ದೆಹಲಿ ಮಾರ್ಕೆಟ್​​ನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ; 19 ವರ್ಷದ ಯುವಕನ ಸಜೀವ ದಹನ

ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಂಗಡಿಯ 2ನೇ ಮಹಡಿಯಲ್ಲಿ ಸುಟ್ಟು ಕರಕಲಾದ ಆತನ ಶವ ಪತ್ತೆಯಾಗಿದೆ. ಗಾಂಧಿನಗರದ ಬಟ್ಟೆ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಸಂಭವಿಸಿದ ಈ ಬೆಂಕಿ ದುರಂತ ಈಗ ನಿಯಂತ್ರಣಕ್ಕೆ ಬಂದಿದೆ.

ದೆಹಲಿ ಮಾರ್ಕೆಟ್​​ನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ; 19 ವರ್ಷದ ಯುವಕನ ಸಜೀವ ದಹನ
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Oct 06, 2022 | 4:08 PM

ನವದೆಹಲಿ: ನವದೆಹಲಿಯ ಗಾಂಧಿನಗರ ಮಾರುಕಟ್ಟೆಯ ಬೆಂಕಿ ಅವಘಡದಲ್ಲಿ (Fire Accident) 19 ವರ್ಷದ ಯುವಕ ಸಜೀವ ದಹನವಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಯುವಕ ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ ಯುವಕನನ್ನು ಶೆಹ್ನವಾಜ್ ಎಂದು ಗುರುತಿಸಲಾಗಿದ್ದು, ಅವರು ಬೆಂಕಿ ಹೊತ್ತಿಕೊಂಡ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬೆಂಕಿಯ ಧಗೆಯಿಂದ ತಪ್ಪಿಸಿಕೊಳ್ಳಲಾಗದೆ ಅವರು ದುರಂತ ಅಂತ್ಯ ಕಂಡಿದ್ದಾರೆ.

ಅದೇ ಬಟ್ಟೆ ಅಂಗಡಿಯಲ್ಲಿ ಕಳೆದ 12 ವರ್ಷಗಳಿಂದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಹಾಗೂ ಮೃತ ಯುವಕನ ಅಣ್ಣನಾಗಿರುವ ಅಫ್ತಾಬ್ ನಿನ್ನೆ ಸಂಜೆ ತನ್ನ ಇತರ 4ರಿಂದ 5 ಉದ್ಯೋಗಿಗಳೊಂದಿಗೆ ಅಂಗಡಿಯತ್ತ ಬರುವಾಗ ಅಂಗಡಿಯೊಳಗೆ ಭಾರೀ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಅವರು ಬೇರೆ ಅಂಗಡಿಗೆ ಹೋಗಿ ವಾಪಾಸ್ ಬರುವಷ್ಟರಲ್ಲಿ ಈ ದುರಂತ ಸಂಭವಿಸಿತ್ತು. ತಕ್ಷಣ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ, ತನ್ನ ಮಾಲೀಕರಿಗೂ ಅವರು ಫೋನ್ ಮಾಡಿದ್ದರು.

ಇದನ್ನೂ ಓದಿ: Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಅಫ್ತಾಬ್ ತಕ್ಷಣ ಮಾಲೀಕರಿಗೆ ಕರೆ ಮಾಡಿದ್ದರಿಂದ ಅವರು ಕೂಡ ಸ್ಥಳಕ್ಕೆ ಆಗಮಿಸಿದರು. ಆದರೆ, ತನ್ನ ಸಹೋದರ ಶೆಹ್ನವಾಜ್ ಅಂಗಡಿಯೊಳಗೆ ಸಿಕ್ಕಿಬಿದ್ದಿದ್ದಾನೆ ಎಂಬುದು ಅಫ್ತಾಬ್​ಗೆ ನಂತರ ಗೊತ್ತಾಯಿತು. ವರದಿಗಳ ಪ್ರಕಾರ, ಅವರಿಗೆ ಶೆಹ್ನವಾಜ್ ಒಳಗಿನಿಂದ ಬಾಗಿಲು ಬಡಿಯುವುದು ಕೇಳಿಸಿದೆ. ಆಗ ಅಲ್ಲಿದ್ದವರು ಶೆಹ್ನವಾಜ್‌ಗೆ ಮೇಲೆ ಓಡಿ ಹೋಗಲು ಹೇಳಿದರೂ ಆತನಿಗೆ ಅದು ಕೇಳಲಿಲ್ಲ. ಕೊನೆಗೆ ಅಲ್ಲಿದ್ದವರು ಸೇರಿ ಅಂಗಡಿಯ ಬೀಗ ಒಡೆಯಲು ಪ್ರಯತ್ನಿಸಿದರು. ಆದರೂ ಒಳಗೆ ಹೋಗಲು ಆಗಲಿಲ್ಲ.

ಕೊನೆಗೆ ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಂಗಡಿಯ 2ನೇ ಮಹಡಿಯಲ್ಲಿ ಸುಟ್ಟು ಕರಕಲಾದ ಆತನ ಶವ ಪತ್ತೆಯಾಗಿದೆ. ಗಾಂಧಿನಗರದ ಬಟ್ಟೆ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಸಂಭವಿಸಿದ ಈ ಬೆಂಕಿ ದುರಂತ ಈಗ ನಿಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?