AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು.

Murder: ದೆಹಲಿಯಲ್ಲಿ ಮತ್ತೊಂದು ಬರ್ಬರ ಹತ್ಯೆ; ಮಹಿಳೆಯನ್ನು ಕೊಂದು, ಹೂತಿಟ್ಟ ಹಂತಕರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 12, 2023 | 11:53 AM

Share

ನವದೆಹಲಿ: ದೆಹಲಿಯಲ್ಲಿ ಶ್ರದ್ಧಾ ವಾಕರ್ (Shraddha Walkar Murder) ಕೊಲೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅದಾದ ಬಳಿಕ ದೆಹಲಿಯಲ್ಲಿ ಸಾಲು ಸಾಲು ವಿಚಿತ್ರವಾದ ಕೊಲೆ ಪ್ರಕರಣಗಳು ಬೆಳಕಿಗೆ ಬರತೊಡಗಿವು. ಇದೀಗ ದೆಹಲಿಯ ಮಂಗಲ್ಪುರಿಯಲ್ಲಿ ಮತ್ತೊಂದು ಶಾಕಿಂಗ್ ಕೊಲೆ (Murder) ಪ್ರಕರಣ ಬೆಳಕಿಗೆ ಬಂದಿದೆ. ಮೂವರು ವ್ಯಕ್ತಿಗಳು ಮಹಿಳೆಯನ್ನು ಅಪಹರಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ, ಆ ಮಹಿಳೆಯ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣ ತಡವಾಗಿ ಪತ್ತೆಯಾಗಿದೆ.

ಕೊಲೆಯಾದ ಮಹಿಳೆಯನ್ನು 54 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಮೀನಾ ಅವರ ಶವವನ್ನು ಹೂತಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಬಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಶವ ಹೂತಿಟ್ಟಿರುವ ಬಗ್ಗೆ ಮುಬಿನ್ ಬಾಯಿ ಬಿಟ್ಟಿದ್ದ. ಮುಬಿನ್ ಜೊತೆ ರೆಹಾನ್ ಹಾಗೂ ಮತ್ತೊಬ್ಬ ಸಹಚರ ಸೇರಿ ಕೊಲೆ ಮಾಡಿದ್ದರು.

ಇದನ್ನೂ ಓದಿ: ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಝಲ್​ಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ಮೀನಾ ಅವರನ್ನು ಕೊಲೆ ಮಾಡಿದ ಆರೋಪಿಗಳು ಆಕೆಯ ಶವವನ್ನು ಹತ್ತಿರದ ಸ್ಥಳದಲ್ಲಿ ಹೂತಿಟ್ಟಿದ್ದರು. ಮುಬಿನ್​ನನ್ನು ಬಂಧಿಸಲಾಗಿದೆ. ಪೊಲೀಸರ ವಿಚಾರಣೆಯ ಸಮಯದಲ್ಲಿ ಆತ ಮಂಗಲ್ಪುರಿಯಲ್ಲಿ ಮೀನಾರನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾನೆ. ಕೊಲೆ ಮಾಡಿದ ಬಗ್ಗೆ ಯಾವುದೇ ಸಾಕ್ಷಿ ಸಿಗಬಾರದು ಎಂಬ ಕಾರಣಕ್ಕೆ ಆಕೆಯ ಶವವನ್ನು ಹೂತಿಟ್ಟಿದ್ದರು.

ಸುಮಾರು 10 ದಿನಗಳ ಹಿಂದೆ ಆ ಮಹಿಳೆಯನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಶವವನ್ನು ಪಡೆಯಲು ಪೊಲೀಸರು ನಂಗ್ಲೋಯ್‌ನಲ್ಲಿ ಸಮಾಧಿಯನ್ನು ಅಗೆದಿದ್ದಾರೆ. ಆಕೆಯ ಮರಣೋತ್ತರ ಪರೀಕ್ಷೆಯನ್ನು ಇಂದು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ