AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2023 | 11:53 AM

Share

ನವದೆಹಲಿ: ದೆಹಲಿಯಲ್ಲಿ ಶ್ರದ್ಧಾ ವಾಕರ್ (Shraddha Walkar Murder) ಕೊಲೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದಾದ ಬಳಿಕ ದೆಹಲಿಯಲ್ಲಿ ಸಾಲು ಸಾಲು ವಿಚಿತ್ರವಾದ ಕೊಲೆ ಪ್ರಕರಣಗಳು ಬೆಳಕಿಗೆ ಬರತೊಡಗಿವು. ಇದೀಗ ದೆಹಲಿಯ ಮಂಗಲ್ಪುರಿಯಲ್ಲಿ ಮತ್ತೊಂದು ಶಾಕಿಂಗ್ ಕೊಲೆ (Murder) ಪ್ರಕರಣ ಬೆಳಕಿಗೆ ಬಂದಿದೆ. ಮೂವರು ವ್ಯಕ್ತಿಗಳು ಮಹಿಳೆಯನ್ನು ಅಪಹರಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ, ಆ ಮಹಿಳೆಯ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣ ತಡವಾಗಿ ಪತ್ತೆಯಾಗಿದೆ.

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಬಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಶವ ಹೂತಿಟ್ಟಿರುವ ಬಗ್ಗೆ ಮುಬಿನ್ ಬಾಯಿ ಬಿಟ್ಟಿದ್ದ. ಮುಬಿನ್ ಜೊತೆ ರೆಹಾನ್ ಹಾಗೂ ಮತ್ತೊಬ್ಬ ಸಹಚರ ಸೇರಿ ಕೊಲೆ ಮಾಡಿದ್ದರು.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್​ಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಮೀನಾ ಅವರನ್ನು ಕೊಲೆ ಮಾಡಿದ ಆರೋಪಿಗಳು ಆಕೆಯ ಶವವನ್ನು ಹತ್ತಿರದ ಸ್ಥಳದಲ್ಲಿ ಹೂತಿಟ್ಟಿದ್ದರು. ಮುಬಿನ್​ನನ್ನು ಬಂಧಿಸಲಾಗಿದೆ. ಪೊಲೀಸರ ವಿಚಾರಣೆಯ ಸಮಯದಲ್ಲಿ ಆತ ಮಂಗಲ್ಪುರಿಯಲ್ಲಿ ಮೀನಾರನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾನೆ. ಕೊಲೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಸಿಗಬಾರದು ಎಂಬ ಕಾರಣಕ್ಕೆ ಆಕೆಯ ಶವವನ್ನು ಹೂತಿಟ್ಟಿದ್ದರು.

ಸುಮಾರು 10 ದಿನಗಳ ಹಿಂದೆ ಆ ಮಹಿಳೆಯನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಶವವನ್ನು ಪಡೆಯಲು ಪೊಲೀಸರು ನಂಗ್ಲೋಯ್‌ನಲ್ಲಿ ಸಮಾಧಿಯನ್ನು ಅಗೆದಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆಯನ್ನು ಇಂದು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು