AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​

ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​
ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು
ರಾಜೇಶ್ ದುಗ್ಗುಮನೆ
| Edited By: |

Updated on:Jan 21, 2021 | 5:33 PM

Share

ಟೆಸ್ಟ್​​ ಕ್ರಿಕೆಟ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೌಲರ್​ ಮೊಹಮದ್​ ಸಿರಾಜ್​ ತುಂಬಾನೇ ಭಾವನಾತ್ಮಕ ವ್ಯಕ್ತಿ. ಎದುರಾಳಿ ಮುಖಕ್ಕೆ ಚೆಂಡು ಬಡಿದಾಗ ಮೊಹಮದ್​ ಸಿರಾಜ್​ ಓಡೋಡಿ ಹೋಗಿ, ಸಂತೈಸಿದ್ದರು. ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿಳಿದು ತಾಯ್ನಾಡಿನಲ್ಲಿ ಕಾಲಿಟ್ಟವರೆ ನೇರವಾಗಿ ತಂದೆಯ ಸಮಾಧಿಗೆ ತೆರಳಿ ನಮನ ಸಲ್ಲಿಸಿ, ಕಣ್ಣೀರಿಟ್ಟಿದ್ದಾರೆ.

ಮೊಹಮದ್​ ಸಿರಾಜ್​ ಆಸ್ಟ್ರೇಲಿಯಾದಲ್ಲಿರುವಾಗಲೇ ಹೈದರಾಬಾದ್​ನಲ್ಲಿದ್ದ ಅವರ ತಂದೆ ಮೃತಪಟ್ಟಿದ್ದರು. ಆದಾಗ್ಯೂ ಸಿರಾಜ್​ ತಾಯ್ನಾಡಿಗೆ ಬಾರದೇ ಟೀಂ ಇಂಡಿಯಾ ಪರವಾಗಿ ಆಡಿದ್ದರು. ಮೊಹಮದ್​ ಸಿರಾಜ್​ ಗಾಬಾದಲ್ಲಿ ನಡೆದ ಟೆಸ್ಟ್​ನ ಕೊನೆಯ ಪಂದ್ಯದಲ್ಲಿ ಸಿರಾಜ್​ ಐದು ವಿಕೆಟ್​ ಕಿತ್ತು ಪ್ರಮುಖ ಆಟಗಾರ ಎನಿಸಿಕೊಂಡಿದ್ದರು. ಈಗ ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು ತಂದೆಯನ್ನು ಕಳೆದುಕೊಂಡು ಅಲ್ಲೇ ಇರುವುದು ಕಠಿಣ ಸಂದರ್ಭವಾಗಿತ್ತು. ಆದರೆ, ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು. ಕ್ರಿಕೆಟ್​ನಲ್ಲಿ ಸಾಧನೆ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸು. ಹೀಗಾಗಿ, ನಾನು ಮಾನಸಿಕವಾಗಿ ಗಟ್ಟಿಯಾದೆ. ಕ್ರಿಕೆಟ್​ನಲ್ಲಿ ಒಂದು ಹಂತದಲ್ಲಿ ಸಾಧನೆ ಮಾಡಿ, ತಂದೆಯ ಕನಸನ್ನು ಈಡೇರಿಸುತ್ತೇನೆ ಎಂದರು ಸಿರಾಜ್.

Published On - 4:54 pm, Thu, 21 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್