AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

ಅಂಧೇರಿ ಸಮೀಪ ಇರುವ ಜೆಡಬ್ಲ್ಯೂ ಮ್ಯಾರಿಯಟ್ ಬಳಿ ಈ ಕ್ಲಬ್​ ಇದೆ. ಮುಂಜಾನೆ 2:30ರ ಸುಮಾರಿಗೆ ಈ ಬಂಧನ ನಡೆದಿದೆ. ಸುರೇಶ್​ ರೈನಾ ಮಾತ್ರವಲ್ಲದೇ ಇನ್ನೂ ಕೆಲಸ ಸೆಲಬ್ರೆಟಿಗಳು ಈ ಕ್ಲಬ್​ನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!
ಸುರೇಶ್​ ರೈನಾ
ರಾಜೇಶ್ ದುಗ್ಗುಮನೆ
|

Updated on:Dec 22, 2020 | 3:04 PM

Share

ಮುಂಬೈ: ಕೊರೊನಾವೈರಸ್​ ನಿಯಮ ಪಾಲನೆ ಮಾಡದ ಟೀಂ ಇಂಡಿಯಾ ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.  ಅರೆಸ್ಟ್​ ನಂತರ ಸುರೇಶ್​ ರೈನಾನ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಮುಂಬೈ ವಿಮಾನ ನಿಲ್ದಾಣ ಸಮೀಪ ಇರುವ ಡ್ರ್ಯಾಗನ್​ಫ್ಲೈ ಕ್ಲಬ್​ನಲ್ಲಿ ಸುರೇಶ್​ ರೈನಾ ಸೇರಿ ಬಹಳಷ್ಟು ಮಂದಿ ತಡರಾತ್ರಿ ಪಾರ್ಟಿ ಮಾಡುತ್ತಿದ್ದರು. ಅಂಧೇರಿ ಸಮೀಪ ಇರುವ JW ಮ್ಯಾರಿಯಟ್ ಹೋಟೆಲ್​ ಬಳಿ ಈ ಕ್ಲಬ್​ ಇದೆ. ಸರ್ಕಾರ ನಿಗದಿಪಡಿಸಿರುವ ಅವಧಿಗೂ ಮೀರಿ ಇವರು ಪಾರ್ಟಿ ಮಾಡುತ್ತಿದ್ದು ಜೊತೆಗೆ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದರು ಎನ್ನಲಾಗಿದೆ.  ಹೀಗಾಗಿ, ರೈನಾ ಸೇರಿದಂತೆ ಎಲ್ಲರ ಬಂಧನವಾಗಿದೆ.

ಬಂಧಿತರಲ್ಲಿ ಗಾಯಕ ಗುರು ರಾಂಧವಾ ಮತ್ತು ಬಾಲಿವುಡ್​ ನಟ ಹೃತಿಕ್​ ರೋಷನ್​ ಮಾಜಿ ಪತ್ನಿ ಸುಸೇನ್ ಖಾನ್ ಕೂಡ ಇದ್ದಾರೆ. ಹೋಟೆಲ್​ನ 7 ಸಿಬ್ಬಂದಿ ಸೇರಿ ಒಟ್ಟು 34 ಜನರು ಅರೆಸ್ಟ್​ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಮುಂಜಾನೆ 2:30ರ ಸುಮಾರಿಗೆ ಎಲ್ಲರ ಬಂಧನವಾಗಿದ್ದು ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಬೆಳಗ್ಗೆ  2:30ರವರೆಗೆ ಕ್ಲಬ್​ ನಡೆಸಲು ಅನುಮತಿ ಇಲ್ಲ. ಆದರೂ, ಕ್ಲಬ್​ ಓಪನ್​ ಇತ್ತು. ಜೊತೆಗೆ, ಸಾಮಾಜಿಕ ಅಂತರ ಕೂಡ ಕಾಪಾಡಿಕೊಳ್ಳಲಾಗಿರಲಿಲ್ಲ, ಮಾಸ್ಕ್​ ಧರಿಸಿರಲಿಲ್ಲ. ಹೀಗಾಗಿ, ಕ್ಲಬ್​ನಲ್ಲಿ ಇದ್ದವರನ್ನು ಬಂಧಿಸಲಾಗಿದೆ, ಎಂದು ಮಾಹಿತಿ ನೀಡಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ರೈನಾ ನಿವೃತ್ತಿ ಘೋಷಣೆ ಮಾಡಿದ್ದರು. ಈ ಬಾರಿಯ IPL​ನಲ್ಲಿ ಚೆನ್ನೈ ತಂಡವನ್ನು ಅವರು ಪ್ರತಿನಿಧಿಸಬೇಕಿತ್ತು. ಆದರೆ, ವೈಯಕ್ತಿಕ ಕಾರಣ ನೀಡಿ ಭಾರತಕ್ಕೆ ಹಿಂದುರಿಗಿದ್ದರು. ಜನವರಿ 10ರಿಂದ ಆರಂಭಗೊಳ್ಳಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತರ ಪ್ರದೇಶವನ್ನು ರೈನಾ ಪ್ರತಿನಿಧಿಸಲಿದ್ದಾರೆ.

ಸಿಎಸ್​ಕೆ ತಂಡಕ್ಕೆ ಟ್ವೀಟ್ ಮೂಲಕ ಶುಭ ಕೋರಿದ ಸುರೇಶ್ ರೈನಾ

Published On - 1:49 pm, Tue, 22 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ