AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​
ನವಜೋತ್​ ಸಿಂಗ್ ಸಿಧು
ನಯನಾ ರಾಜೀವ್
|

Updated on: Apr 05, 2024 | 3:31 PM

Share

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ಅಪರೂಪದ ಕಾಯಿಲೆಯಾದ ಮೆಟಾಸ್ಟಾಸಿಸ್​ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ರೋಗದಿಂದ ಪೀಡಿತ ಚರ್ಮವನ್ನು ತೆಗೆದುಹಾಕಲಾಯಿತು ಮತ್ತು ಫ್ಲಾಪ್ ಬಳಸಿ ಮರುನಿರ್ಮಾಣ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಆಕೆಯ ಸಂಕಲ್ಪ ಬಲವಾಗಿದೆ, ಯಾವಾಗಲೂ ಮುಖದಲ್ಲಿ ನಗು ಇರುತ್ತದೆ, ಡಾ. ರೂಪಿಂದರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಹಾರೈಸಿದ್ದಾರೆ ಎಂದು ಸಿಧು ಹೇಳಿದ್ದಾರೆ.

ನವಜೋತ್​ ಕೌರ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಬಗ್ಗೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಮಾಹಿತಿ ಬಹಿರಂಗವಾಗಿತ್ತು. ನನ್ನ ಪಿಇಟಿ ಸ್ಕ್ಯಾನ್ ಪ್ರಕಾರ, ನಾನು ಕ್ಯಾನ್ಸರ್ ಮುಕ್ತ ಎಂದು ಘೋಷಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ಕೌರ್ ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Navjot Singh Sidhu: ಕಾಂಗ್ರೆಸ್​​ ತೊರೆದು ಬಿಜೆಪಿ ಸೇರಲಿದ್ದಾರೆ ನವಜೋತ್ ಸಿಂಗ್ ಸಿಧು: ವರದಿ

ಏಪ್ರಿಲ್ 4 ರಂದು, ಸಿಧು ತಮ್ಮ ಪತ್ನಿ ಎರಡನೇ ಬಾರಿಗೆ ಸ್ತನ ಕ್ಯಾನ್ಸರ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಇಲ್ಲಿಯವರೆಗೆ 6 ಬಾರಿ ಕಿಮೋಥೆರಪಿಗೆ ಒಳಗಾಗಿದ್ದಾರೆ. ಇದಕ್ಕೂ ಮುನ್ನ ಅವರು ಆಪರೇಷನ್‌ಗೆ ಒಳಗಾಗಿದ್ದರು. ನವಜೋತ್ ಕೌರ್ ಚಿಕಿತ್ಸೆಗಾಗಿ ಸಿಧು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ