AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2023 | 11:53 AM

Share

ನವದೆಹಲಿ: ದೆಹಲಿಯಲ್ಲಿ ಶ್ರದ್ಧಾ ವಾಕರ್ (Shraddha Walkar Murder) ಕೊಲೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದಾದ ಬಳಿಕ ದೆಹಲಿಯಲ್ಲಿ ಸಾಲು ಸಾಲು ವಿಚಿತ್ರವಾದ ಕೊಲೆ ಪ್ರಕರಣಗಳು ಬೆಳಕಿಗೆ ಬರತೊಡಗಿವು. ಇದೀಗ ದೆಹಲಿಯ ಮಂಗಲ್ಪುರಿಯಲ್ಲಿ ಮತ್ತೊಂದು ಶಾಕಿಂಗ್ ಕೊಲೆ (Murder) ಪ್ರಕರಣ ಬೆಳಕಿಗೆ ಬಂದಿದೆ. ಮೂವರು ವ್ಯಕ್ತಿಗಳು ಮಹಿಳೆಯನ್ನು ಅಪಹರಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ, ಆ ಮಹಿಳೆಯ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣ ತಡವಾಗಿ ಪತ್ತೆಯಾಗಿದೆ.

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಬಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಶವ ಹೂತಿಟ್ಟಿರುವ ಬಗ್ಗೆ ಮುಬಿನ್ ಬಾಯಿ ಬಿಟ್ಟಿದ್ದ. ಮುಬಿನ್ ಜೊತೆ ರೆಹಾನ್ ಹಾಗೂ ಮತ್ತೊಬ್ಬ ಸಹಚರ ಸೇರಿ ಕೊಲೆ ಮಾಡಿದ್ದರು.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್​ಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಮೀನಾ ಅವರನ್ನು ಕೊಲೆ ಮಾಡಿದ ಆರೋಪಿಗಳು ಆಕೆಯ ಶವವನ್ನು ಹತ್ತಿರದ ಸ್ಥಳದಲ್ಲಿ ಹೂತಿಟ್ಟಿದ್ದರು. ಮುಬಿನ್​ನನ್ನು ಬಂಧಿಸಲಾಗಿದೆ. ಪೊಲೀಸರ ವಿಚಾರಣೆಯ ಸಮಯದಲ್ಲಿ ಆತ ಮಂಗಲ್ಪುರಿಯಲ್ಲಿ ಮೀನಾರನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾನೆ. ಕೊಲೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಸಿಗಬಾರದು ಎಂಬ ಕಾರಣಕ್ಕೆ ಆಕೆಯ ಶವವನ್ನು ಹೂತಿಟ್ಟಿದ್ದರು.

ಸುಮಾರು 10 ದಿನಗಳ ಹಿಂದೆ ಆ ಮಹಿಳೆಯನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಶವವನ್ನು ಪಡೆಯಲು ಪೊಲೀಸರು ನಂಗ್ಲೋಯ್‌ನಲ್ಲಿ ಸಮಾಧಿಯನ್ನು ಅಗೆದಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆಯನ್ನು ಇಂದು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!