AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಕೊಲ್ಲಂನಲ್ಲಿ ದೋಣಿ ಮುಳುಗಿ 4 ಮೀನುಗಾರರು ಸಾವು; 12 ಜನರ ರಕ್ಷಣೆ

ಕೊಲ್ಲಂ ಕರಾವಳಿ ತೀರದಲ್ಲಿ ಮೀನು ಹಿಡಿಯಲು ಹೋಗಿದ್ದ ಮೀನುಗಾರರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿದ್ದು, ಈ ದುರಂತದಲ್ಲಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ.

ಕೇರಳದ ಕೊಲ್ಲಂನಲ್ಲಿ ದೋಣಿ ಮುಳುಗಿ 4 ಮೀನುಗಾರರು ಸಾವು; 12 ಜನರ ರಕ್ಷಣೆ
ಕೊಲ್ಲಂನಲ್ಲಿ ಮುಳುಗಿದ ಬೋಟ್
TV9 Web
| Edited By: |

Updated on:Sep 02, 2021 | 4:10 PM

Share

ಕೊಲ್ಲಂ: ಕೇರಳದ ಕೊಲ್ಲಂನ ಕರಾವಳಿ ತೀರದಲ್ಲಿ ದೋಣಿ ಮಗುಚಿದ ಪರಿಣಾಮ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದು, ಇನ್ನಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಮೀನು ಹಿಡಿಯಲು ಹೋಗಿದ್ದ ಮೀನುಗಾರರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿದ್ದು, ನಾಲ್ಕು ಮೈಲು ದೂರ ಕೊಚ್ಚಿಕೊಂಡು ಹೋಗಿತ್ತು. ಈ ದುರಂತದಲ್ಲಿ ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ಉಳಿದ 12 ಜನರನ್ನು ರಕ್ಷಿಸಿ, ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅವರಲ್ಲಿ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದೆ.

ಮೃತಪಟ್ಟ ಮೀನುಗಾರರನ್ನು ತಂಕಪ್ಪನ್, ಸುದೇವನ್, ಸುನಿಲ್ ದತ್, ಶ್ರೀಕುಮಾರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೇರಳದ ಅಲಪ್ಪುಳದ ನಿವಾಸಿಯಾಗಿದ್ದರು. ಸಮುದ್ರದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ದೋಣಿ ಮಗುಚಿತ್ತು. ಈ ವೇಳೆ ಮೀನು ಹಿಡಿಯುವ ಬಲೆ ಕೂಡ ಬೋಟ್​ನಲ್ಲಿ ಸಿಲುಕಿಕೊಂಡು ಈ ದುರಂತ ಸಂಭವಿಸಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮೀನು ಹಿಡಿದುಕೊಂಡು ಓಂಕಾರನ್ ಎಂಬ ಬೋಟ್​ನಲ್ಲಿ ವಾಪಾಸ್ ಬರುತ್ತಿದ್ದಾಗ ಬೋಟ್ ಹೊಯ್ದಾಡಲಾರಂಭಿಸಿತ್ತು. ಆ ಬೋಟ್​ನಲ್ಲಿ 16 ಜನರಿದ್ದರು. ಅವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಉಳಿದ 12 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಬೆಳಗ್ಗೆ 10 ಗಂಟೆ ವೇಳೆಗೆ ಮೃತದೇಹಗಳನ್ನು ಹುಡುಕಿ, ಹೊರಗೆ ತರಲಾಗಿದೆ.

ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಬೋಟ್ ಮುಳುಗಿ 9 ಮೀನುಗಾರರ ಸಾವು; ಇನ್ನೊಬ್ಬರು ನಾಪತ್ತೆ

ಬಿಹಾರದ ಗಂದಕ್ ನದಿಯಲ್ಲಿ ದೋಣಿ ಮುಳುಗಿ 5 ಜನ ಸಾವು, ಐವರು ನಾಪತ್ತೆ

(Four fishermen Dead after boat capsizes near Kollam coast, 12 rescued)

Published On - 4:09 pm, Thu, 2 September 21

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!