AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​

ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​
ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು
ರಾಜೇಶ್ ದುಗ್ಗುಮನೆ
| Edited By: |

Updated on:Jan 21, 2021 | 5:33 PM

Share

ಟೆಸ್ಟ್​​ ಕ್ರಿಕೆಟ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೌಲರ್​ ಮೊಹಮದ್​ ಸಿರಾಜ್​ ತುಂಬಾನೇ ಭಾವನಾತ್ಮಕ ವ್ಯಕ್ತಿ. ಎದುರಾಳಿ ಮುಖಕ್ಕೆ ಚೆಂಡು ಬಡಿದಾಗ ಮೊಹಮದ್​ ಸಿರಾಜ್​ ಓಡೋಡಿ ಹೋಗಿ, ಸಂತೈಸಿದ್ದರು. ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿಳಿದು ತಾಯ್ನಾಡಿನಲ್ಲಿ ಕಾಲಿಟ್ಟವರೆ ನೇರವಾಗಿ ತಂದೆಯ ಸಮಾಧಿಗೆ ತೆರಳಿ ನಮನ ಸಲ್ಲಿಸಿ, ಕಣ್ಣೀರಿಟ್ಟಿದ್ದಾರೆ.

ಮೊಹಮದ್​ ಸಿರಾಜ್​ ಆಸ್ಟ್ರೇಲಿಯಾದಲ್ಲಿರುವಾಗಲೇ ಹೈದರಾಬಾದ್​ನಲ್ಲಿದ್ದ ಅವರ ತಂದೆ ಮೃತಪಟ್ಟಿದ್ದರು. ಆದಾಗ್ಯೂ ಸಿರಾಜ್​ ತಾಯ್ನಾಡಿಗೆ ಬಾರದೇ ಟೀಂ ಇಂಡಿಯಾ ಪರವಾಗಿ ಆಡಿದ್ದರು. ಮೊಹಮದ್​ ಸಿರಾಜ್​ ಗಾಬಾದಲ್ಲಿ ನಡೆದ ಟೆಸ್ಟ್​ನ ಕೊನೆಯ ಪಂದ್ಯದಲ್ಲಿ ಸಿರಾಜ್​ ಐದು ವಿಕೆಟ್​ ಕಿತ್ತು ಪ್ರಮುಖ ಆಟಗಾರ ಎನಿಸಿಕೊಂಡಿದ್ದರು. ಈಗ ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು ತಂದೆಯನ್ನು ಕಳೆದುಕೊಂಡು ಅಲ್ಲೇ ಇರುವುದು ಕಠಿಣ ಸಂದರ್ಭವಾಗಿತ್ತು. ಆದರೆ, ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು. ಕ್ರಿಕೆಟ್​ನಲ್ಲಿ ಸಾಧನೆ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸು. ಹೀಗಾಗಿ, ನಾನು ಮಾನಸಿಕವಾಗಿ ಗಟ್ಟಿಯಾದೆ. ಕ್ರಿಕೆಟ್​ನಲ್ಲಿ ಒಂದು ಹಂತದಲ್ಲಿ ಸಾಧನೆ ಮಾಡಿ, ತಂದೆಯ ಕನಸನ್ನು ಈಡೇರಿಸುತ್ತೇನೆ ಎಂದರು ಸಿರಾಜ್.

Published On - 4:54 pm, Thu, 21 January 21

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು