AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ

ಮೊಬೈಲ್​, ಟಿವಿ, ಇಂಟರ್ನೆಟ್​ ಬಳಕೆಯಿಂದಾಗಿ ಜನರು ಸಂಬಂಧವನ್ನೇ ಮರೆಯುತ್ತಿದ್ದಾರೆ. ಊಟ ಮಾಡುವಾಗಲೂ, ಮಲಗುವಾಗಲೂ, ಕೆಲಸದ ವೇಳೆಯಲ್ಲೂ, ಶಾಲೆ, ಕಾಲೇಜುಗಳಲ್ಲೂ ಮೊಬೈಲ್​ ಬಳಕೆ ವಿಪರೀತವಾಗಿದೆ. ಹೆಚ್ಚು ಮೊಬೈಲ್​ ಬಳಕೆ ಮಾಡಬೇಡ ಎಂದಿದ್ದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

ಹೆಚ್ಚಾಗಿ ಮೊಬೈಲ್​ ಬಳಸಬೇಡ ಎಂದು ತಿಳಿ ಹೇಳಿದ್ದಕ್ಕೆ ಅಣ್ಣನನ್ನೇ ಕೊಂದ ತಂಗಿ
ನಯನಾ ರಾಜೀವ್
|

Updated on: May 05, 2024 | 9:46 AM

Share

ಹೆಚ್ಚಾಗಿ ಮೊಬೈಲ್​ ಫೋನ್​ ಬಳಕೆ ಮಾಡಬೇಡ ಎಂದಿದ್ದಕ್ಕೆ ತಂಗಿಯೊಬ್ಬಳು ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. 14 ವರ್ಷದ ಬಾಲಕಿ ಮೊಬೈಲ್​ಗೆ ಅಡಿಕ್ಟ್​ ಆಗಿದ್ದಳು, ಹುಡುಗರೊಂದಿಗೆ ಹೆಚ್ಚು ಕಾಲ ಮಾತನಾಡುತ್ತಿದ್ದಳು, ಇದನ್ನು ಅರಿತ ಅಣ್ಣ ತಂಗಿಗೆ ಬುದ್ಧಿವಾದ ಹೇಳಿದ್ದ. ಇದಕ್ಕೆ ಕೋಪಗೊಂಡ ಬಾಲಕಿ ಅಣ್ಣನನ್ನು ಹತ್ಯೆ ಮಾಡಿದ್ದಾಳೆ.

ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ ಅಪರಾಧಕ್ಕಾಗಿ ಬಾಲಕಿಯನ್ನು ಬಂಧಿಸಲಾಗಿದೆ. ಘಟನೆಯ ಸಮಯದಲ್ಲಿ ಇತರ ಕುಟುಂಬ ಸದಸ್ಯರು ಕೆಲಸದ ಮೇಲೆ ಹೊರಗೆ ಹೋಗಿದ್ದರೆ ಬಾಲಕಿ ಮತ್ತು ಆಕೆಯ ಸಹೋದರ (18) ಮನೆಯಲ್ಲಿದ್ದರು ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಮೊಬೈಲ್ ಫೋನ್‌ನಲ್ಲಿ ಹುಡುಗರೊಂದಿಗೆ ಮಾತನಾಡುತ್ತೀಯ ಎಂದು ಬೈದಿದ್ದ, ಇನ್ನು ಮುಂದೆ ಫೋನ್ ಬಳಸದಂತೆ ತಿಳಿ ಹೇಳಿದ್ದ. ಬಳಿಕ ಅಣ್ಣ ಮಲಗಿದಾಗ ಕೊಡಲಿಯಿಂದ ಕುತ್ತಿಗೆಗೆ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂತರ ಬಾಲಕಿ ಸ್ನಾನ ಮಾಡಿ ತನ್ನ ಬಟ್ಟೆಯ ಮೇಲಿನ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿ, ತನ್ನ ಅಣ್ಣನನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ.

ಮತ್ತಷ್ಟು ಓದಿ: Crime News: ಬಾತ್​ರೂಂನಲ್ಲಿ ಹುಟ್ಟಿದ ಮಗುವನ್ನು ಕತ್ತು ಹಿಸುಕಿ ಕೊಂದ ತಾಯಿ!

ಪೊಲೀಸರ ವಿಚಾರಣೆ ವೇಳೆ ಆಕೆ ಆತನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು