AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​

ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಮಾನ ಇಳಿದು ನೇರ ತಂದೆ ಸಮಾಧಿಗೆ ತೆರಳಿ ಕಣ್ಣೀರಿಟ್ಟ ಬೌಲರ್​ ಮೊಹಮದ್​ ಸಿರಾಜ್​
ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 21, 2021 | 5:33 PM

Share

ಟೆಸ್ಟ್​​ ಕ್ರಿಕೆಟ್​ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೌಲರ್​ ಮೊಹಮದ್​ ಸಿರಾಜ್​ ತುಂಬಾನೇ ಭಾವನಾತ್ಮಕ ವ್ಯಕ್ತಿ. ಎದುರಾಳಿ ಮುಖಕ್ಕೆ ಚೆಂಡು ಬಡಿದಾಗ ಮೊಹಮದ್​ ಸಿರಾಜ್​ ಓಡೋಡಿ ಹೋಗಿ, ಸಂತೈಸಿದ್ದರು. ರಾಷ್ಟ್ರಗೀತೆ ಹಾಡುವಾಗ ಕಣ್ಣೀರಿಟ್ಟಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದಾರೆ. ವಿಮಾನ ನಿಲ್ದಾಣದಲ್ಲಿಳಿದು ತಾಯ್ನಾಡಿನಲ್ಲಿ ಕಾಲಿಟ್ಟವರೆ ನೇರವಾಗಿ ತಂದೆಯ ಸಮಾಧಿಗೆ ತೆರಳಿ ನಮನ ಸಲ್ಲಿಸಿ, ಕಣ್ಣೀರಿಟ್ಟಿದ್ದಾರೆ.

ಮೊಹಮದ್​ ಸಿರಾಜ್​ ಆಸ್ಟ್ರೇಲಿಯಾದಲ್ಲಿರುವಾಗಲೇ ಹೈದರಾಬಾದ್​ನಲ್ಲಿದ್ದ ಅವರ ತಂದೆ ಮೃತಪಟ್ಟಿದ್ದರು. ಆದಾಗ್ಯೂ ಸಿರಾಜ್​ ತಾಯ್ನಾಡಿಗೆ ಬಾರದೇ ಟೀಂ ಇಂಡಿಯಾ ಪರವಾಗಿ ಆಡಿದ್ದರು. ಮೊಹಮದ್​ ಸಿರಾಜ್​ ಗಾಬಾದಲ್ಲಿ ನಡೆದ ಟೆಸ್ಟ್​ನ ಕೊನೆಯ ಪಂದ್ಯದಲ್ಲಿ ಸಿರಾಜ್​ ಐದು ವಿಕೆಟ್​ ಕಿತ್ತು ಪ್ರಮುಖ ಆಟಗಾರ ಎನಿಸಿಕೊಂಡಿದ್ದರು. ಈಗ ಟೆಸ್ಟ್​​ ಮುಗಿಸಿ ಭಾರತಕ್ಕೆ ವಾಪಾಸಾಗಿರುವ ಅವರು ನೇರವಾಗಿ ತಂದೆಯ ಅಂತ್ಯ ಸಂಸ್ಕಾರ ನಡೆದ ಜಾಗಕ್ಕೆ ತೆರಳಿದ್ದಾರೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದುಃಖದ ಕಟ್ಟೆ ಒಡೆದಿತ್ತು.. ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು ತಂದೆಯನ್ನು ಕಳೆದುಕೊಂಡು ಅಲ್ಲೇ ಇರುವುದು ಕಠಿಣ ಸಂದರ್ಭವಾಗಿತ್ತು. ಆದರೆ, ತಾಯಿ ಜೊತೆ ಮಾತನಾಡಿದಾಗ ನನ್ನಲ್ಲಿ ಹೊಸ ಸ್ಫೂರ್ತಿ ಬಂದಿತ್ತು. ಕ್ರಿಕೆಟ್​ನಲ್ಲಿ ಸಾಧನೆ ಮಾಡಬೇಕು ಎನ್ನುವುದು ನನ್ನ ತಂದೆಯ ಕನಸು. ಹೀಗಾಗಿ, ನಾನು ಮಾನಸಿಕವಾಗಿ ಗಟ್ಟಿಯಾದೆ. ಕ್ರಿಕೆಟ್​ನಲ್ಲಿ ಒಂದು ಹಂತದಲ್ಲಿ ಸಾಧನೆ ಮಾಡಿ, ತಂದೆಯ ಕನಸನ್ನು ಈಡೇರಿಸುತ್ತೇನೆ ಎಂದರು ಸಿರಾಜ್.

Published On - 4:54 pm, Thu, 21 January 21

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?