6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಪಕ್ಕದ ಮನೆಯ ಕಾರಿನಲ್ಲಿ ಶವವಿಟ್ಟ ಸಂಬಂಧಿ
ಮನೆಯ ಮಗುವಿನ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿ ಶವವನ್ನು ಪಕ್ಕದ ಮನೆಯ ಕಾರಿನಲ್ಲಿಟ್ಟ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್ಗಢದಲ್ಲಿ ಘಟನೆ ನಡೆದಿದೆ. ಅತ್ಯಾಚಾರ ಮಾಡಿ ಕೊಲೆ ಮಾಡಿ, ಶವವನ್ನು ಕಾರಿನ ಡಿಕ್ಕಿಯಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವರಾತ್ರಿ ಹಬ್ಬದ ಭಾಗವಾಗಿ ಆಯೋಜಿಸಲಾಗಿದ್ದ ಆಚರಣೆಯ ನಂತರ ಏಪ್ರಿಲ್ 5 ರಂದು ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು.

ಛತ್ತೀಸ್ಗಢ, ಏಪ್ರಿಲ್ 08: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಗಳು ದೇಶಾದ್ಯಂತ ಹೆಚ್ಚಾಗಿವೆ. ವ್ಯಕ್ತಿಯೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ(Murder) ಮಾಡಿ, ಪಕ್ಕದ ಮನೆಯ ಕಾರಿನಲ್ಲಿ ಶವವಿಟ್ಟಿರುವ ಘಟನೆ ಛತ್ತೀಸ್ಗಢದ ದುರ್ಗ್ನಲ್ಲಿ ನಡೆದಿದೆ. ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅತ್ಯಾಚಾರ ಮಾಡಿ ಕೊಲೆ ಮಾಡಿ, ಶವವನ್ನು ಕಾರಿನಲ್ಲಿ ಬಚ್ಚಿಟ್ಟು ಬೀಗ ಹಾಕಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವರಾತ್ರಿ ಹಬ್ಬದ ಭಾಗವಾಗಿ ಆಯೋಜಿಸಲಾಗಿದ್ದ ಆಚರಣೆಯ ನಂತರ ಏಪ್ರಿಲ್ 5 ರಂದು ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು.
ಕನ್ಯಾ ಭೋಜನದಲ್ಲಿ ಭಾಗವಹಿಸಲು ಮಗು ತನ್ನ ಅಜ್ಜಿಯ ಮನೆಗೆ ಭೇಟಿ ನೀಡಿತ್ತು, ಆದರೆ ಮನೆಗೆ ಹಿಂತಿರುಗಲಿಲ್ಲ. ಆಕೆಯ ಕುಟುಂಬವು ಪೊಲೀಸರಿಗೆ ನಾಪತ್ತೆ ದೂರು ನೀಡುವ ಮೊದಲು ತೀವ್ರ ಹುಡುಕಾಟವನ್ನು ಪ್ರಾರಂಭಿಸಿತ್ತು ಎಂದು ದುರ್ಗ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಖನಂದನ್ ರಾಥೋಡ್ ಮಾಹಿತಿ ನೀಡಿದ್ದಾರೆ.
ಬಾಲಕಿಯ ಅಜ್ಜಿ ಮತ್ತು ಇನ್ನೊಬ್ಬ ಸಂಬಂಧಿ ದೇವಸ್ಥಾನಕ್ಕೆ ಹೋಗಿದ್ದರು ಮತ್ತು ಆರೋಪಿ ಸೋಮೇಶ್ ಯಾದವ್ , ಮನೆಯಲ್ಲಿ ಇದ್ದ, ಎಂದು ಅವರು ಹೇಳಿದರು. ಯಾದವ್ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಂದು, ನಂತರ ಆಕೆಯ ಶವವನ್ನು ಪಕ್ಕದ ಮನೆಯವರ ಕಾರಿನೊಳಗೆ ಇಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಆಲ್ಕೋಹಾಲ್ ಕುಡಿಸಿ ವಾರಾಣಸಿಯ ಪಿಯುಸಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ
ಕಾರನ್ನು ನಿತ್ಯ ಅಲ್ಲಿಯೇ ನಿಲ್ಲಿಸಲಾಗುತ್ತಿತ್ತು ಮತ್ತು ಅದರ ಒಂದು ಬಾಗಿಲು ಅನ್ಲಾಕ್ ಆಗಿರುವುದು ಆರೋಪಿಗೆ ತಿಳಿದಿತ್ತು ಎಂದು ಅಧಿಕಾರಿ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದ ಮೂವರು ಶಂಕಿತರಲ್ಲಿ ಆರೋಪಿಯೂ ಒಬ್ಬ ಎಂದು ಎಎಸ್ಪಿ ತಿಳಿಸಿದ್ದಾರೆ. ಕಾರು ಮಾಲೀಕರು ಸೇರಿದಂತೆ ಮೂವರು ಶಂಕಿತರಲ್ಲಿ ಇಬ್ಬರನ್ನು ವಿಚಾರಣೆಯ ನಂತರ ಬಿಡುಗಡೆ ಮಾಡಲಾಗಿದೆ.
ರಾತ್ರಿ ವೇಳೆ ಕಾರಿನಲ್ಲಿ ಶವವಿರುವುದು ಬೆಳಕಿಗೆ ಬಂದಿತ್ತು, ಹುಡುಗಿಯ ದೇಹದಲ್ಲಿ ಗಾಯದ ಗುರುತುಗಳಿದ್ದವು ಮತ್ತು ವೈದ್ಯಕೀಯ ವರದಿಯು ಲೈಂಗಿಕ ದೌರ್ಜನ್ಯವನ್ನು ದೃಢಪಡಿಸಿದೆ ಎಂದು ರಾಥೋಡ್ ಹೇಳಿದರು.
ತನಿಖೆಯ ಸಮಯದಲ್ಲಿ ಸಂಬಂಧಿಯೇ ಅಪರಾಧದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಮತ್ತು ಅವರನ್ನು ಬಂಧಿಸಲಾಯಿತು ಎಂದು ರಾಥೋಡ್ ಹೇಳಿದರು. ಆರೋಪಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು. ಆರೋಪಿಗಳ ವಿರುದ್ಧ ಅತ್ಯಾಚಾರ, ಕೊಲೆ, ಅಪಹರಣ ಮತ್ತು ಇತರ ಆರೋಪಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಘಟನೆಯಿಂದ ಕೋಪಗೊಂಡ ನಿವಾಸಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸದಸ್ಯರು ಸೋಮವಾರ ಮೋಹನ್ ನಗರ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಸಂತ್ರಸ್ತೆಯ ಶವವನ್ನು ಹೊತ್ತುಕೊಂಡು ಕಾನೂನು ಜಾರಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬವಾದ ಕ್ರಮವನ್ನು ಆರೋಪಿಸಿದರು.
ಪ್ರತಿಭಟನೆ ಶೀಘ್ರದಲ್ಲೇ ಹಿಂಸಾತ್ಮಕವಾಯಿತು, ಜನರು ಕಲ್ಲು ತೂರಾಟ ಮತ್ತು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದರು, ಇದರಿಂದಾಗಿ ಅಧಿಕಾರಿಗಳು ಗುಂಪಿನ ಮೇಲೆ ಲಾಠಿ ಚಾರ್ಜ್ ಮಾಡಬೇಕಾಯಿತು.
ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಈ ಘಟನೆಯನ್ನು ಅಮಾನವೀಯ ಎಂದು ಹೇಳಿದ್ದು ಮತ್ತು ಘಟನೆಯ ಹಿಂದಿರುವವರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಹೇಳಿದ್ದಾರೆ. ಕೆಲವು ಶಂಕಿತರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ