AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 5 ಬಾರಿ ಬಸ್ಕಿ ಹೊಡೆಯುವ ಶಿಕ್ಷೆ!

ಸಣ್ಣ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಕೇವಲ 5 ಬಸ್ಕಿ ಹೊಡೆಯುವ ಶಿಕ್ಷೆಯೇ? ಎಂದು ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 5 ಬಾರಿ ಬಸ್ಕಿ ಹೊಡೆಯುವ ಶಿಕ್ಷೆ!
5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 5 ಬಾರಿ ಬಸ್ಕಿ ಹೊಡೆಯುವ ಶಿಕ್ಷೆ!
TV9 Web
| Edited By: |

Updated on: Nov 25, 2022 | 4:39 PM

Share

ಲಕ್ನೋ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Rape) ನಡೆಸಿದ ಕಾಮುಕನನ್ನು ಆ ಮಗುವಿನ ಅಪ್ಪ-ಅಮ್ಮ ಪಂಚಾಯಿತಿಯ ಮುಂದೆ ತಂದು ನಿಲ್ಲಿಸಿದ್ದರು. ಆ ಆರೋಪಿಯ ವಿಚಾರಣೆ ನಡೆಸಿದ ಪಂಚಾಯಿತಿ ಸಿಬ್ಬಂದಿ ಊರಿನವರ ಮುಂದೆ ಆ ವ್ಯಕ್ತಿಗೆ 5 ಬಾರಿ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ್ದಾರೆ. ಆತ ಮುಖದ ಮೇಲೆ ಬಟ್ಟೆ ಹಾಕಿಕೊಂಡು ಬಸ್ಕಿ ಹೊಡೆದ ನಂತರ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಈ ಘಟನೆ ಬಿಹಾರದ (Bihar) ನವಾಡ ಜಿಲ್ಲೆಯಲ್ಲಿ ನಡೆದಿದೆ.

ಸಣ್ಣ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಕೇವಲ 5 ಬಸ್ಕಿ ಹೊಡೆಯುವ ಶಿಕ್ಷೆಯೇ? ಎಂದು ಈ ವಿಡಿಯೋವನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಈ ನ್ಯಾಯ ಪಂಚಾಯಿತಿಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 ವರ್ಷದ ಮಗುವಿಗೆ ಚಾಕೊಲೇಟ್‌ಗಳನ್ನು ಕೊಡಿಸುವುದಾಗಿ ನಂಬಿಸಿ, ತನ್ನ ಕೋಳಿ ಫಾರಂಗೆ ಕರೆದೊಯ್ದ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಆ ವ್ಯಕ್ತಿಯನ್ನು ಹಿಡಿದು ಗ್ರಾಮಸಭೆ ಅಥವಾ ಪಂಚಾಯತ್ ಮುಂದೆ ಹಾಜರುಪಡಿಸಿದಾಗ ಹಿರಿಯರು ಅವನನ್ನು ಪೊಲೀಸರಿಗೆ ಒಪ್ಪಿಸದಿರಲು ನಿರ್ಧರಿಸಿದ್ದಾರೆ. ಆತನನ್ನು ಪೊಲೀಸರಿಗೆ ಹಿಡಿದು ಕೊಟ್ಟರೆ ಊರಿನ ಮರ್ಯಾದೆ ಹೋಗುತ್ತದೆ ಎಂದು ತೀರ್ಮಾನಿಸಿದ ಅವರು ತಾವೇ ಶಿಕ್ಷೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ, ಜನರ ಮುಂದೆ ಆತ 5 ಬಾರಿ ಬಸ್ಕಿ ಹೊಡೆಯಬೇಕೆಂದು ಶಿಕ್ಷೆ ನೀಡಿದ್ದಾರೆ. ಇನ್ನೂ ವಿಚಿತ್ರವೆಂದರೆ, ಆತ ಆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿಲ್ಲ. ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಕ್ಕೆ 5 ಬಾರಿ ಬಸ್ಕಿ ಹೊಡೆಸಲಾಗಿದೆ. ಆತ ನಿರಪರಾಧಿ ಎಂದು ಪಂಚಾಯಿತಿ ತೀರ್ಪು ನೀಡಿದೆ.

ಇದನ್ನೂ ಓದಿ: Shocking News: ರಾಜಸ್ಥಾನ- ಪಾಕಿಸ್ತಾನದ ಗಡಿಯಲ್ಲಿ ಮಾತು ಬಾರದ, ಕಿವಿ ಕೇಳದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಈ ವೀಡಿಯೊ ವೈರಲ್ ಆದ ನಂತರ ಇದು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಅನೇಕರು ಇದನ್ನು ಗ್ರಾಮೀಣ ಭಾರತದಲ್ಲಿ ಪುರುಷ ಪ್ರಧಾನ ವ್ಯವಸ್ಥೆಯ ತೀರ್ಮಾನ ಎಂದು ಟೀಕಿಸಿದ್ದಾರೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ