AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡಂಬಿ ಫ್ಯಾಕ್ಟರಿ ಸಿಬ್ಬಂದಿ ಕೊಲೆ ಪ್ರಕರಣ; ನಾಪತ್ತೆಯಾಗಿದ್ದ ಡಿಎಂಕೆ ಸಂಸದ ಕೋರ್ಟ್​ನಲ್ಲಿ ಶರಣು

DMK MP Ramesh: ತಮಿಳುನಾಡಿನ ಪನ್ರುತಿಯಲ್ಲಿ ಗೋಡಂಬಿ ಸಂಸ್ಕರಣಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕೆ. ಗೋವಿಂದರಸು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಡಿಎಂಕೆ ಸಂಸದ ರಮೇಶ್ ನಾಪತ್ತೆಯಾಗಿದ್ದರು. ಅವರು ಇಂದು ಬೆಳಗ್ಗೆ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ.

ಗೋಡಂಬಿ ಫ್ಯಾಕ್ಟರಿ ಸಿಬ್ಬಂದಿ ಕೊಲೆ ಪ್ರಕರಣ; ನಾಪತ್ತೆಯಾಗಿದ್ದ ಡಿಎಂಕೆ ಸಂಸದ ಕೋರ್ಟ್​ನಲ್ಲಿ ಶರಣು
ಡಿಎಂಕೆ ಸಂಸದ ರಮೇಶ್
TV9 Web
| Updated By: ಸುಷ್ಮಾ ಚಕ್ರೆ|

Updated on:Oct 11, 2021 | 2:06 PM

Share

ಚೆನ್ನೈ: ತನ್ನ ಗೋಡಂಬಿ ಕಾರ್ಖಾನೆಯಲ್ಲಿ ನಡೆದ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ಹಾಗೂ ಡಿಎಂಕೆ ಸಂಸದ ಟಿಆರ್​ವಿ ರಮೇಶ್ ಇಂದು ಬೆಳಗ್ಗೆ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಈ ಕೊಲೆ ನಡೆದ ದಿನದಿಂದ ತಮಿಳುನಾಡಿನ ಡಿಎಂಕೆ ಸಂಸದ ಟಿಆರ್​ವಿ ರಮೇಶ್ ನಾಪತ್ತೆಯಾಗಿದ್ದರು. ತಮಿಳುನಾಡಿನ ಪನ್ರುತಿಯಲ್ಲಿ ಗೋಡಂಬಿ ಸಂಸ್ಕರಣಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕೆ. ಗೋವಿಂದರಸು ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಸಂಸದ ರಮೇಶ್ ಅವರನ್ನು ಸಿಬಿ-ಸಿಐಡಿ ಪೊಲೀಸರು ಹುಡುಕುತ್ತಿದ್ದರು. ಶನಿವಾರದಿಂದ ನಾಪತ್ತೆಯಾಗಿದ್ದ ಸಂಸದ ರಮೇಶ್ ಇಂದು ಬೆಳಗ್ಗೆ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸಿಬ್ಬಂದಿಗಳ ತಂಡ ಡಿಎಂಕೆ ಸಂಸದರ ನಿವಾಸಕ್ಕೆ ಕರೆ ಮಾಡಿತ್ತು. ಆದರೆ ಅವರು ಮನೆಯಲ್ಲಿರಲಿಲ್ಲ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಐದು ಜನರನ್ನು ಬಂಧಿಸಿದ್ದಾರೆ. ಈ ಕಾರ್ಖಾನೆಯ ಉದ್ಯೋಗಿಗಳಾದ ನಟರಾಜನ್, ಕಂದವೇಲ್, ಅಲ್ಲಪಿಚೈ, ವಿನೋದ್ ಮತ್ತು ಸುಂದರರಾಜನ್ ಅವರನ್ನು ನ್ಯಾಯಾಂಗ ಬಂಧನಕ್ಕಾಗಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮೊದಲು ಸ್ಥಳೀಯ ಪೊಲೀಸರು ಈ ಪ್ರಕರಣದ ತನಿಖೆ ನಡೆಸಿದ್ದು, ನಂತರ ಈ ಪ್ರಕರಣವನ್ನು ಸ್ಥಳೀಯ ಪೊಲೀಸರಿಂದ ಸಿಬಿ-ಸಿಐಡಿಗೆ ವರ್ಗಾಯಿಸಲಾಗಿತ್ತು.

ಇಂದು ಕೋರ್ಟ್​ನಲ್ಲಿ ಶರಣಾಗಿರುವ ಸಂಸದ ರಮೇಶ್, ನನ್ನ ವಿರುದ್ಧ ಮಾಡಲಾಗಿರುವ ಎಲ್ಲ ಆರೋಪಗಳೂ ಸುಳ್ಳು ಎಂದು ನಾನು ಸಾಬೀತು ಮಾಡುತ್ತೇನೆ. ನನ್ನ ಕಾರಣಕ್ಕೆ ನಮ್ಮ ಡಿಎಂಕೆ ಸರ್ಕಾರದ ವಿರುದ್ಧ ಯಾರೂ ಟೀಕೆ ಮಾಡಬಾರದು, ನಾನೇ ಅಪರಾಧಿ ಎಂಬ ತೀರ್ಮಾನಕ್ಕೆ ಬರಬಾರದು ಎಂಬ ಕಾರಣಕ್ಕೆ ನಾನು ಇಂದು ಶರಣಾಗಿದ್ದೇನೆ. ಇದರ ಅರ್ಥ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಕೆಲವು ಪಕ್ಷಗಳ ನಾಯಕರು ಈ ಘಟನೆಯನ್ನು ಮುಂದಿಟ್ಟುಕೊಂಡು ಡಿಎಂಕೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ನನಗೆ ಬೇಸರ ತರಿಸಿದೆ ಎಂದು ಹೇಳಿದ್ದಾರೆ.

ಸಂಸದ ರಮೇಶ್ ಅವರ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 60 ವರ್ಷದ ಗೋವಿಂದರಸು ಅವರ ಕೊಲೆ ಸೆಪ್ಟೆಂಬರ್ 20ರಂದು ನಡೆದಿತ್ತು. ಅವರು ಕಾರ್ಖಾನೆಯಿಂದ ಸುಮಾರು 8 ಕೆಜಿ ಗೋಡಂಬಿಯನ್ನು ಕದ್ದಿದ್ದಾರೆ ಎಂದು ಫ್ಯಾಕ್ಟರಿಯ ಸಿಬ್ಬಂದಿ ಆರೋಪಿಸಿದ್ದರು. ನಂತರ ಗೋವಿಂದರಸು ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಅಲ್ಲಿನ ಸಿಬ್ಬಂದಿ ಪೊಲೀಸ್ ಠಾಣೆಗೆ ಕರೆತಂದಿದ್ದರು. ಆದರೆ, ಅವರನ್ನು ಕುಡಲೇ ಆಸ್ಪತ್ರೆಗೆ ಸೇರಿಸಬೇಕು. ನಂತರ ವಿಚಾರಣೆ ಮಾಡುವುದಾಗಿ ಪೊಲೀಸರು ಹೇಳಿದರೂ ಆತನನ್ನು ಮತ್ತೆ ಗೋಡಂಬಿ ಫ್ಯಾಕ್ಟರಿಗೆ ಕರೆದುಕೊಂಡು ಹೋಗಿದ್ದ ಸಿಬ್ಬಂದಿ ಆತನಿಗೆ ಚಿಕಿತ್ಸೆ ಕೊಡಿಸಿರಲಿಲ್ಲ. ಕೊನೆಗೆ ಅವರ ಮೃತದೇಹ ಕಾರ್ಖಾನೆಯಲ್ಲಿ ಪತ್ತೆಯಾಗಿತ್ತು.

ಈ ಬಗ್ಗೆ ಗೋವಿಂದರಸು ಅವರ ಮಗ ಪೊಲೀಸರಿಗೆ ದೂರು ನೀಡಿದ್ದು, ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಗೋವಿಂದರಸು ಅವರನ್ನು ಆಸ್ಪತ್ರೆಗೆ ಸೇರಿಸದೆ ಫ್ಯಾಕ್ಟರಿಗೆ ಕರೆದುಕೊಂಡು ಹೋಗಿ ಹಿಂಸೆ ನೀಡಿದ್ದ ಸಂಸದ ರಮೇಶ್ ಅವರ ಆಪ್ತರನ್ನು ಹಾಗೂ ಅಲ್ಲಿನ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಗೋವಿಂದರಸು ಅವರ ಮೃತದೇಹದ ಮೇಲೆ ಗಾಯಗಳಾಗಿತ್ತು, ಅವರ ಕಣ್ಣು ಊದಿಕೊಂಡಿತ್ತು. ಬಟ್ಟೆಯ ಮೇಲೆ ರಕ್ತದ ಕಲೆಗಳಿದ್ದವು.

ಇದನ್ನೂ ಓದಿ: ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​

Viral Video: ಮರಿ ಆನೆಯನ್ನು ರಕ್ಷಿಸಿ ತಾಯಿಯ ಬಳಿ ಸೇರಿಸಿದ ತಮಿಳುನಾಡು ರಕ್ಷಣಾ ಸಿಬ್ಬಂದಿ; ಹೃದಯಸ್ಪರ್ಶಿ ವಿಡಿಯೋವಿದು

Published On - 2:02 pm, Mon, 11 October 21

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ