ಥಳಕ್ಕೆ ಬಿಡುತ್ತಿಲ್ಲ. ಹೀಗಾಗಿ ಮೃತರ ಸಂಬಂಧಿಗಳು ಕಾರ್ಖಾನೆಯ ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us