AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

ಅಂಧೇರಿ ಸಮೀಪ ಇರುವ ಜೆಡಬ್ಲ್ಯೂ ಮ್ಯಾರಿಯಟ್ ಬಳಿ ಈ ಕ್ಲಬ್​ ಇದೆ. ಮುಂಜಾನೆ 2:30ರ ಸುಮಾರಿಗೆ ಈ ಬಂಧನ ನಡೆದಿದೆ. ಸುರೇಶ್​ ರೈನಾ ಮಾತ್ರವಲ್ಲದೇ ಇನ್ನೂ ಕೆಲಸ ಸೆಲಬ್ರೆಟಿಗಳು ಈ ಕ್ಲಬ್​ನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!
ಸುರೇಶ್​ ರೈನಾ
ರಾಜೇಶ್ ದುಗ್ಗುಮನೆ
|

Updated on:Dec 22, 2020 | 3:04 PM

Share

ಮುಂಬೈ: ಕೊರೊನಾವೈರಸ್​ ನಿಯಮ ಪಾಲನೆ ಮಾಡದ ಟೀಂ ಇಂಡಿಯಾ ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.  ಅರೆಸ್ಟ್​ ನಂತರ ಸುರೇಶ್​ ರೈನಾನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಮುಂಬೈ ವಿಮಾನ ನಿಲ್ದಾಣ ಸಮೀಪ ಇರುವ ಡ್ರ್ಯಾಗನ್​ಫ್ಲೈ ಕ್ಲಬ್​ನಲ್ಲಿ ಸುರೇಶ್​ ರೈನಾ ಸೇರಿ ಬಹಳಷ್ಟು ಮಂದಿ ತಡರಾತ್ರಿ ಪಾರ್ಟಿ ಮಾಡುತ್ತಿದ್ದರು. ಅಂಧೇರಿ ಸಮೀಪ ಇರುವ JW ಮ್ಯಾರಿಯಟ್ ಹೋಟೆಲ್​ ಬಳಿ ಈ ಕ್ಲಬ್​ ಇದೆ. ಸರ್ಕಾರ ನಿಗದಿಪಡಿಸಿರುವ ಅವಧಿಗೂ ಮೀರಿ ಇವರು ಪಾರ್ಟಿ ಮಾಡುತ್ತಿದ್ದು ಜೊತೆಗೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು ಎನ್ನಲಾಗಿದೆ.  ಹೀಗಾಗಿ, ರೈನಾ ಸೇರಿದಂತೆ ಎಲ್ಲರ ಬಂಧನವಾಗಿದೆ.

ಬಂಧಿತರಲ್ಲಿ ಗಾಯಕ ಗುರು ರಾಂಧವಾ ಮತ್ತು ಬಾಲಿವುಡ್​ ನಟ ಹೃತಿಕ್​ ರೋಷನ್​ ಮಾಜಿ ಪತ್ನಿ ಸುಸೇನ್ ಖಾನ್ ಕೂಡ ಇದ್ದಾರೆ. ಹೋಟೆಲ್​ನ 7 ಸಿಬ್ಬಂದಿ ಸೇರಿ ಒಟ್ಟು 34 ಜನರು ಅರೆಸ್ಟ್​ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಮುಂಜಾನೆ 2:30ರ ಸುಮಾರಿಗೆ ಎಲ್ಲರ ಬಂಧನವಾಗಿದ್ದು ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಬೆಳಗ್ಗೆ  2:30ರವರೆಗೆ ಕ್ಲಬ್​ ನಡೆಸಲು ಅನುಮತಿ ಇಲ್ಲ. ಆದರೂ, ಕ್ಲಬ್​ ಓಪನ್​ ಇತ್ತು. ಜೊತೆಗೆ, ಸಾಮಾಜಿಕ ಅಂತರ ಕೂಡ ಕಾಪಾಡಿಕೊಳ್ಳಲಾಗಿರಲಿಲ್ಲ, ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ, ಕ್ಲಬ್​ನಲ್ಲಿ ಇದ್ದವರನ್ನು ಬಂಧಿಸಲಾಗಿದೆ, ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ರೈನಾ ನಿವೃತ್ತಿ ಘೋಷಣೆ ಮಾಡಿದ್ದರು. ಈ ಬಾರಿಯ IPL​ನಲ್ಲಿ ಚೆನ್ನೈ ತಂಡವನ್ನು ಅವರು ಪ್ರತಿನಿಧಿಸಬೇಕಿತ್ತು. ಆದರೆ, ವೈಯಕ್ತಿಕ ಕಾರಣ ನೀಡಿ ಭಾರತಕ್ಕೆ ಹಿಂದುರಿಗಿದ್ದರು. ಜನವರಿ 10ರಿಂದ ಆರಂಭಗೊಳ್ಳಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತರ ಪ್ರದೇಶವನ್ನು ರೈನಾ ಪ್ರತಿನಿಧಿಸಲಿದ್ದಾರೆ.

ಸಿಎಸ್​ಕೆ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಸುರೇಶ್ ರೈನಾ

Published On - 1:49 pm, Tue, 22 December 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ