AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮಾರ್ಕೆಟ್​​ನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ; 19 ವರ್ಷದ ಯುವಕನ ಸಜೀವ ದಹನ

ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಂಗಡಿಯ 2ನೇ ಮಹಡಿಯಲ್ಲಿ ಸುಟ್ಟು ಕರಕಲಾದ ಆತನ ಶವ ಪತ್ತೆಯಾಗಿದೆ. ಗಾಂಧಿನಗರದ ಬಟ್ಟೆ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಸಂಭವಿಸಿದ ಈ ಬೆಂಕಿ ದುರಂತ ಈಗ ನಿಯಂತ್ರಣಕ್ಕೆ ಬಂದಿದೆ.

ದೆಹಲಿ ಮಾರ್ಕೆಟ್​​ನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ; 19 ವರ್ಷದ ಯುವಕನ ಸಜೀವ ದಹನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 06, 2022 | 4:08 PM

Share

ನವದೆಹಲಿ: ನವದೆಹಲಿಯ ಗಾಂಧಿನಗರ ಮಾರುಕಟ್ಟೆಯ ಬೆಂಕಿ ಅವಘಡದಲ್ಲಿ (Fire Accident) 19 ವರ್ಷದ ಯುವಕ ಸಜೀವ ದಹನವಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಯುವಕ ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ ಯುವಕನನ್ನು ಶೆಹ್ನವಾಜ್ ಎಂದು ಗುರುತಿಸಲಾಗಿದ್ದು, ಅವರು ಬೆಂಕಿ ಹೊತ್ತಿಕೊಂಡ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬೆಂಕಿಯ ಧಗೆಯಿಂದ ತಪ್ಪಿಸಿಕೊಳ್ಳಲಾಗದೆ ಅವರು ದುರಂತ ಅಂತ್ಯ ಕಂಡಿದ್ದಾರೆ.

ಅದೇ ಬಟ್ಟೆ ಅಂಗಡಿಯಲ್ಲಿ ಕಳೆದ 12 ವರ್ಷಗಳಿಂದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಹಾಗೂ ಮೃತ ಯುವಕನ ಅಣ್ಣನಾಗಿರುವ ಅಫ್ತಾಬ್ ನಿನ್ನೆ ಸಂಜೆ ತನ್ನ ಇತರ 4ರಿಂದ 5 ಉದ್ಯೋಗಿಗಳೊಂದಿಗೆ ಅಂಗಡಿಯತ್ತ ಬರುವಾಗ ಅಂಗಡಿಯೊಳಗೆ ಭಾರೀ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಅವರು ಬೇರೆ ಅಂಗಡಿಗೆ ಹೋಗಿ ವಾಪಾಸ್ ಬರುವಷ್ಟರಲ್ಲಿ ಈ ದುರಂತ ಸಂಭವಿಸಿತ್ತು. ತಕ್ಷಣ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ, ತನ್ನ ಮಾಲೀಕರಿಗೂ ಅವರು ಫೋನ್ ಮಾಡಿದ್ದರು.

ಇದನ್ನೂ ಓದಿ: Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಅಫ್ತಾಬ್ ತಕ್ಷಣ ಮಾಲೀಕರಿಗೆ ಕರೆ ಮಾಡಿದ್ದರಿಂದ ಅವರು ಕೂಡ ಸ್ಥಳಕ್ಕೆ ಆಗಮಿಸಿದರು. ಆದರೆ, ತನ್ನ ಸಹೋದರ ಶೆಹ್ನವಾಜ್ ಅಂಗಡಿಯೊಳಗೆ ಸಿಕ್ಕಿಬಿದ್ದಿದ್ದಾನೆ ಎಂಬುದು ಅಫ್ತಾಬ್​ಗೆ ನಂತರ ಗೊತ್ತಾಯಿತು. ವರದಿಗಳ ಪ್ರಕಾರ, ಅವರಿಗೆ ಶೆಹ್ನವಾಜ್ ಒಳಗಿನಿಂದ ಬಾಗಿಲು ಬಡಿಯುವುದು ಕೇಳಿಸಿದೆ. ಆಗ ಅಲ್ಲಿದ್ದವರು ಶೆಹ್ನವಾಜ್‌ಗೆ ಮೇಲೆ ಓಡಿ ಹೋಗಲು ಹೇಳಿದರೂ ಆತನಿಗೆ ಅದು ಕೇಳಲಿಲ್ಲ. ಕೊನೆಗೆ ಅಲ್ಲಿದ್ದವರು ಸೇರಿ ಅಂಗಡಿಯ ಬೀಗ ಒಡೆಯಲು ಪ್ರಯತ್ನಿಸಿದರು. ಆದರೂ ಒಳಗೆ ಹೋಗಲು ಆಗಲಿಲ್ಲ.

ಕೊನೆಗೆ ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಂಗಡಿಯ 2ನೇ ಮಹಡಿಯಲ್ಲಿ ಸುಟ್ಟು ಕರಕಲಾದ ಆತನ ಶವ ಪತ್ತೆಯಾಗಿದೆ. ಗಾಂಧಿನಗರದ ಬಟ್ಟೆ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಸಂಭವಿಸಿದ ಈ ಬೆಂಕಿ ದುರಂತ ಈಗ ನಿಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ